<p><strong>ಸತ್ತಿಗೇರಿ</strong>: ‘ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲ್ಲಿಸಿ, ನರೇಂದ್ರ ಮೋದಿ ಅವರನ್ನೇ ಪ್ರಧಾನಿಯಾಗಿ ಮುಂದುವರಿಸಲು ಕಾರ್ಯಕರ್ತರು ಶ್ರಮವಹಿಸಿ ದುಡಿಯಬೇಕು’ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಹೇಳಿದರು.</p>.<p>ಗ್ರಾಮದ ದಲಿತ ಕಾಲೊನಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಮತ್ತೊಮ್ಮೆ ಮೋದಿ ಗೋಡೆ ಬರಹ ಅಭಿಯಾನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ನಿಲುವು ಖಂಡನೀಯ. ಈ ಬಾರಿ ಚುನಾವಣೆಯಲ್ಲಿ ಜನರು ಕಮಲಕ್ಕೆ ಮತ ನೀಡಬೇಕು’ ಎಂದು ಕೋರಿದರು.</p>.<p>ಪಕ್ಷದ ಮುಖಂಡ ವಿರೂಪಾಕ್ಷ ಮಾಮನಿ ಮಾತನಾಡಿದರು. ಜಿಲ್ಲಾ ಮಾಧ್ಯಮ ಸಂಚಾಲಕ ಎಫ್.ಎಸ್.ಸಿದ್ದನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಯಲ್ಲಮ್ಮ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಜಗದೀಶ ಕೌಜಗೇರಿ, ಗುರು ವಾಲಿ, ಗೌಡಪ್ಪ ಸವದತ್ತಿ, ಮಹಾಂತೇಶ ಗೋಡಿ, ಎಂ.ಸಿ.ಜಯಪ್ರಕಾಶ, ಸಂದೀಪ ದೇಶಪಾಂಡೆ, ನಿತಿನ ಚೌಗಲೆ, ಸಂತೋಷ ದೇಶನೂರ, ಯಲ್ಲೇಶ ಕೋಲಕಾರ, ಪರ್ವತಗೌಡ ಪಾಟೀಲ, ಬಸನಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸತ್ತಿಗೇರಿ</strong>: ‘ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲ್ಲಿಸಿ, ನರೇಂದ್ರ ಮೋದಿ ಅವರನ್ನೇ ಪ್ರಧಾನಿಯಾಗಿ ಮುಂದುವರಿಸಲು ಕಾರ್ಯಕರ್ತರು ಶ್ರಮವಹಿಸಿ ದುಡಿಯಬೇಕು’ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಹೇಳಿದರು.</p>.<p>ಗ್ರಾಮದ ದಲಿತ ಕಾಲೊನಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಮತ್ತೊಮ್ಮೆ ಮೋದಿ ಗೋಡೆ ಬರಹ ಅಭಿಯಾನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ನಿಲುವು ಖಂಡನೀಯ. ಈ ಬಾರಿ ಚುನಾವಣೆಯಲ್ಲಿ ಜನರು ಕಮಲಕ್ಕೆ ಮತ ನೀಡಬೇಕು’ ಎಂದು ಕೋರಿದರು.</p>.<p>ಪಕ್ಷದ ಮುಖಂಡ ವಿರೂಪಾಕ್ಷ ಮಾಮನಿ ಮಾತನಾಡಿದರು. ಜಿಲ್ಲಾ ಮಾಧ್ಯಮ ಸಂಚಾಲಕ ಎಫ್.ಎಸ್.ಸಿದ್ದನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಯಲ್ಲಮ್ಮ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಜಗದೀಶ ಕೌಜಗೇರಿ, ಗುರು ವಾಲಿ, ಗೌಡಪ್ಪ ಸವದತ್ತಿ, ಮಹಾಂತೇಶ ಗೋಡಿ, ಎಂ.ಸಿ.ಜಯಪ್ರಕಾಶ, ಸಂದೀಪ ದೇಶಪಾಂಡೆ, ನಿತಿನ ಚೌಗಲೆ, ಸಂತೋಷ ದೇಶನೂರ, ಯಲ್ಲೇಶ ಕೋಲಕಾರ, ಪರ್ವತಗೌಡ ಪಾಟೀಲ, ಬಸನಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>