<p><strong>ಕಾಗವಾಡ:</strong> ಪ್ರತಿಯೊಬ್ಬರು ಮಾತೃಭಾಷಾಭಿಮಾನ ಹೊಂದಿರಬೇಕು. ಆದರೆ ಇತರ ಭಾಷೆಗಳನ್ನು ದ್ವೇಷಿಸಬಾರದು. ಎಲ್ಲರೂ ಸೇರಿ ಕರ್ನಾಟಕ ರಾಜೋತ್ಸವವನ್ನು ಅದ್ದೂರಿಯಾಗಿ ಆಚರಿಸೋಣ. ಕರಾಳ ದಿನಕ್ಕೆ ಅವಕಾಶ ಇಲ್ಲ ಎಂದು ತಹಶೀಲ್ದಾರ್ ರಾಜೇಶ ಬುರ್ಲಿ ಹೇಳಿದರು.</p>.<p>ಶುಕ್ರವಾರ ತಾಲ್ಲೂಕಿನ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಂಗಸೂಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸುವ ಕುರಿತು ನಡೆದ ಶಾಂತಿ ಪಾಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಮರಾಠಿ ಭಾಷಿಕರೇ ಹೆಚ್ಚಾಗಿರುವ ಮಂಗಸೂಳಿ ಗ್ರಾಮದಲ್ಲಿ ಕಳೆದ ಅನೇಕ ವರ್ಷಗಳಿಂದ ನ.1 ರಂದು ಕರಾಳ ದಿನ ಆಚರಿಸುತ್ತಾ ಬರಲಾಗುತ್ತಿತ್ತು. ನಾನು ಇಲ್ಲಿಗೆ ಬಂದ ಮೇಲೆ ಇಲ್ಲಿಯ ಜನರನ್ನು ವಿಸ್ವಾಸಕ್ಕೆ ತೆಗೆದುಕೊಂಡು ಸತತ ನಾಲ್ಕು ವರ್ಷಗಳಿಂದ ಶಾಂತಿಯುತವಾಗಿ ರಾಜ್ಯೋತ್ಸವವನ್ನು ಆಚರಿಸುತ್ತ ಬಂದಿದ್ದೇವೆ. ಅದರಂತೆ ಈ ವರ್ಷವೂ ಕೂಡ ಅದ್ದೂರಿಯಾಗಿ ರಾಜ್ಯೋತ್ಸವ ಆಚರಿಸುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು.</p>.<p>ಪಿಎಸ್ಐ ಜಿ.ಜಿ. ಬಿರಾದರ ಮಾತನಾಡಿ, ಕರ್ನಾಟಕ ರಾಜ್ಯೋತ್ಸವ ಆಚರಣೆ ವೇಳೆ ಸರ್ಕಾರದ ನಿಯಮಾವಳಿಗಳ ಉಲ್ಲಘಂನೆ ಮಾಡಿದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ವೇಳೆ ಮುಖಂಡ ಸಂಜಯ ತಳವಳಕರ ಸೇರಿದಂತೆ ಅನೇಕರು ಮಾತನಾಡಿದರು.</p>.<p>ಈ ಸಮಯದಲ್ಲಿ ಗ್ರಾ.ಪಂ.ಅಧ್ಯಕ್ಷ ಬಾಳು ಭಜಂತ್ರಿ, ಜಯಸಿಂಗ ಪಾಟೀಲ, ಪಿಡಿಒ ಸಂಜೀವ ಸೂರ್ಯವಂಶಿ, ಗ್ರಾಮ ಲೆಕ್ಕಾಧಿಕಾರಿ ಪರಾಗ ಕಾಂಬಳೆ, ಕರವೇ ಅಧ್ಯಕ್ಷ ದತ್ತಾತ್ರೇಯ ಪೂಜಾರಿ, ಮುಕುಂದ ಪೂಜಾರಿ, ಪ್ರಮೋದ ಪೂಜಾರಿ, ಬಾಬಾಸಾಹೇಬ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಗವಾಡ:</strong> ಪ್ರತಿಯೊಬ್ಬರು