<p><strong>ಬೆಳಗಾವಿ</strong>: ಇಲ್ಲಿನ ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ ದುಂಡಪ್ಪ ಪದ್ಮಣ್ಣವರ (47) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಮೂವರನ್ನು ಬಂಧಿಸಿ, ನ್ಯಾಯಂಗ ವಶಕ್ಕೆ ಒಪ್ಪಿಸಿದ್ದಾರೆ.</p><p>ಮುಖ್ಯ ಆರೋಪಿ, ಉದ್ಯಮಿಯ ಪತ್ನಿ ಉಮಾ (41), ಅವರ ಫೇಸ್ಬುಕ್ ಸ್ನೇಹಿತ, ಕೊಡಗು ಜಿಲ್ಲೆಯ ಶನಿವಾರಸಂತೆ ಗ್ರಾಮದ ಶೋಭಿತ್ ಗೌಡ (30) ಮತ್ತು ಪವನ್ (27) ಬಂಧಿತರು. ಮನೆಗೆಲಸದವರಾದ ನಂದಾ ಕುರಿಯಾ, ಪ್ರಕಾಶ ಕುರಿಯಾ ಅವರ ಕೈವಾಡದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿಲ್ಲ.</p><p>ತಮ್ಮ ತಂದೆ ಹೃದಯಾಘಾತದಿಂದ ಮೃತಪಟ್ಟಿಲ್ಲ. ಅವರ ಕೊಲೆಯಾದ ಶಂಕೆ ಇದೆ ಎಂದು ಸಂತೋಷ ಅವರ ಪುತ್ರಿ ಸಂಜನಾ ದೂರು ನೀಡಿದ್ದರು. ಅಕ್ಟೋಬರ್ 9ರಂದು ಸಂತೋಷ ಮೃತಪಟ್ಟಿದ್ದರು. ಅಕ್ಟೋಬರ್ 10ರಂದು ಹೂಳಲಾಗಿದ್ದ ಅವರ ಶವವನ್ನು ಬುಧವಾರ ಹೊರತೆಗೆದು ತನಿಖೆ ಕೈಗೊಳ್ಳಲಾಗಿದೆ.</p><p>‘ಸಂಶಯಾಸ್ಪದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸಂತೋಷ ಅವರ ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಕೈ ಸೇರಿಲ್ಲ. ಅದು ಬಂದ ಬಳಿಕ ಪ್ರಕರಣದ ಸ್ಪಷ್ಟ ರೂಪ ತಿಳಿಯಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.ಬೆಳಗಾವಿ: ಉದ್ಯಮಿ ಕೊಲೆ ಮಾಡಿಸಿದ ಪತ್ನಿ? ಪುತ್ರಿಯಿಂದಲೇ ತಾಯಿ ವಿರುದ್ಧ ದೂರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ ದುಂಡಪ್ಪ ಪದ್ಮಣ್ಣವರ (47) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಮೂವರನ್ನು ಬಂಧಿಸಿ, ನ್ಯಾಯಂಗ ವಶಕ್ಕೆ ಒಪ್ಪಿಸಿದ್ದಾರೆ.</p><p>ಮುಖ್ಯ ಆರೋಪಿ, ಉದ್ಯಮಿಯ ಪತ್ನಿ ಉಮಾ (41), ಅವರ ಫೇಸ್ಬುಕ್ ಸ್ನೇಹಿತ, ಕೊಡಗು ಜಿಲ್ಲೆಯ ಶನಿವಾರಸಂತೆ ಗ್ರಾಮದ ಶೋಭಿತ್ ಗೌಡ (30) ಮತ್ತು ಪವನ್ (27) ಬಂಧಿತರು. ಮನೆಗೆಲಸದವರಾದ ನಂದಾ ಕುರಿಯಾ, ಪ್ರಕಾಶ ಕುರಿಯಾ ಅವರ ಕೈವಾಡದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿಲ್ಲ.</p><p>ತಮ್ಮ ತಂದೆ ಹೃದಯಾಘಾತದಿಂದ ಮೃತಪಟ್ಟಿಲ್ಲ. ಅವರ ಕೊಲೆಯಾದ ಶಂಕೆ ಇದೆ ಎಂದು ಸಂತೋಷ ಅವರ ಪುತ್ರಿ ಸಂಜನಾ ದೂರು ನೀಡಿದ್ದರು. ಅಕ್ಟೋಬರ್ 9ರಂದು ಸಂತೋಷ ಮೃತಪಟ್ಟಿದ್ದರು. ಅಕ್ಟೋಬರ್ 10ರಂದು ಹೂಳಲಾಗಿದ್ದ ಅವರ ಶವವನ್ನು ಬುಧವಾರ ಹೊರತೆಗೆದು ತನಿಖೆ ಕೈಗೊಳ್ಳಲಾಗಿದೆ.</p><p>‘ಸಂಶಯಾಸ್ಪದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸಂತೋಷ ಅವರ ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಕೈ ಸೇರಿಲ್ಲ. ಅದು ಬಂದ ಬಳಿಕ ಪ್ರಕರಣದ ಸ್ಪಷ್ಟ ರೂಪ ತಿಳಿಯಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.ಬೆಳಗಾವಿ: ಉದ್ಯಮಿ ಕೊಲೆ ಮಾಡಿಸಿದ ಪತ್ನಿ? ಪುತ್ರಿಯಿಂದಲೇ ತಾಯಿ ವಿರುದ್ಧ ದೂರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>