<p><strong>ಬೆಳಗಾವಿ</strong>: ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಈಚೆಗೆ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕಾಕತಿ ಸಿಪಿಐ ವಿಜಯಕುಮಾರ್ ಸಿನ್ನೂರ ಅವರನ್ನು ಅಮಾನತು ಮಾಡಲಾಗಿದೆ.</p>.<p>ಅಪರಾಧ ಕೃತ್ಯ ತಡೆಯುವಲ್ಲಿ ಕರ್ತವ್ಯಲೋಪ ಮಾಡಿದ ಆರೋಪದ ಮೇಲೆ, ಹೈಕೋರ್ಟ್ ನಿರ್ದೇಶನದಂತೆ, ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ರಾಮಪ್ಪ ಈ ಅಮಾನತು ಆದೇಶ ಹೊರಡಿಸಿದ್ದಾರೆ.</p>.<p>ಸಿಪಿಐ ಅಮಾನತು: ಇನ್ನೊಂದು ಪ್ರಕರಣದಲ್ಲಿ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಕೊಲೆಗೆ ಪ್ರತಿಕಾರವಾಗಿ ರೌಡಿಶೀಟರ್ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ್ದು ಕಂಡುಬಂದಿದ್ದರಿಂದ ಸಿಪಿಐ ಮಹಾಂತೇಶ ಹೊಸಪೇಟ ಅವರನ್ನು ಎಸ್ಪಿ ಡಾ.ಭೀಮಾಶಂಕರ ಗುಳೇದ ಅವರು ಅಮಾನತು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಈಚೆಗೆ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕಾಕತಿ ಸಿಪಿಐ ವಿಜಯಕುಮಾರ್ ಸಿನ್ನೂರ ಅವರನ್ನು ಅಮಾನತು ಮಾಡಲಾಗಿದೆ.</p>.<p>ಅಪರಾಧ ಕೃತ್ಯ ತಡೆಯುವಲ್ಲಿ ಕರ್ತವ್ಯಲೋಪ ಮಾಡಿದ ಆರೋಪದ ಮೇಲೆ, ಹೈಕೋರ್ಟ್ ನಿರ್ದೇಶನದಂತೆ, ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ರಾಮಪ್ಪ ಈ ಅಮಾನತು ಆದೇಶ ಹೊರಡಿಸಿದ್ದಾರೆ.</p>.<p>ಸಿಪಿಐ ಅಮಾನತು: ಇನ್ನೊಂದು ಪ್ರಕರಣದಲ್ಲಿ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಕೊಲೆಗೆ ಪ್ರತಿಕಾರವಾಗಿ ರೌಡಿಶೀಟರ್ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ್ದು ಕಂಡುಬಂದಿದ್ದರಿಂದ ಸಿಪಿಐ ಮಹಾಂತೇಶ ಹೊಸಪೇಟ ಅವರನ್ನು ಎಸ್ಪಿ ಡಾ.ಭೀಮಾಶಂಕರ ಗುಳೇದ ಅವರು ಅಮಾನತು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>