ಮಾತೃಭಾಷಾಭಿಮಾನ ಹೊಂದಿರಬೇಕು. ಆದರೆ ಇತರ ಭಾಷೆಗಳನ್ನು ದ್ವೇಷಿಸಬಾರದು. ಎಲ್ಲರೂ ಸೇರಿ ಕರ್ನಾಟಕ ರಾಜೋತ್ಸವವನ್ನು ಅದ್ದೂರಿಯಾಗಿ ಆಚರಿಸೋಣ. ಕರಾಳ ದಿನಕ್ಕೆ ಅವಕಾಶ ಇಲ್ಲ ಎಂದು ತಹಶೀಲ್ದಾರ್ ರಾಜೇಶ ಬುರ್ಲಿ ಹೇಳಿದರು.</p>.<p>ಶುಕ್ರವಾರ ತಾಲ್ಲೂಕಿನ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಂಗಸೂಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸುವ ಕುರಿತು ನಡೆದ ಶಾಂತಿ ಪಾಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಮರಾಠಿ ಭಾಷಿಕರೇ ಹೆಚ್ಚಾಗಿರುವ ಮಂಗಸೂಳಿ ಗ್ರಾಮದಲ್ಲಿ ಕಳೆದ ಅನೇಕ ವರ್ಷಗಳಿಂದ ನ.1 ರಂದು ಕರಾಳ ದಿನ ಆಚರಿಸುತ್ತಾ ಬರಲಾಗುತ್ತಿತ್ತು. ನಾನು ಇಲ್ಲಿಗೆ ಬಂದ ಮೇಲೆ ಇಲ್ಲಿಯ ಜನರನ್ನು ವಿಸ್ವಾಸಕ್ಕೆ ತೆಗೆದುಕೊಂಡು ಸತತ ನಾಲ್ಕು ವರ್ಷಗಳಿಂದ ಶಾಂತಿಯುತವಾಗಿ ರಾಜ್ಯೋತ್ಸವವನ್ನು ಆಚರಿಸುತ್ತ ಬಂದಿದ್ದೇವೆ. ಅದರಂತೆ ಈ ವರ್ಷವೂ ಕೂಡ ಅದ್ದೂರಿಯಾಗಿ ರಾಜ್ಯೋತ್ಸವ ಆಚರಿಸುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು.</p>.<p>ಪಿಎಸ್ಐ ಜಿ.ಜಿ. ಬಿರಾದರ ಮಾತನಾಡಿ, ಕರ್ನಾಟಕ ರಾಜ್ಯೋತ್ಸವ ಆಚರಣೆ ವೇಳೆ ಸರ್ಕಾರದ ನಿಯಮಾವಳಿಗಳ ಉಲ್ಲಘಂನೆ ಮಾಡಿದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ವೇಳೆ ಮುಖಂಡ ಸಂಜಯ ತಳವಳಕರ ಸೇರಿದಂತೆ ಅನೇಕರು ಮಾತನಾಡಿದರು.</p>.<p>ಈ ಸಮಯದಲ್ಲಿ ಗ್ರಾ.ಪಂ.ಅಧ್ಯಕ್ಷ ಬಾಳು ಭಜಂತ್ರಿ, ಜಯಸಿಂಗ ಪಾಟೀಲ, ಪಿಡಿಒ ಸಂಜೀವ ಸೂರ್ಯವಂಶಿ, ಗ್ರಾಮ ಲೆಕ್ಕಾಧಿಕಾರಿ ಪರಾಗ ಕಾಂಬಳೆ, ಕರವೇ ಅಧ್ಯಕ್ಷ ದತ್ತಾತ್ರೇಯ ಪೂಜಾರಿ, ಮುಕುಂದ ಪೂಜಾರಿ, ಪ್ರಮೋದ ಪೂಜಾರಿ, ಬಾಬಾಸಾಹೇಬ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>