ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ | ಬಿಟ್ ಕಾಯಿನ್ ಪ್ರಕರಣ: ದೂರುದಾರ ಕೈದಿಯ ಹೇಳಿಕೆ ದಾಖಲು

Published 9 ಜುಲೈ 2024, 16:38 IST
Last Updated 9 ಜುಲೈ 2024, 16:38 IST
ಅಕ್ಷರ ಗಾತ್ರ

ಬೆಳಗಾವಿ: ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನ ಹೇಳಿಕೆ ಪಡೆಯಲು, ಎಸ್.ಐ.ಟಿ‌ ತಂಡವು ಇಲ್ಲಿ‌ನ ಕೇಂದ್ರ ಕಾರಾಗೃಹಕ್ಕೆ ಭೇಟಿ‌ ನೀಡಿತು ಎಂದು ಮೂಲಗಳು ಖಚಿತಪಡಿಸಿವೆ.

'ಈ ಹಗರಣದಲ್ಲಿ ಬಂದಿಖಾನೆ ಇಲಾಖೆ ಡಿಐಜಿ ಟಿ.ಪಿ. ಶೇಷ ಭಾಗಿಯಾದ ಬಗ್ಗೆ ನಾಗೇಂದ್ರ ಅಲಿಯಾಸ್ ನಾಗ ಎಂಬ ಕೈದಿ ಎಡಿಜಿಪಿ ಅವರಿಗೆ ಜೂನ್ 26ರಂದು ದೂರು ನೀಡಿದ್ದ.‌ ಈ ಕೈದಿ ಈಗ ಇಲ್ಲಿನ‌ ಹಿಂಡಲಗಾ ಜೈಲಿನಲ್ಲಿದ್ದ ಕಾರಣ ತನಿಖಾಧಿಕಾರಿಗಳು ವಿಚಾರಣೆ ನಡೆಸಿದರು.

ದೂರಿನ ಅರ್ಜಿ ಇಟ್ಟುಕೊಂಡು ಮೂರು ಗಂಟೆ ಕೈದಿಯ ವಿಚಾರಣೆ ನಡೆಸಿದ ತಂಡವು ಹೇಳಿಕೆ ದಾಖಲಿಸಿಕೊಂಡಿತು.

'ಶೇಷ ಅವರು ಹ್ಯಾಕರ್ ಶ್ರೀಕೆಗೆ ಲ್ಯಾಪ್‌ಟಾಪ್ ನೀಡಿ ₹20 ಕೋಟಿ ಮೌಲ್ಯದ ಬಿಟ್‌ಕಾಯಿನ್ ವರ್ಗಾವಣೆ ಮಾಡಿಸಿದ್ದಾರೆ" ಎಂಬುದು ನಾಗೇಂದ್ರ ದೂರು‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT