<p><strong>ಬೈಲಹೊಂಗಲ:</strong> ನೂತನವಾಗಿ ಘೋಷಣೆ ಮಾಡಿರುವ ನದಾಫ-ಪಿಂಜಾರ ಹಾಗೂ ಇತರೆ 13 ಜಾತಿಗಳ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡುವಂತೆ ಒತ್ತಾಯಿಸಿ ನದಾಫ, ಪಿಂಜಾರ ಸಮಾಜ ತಾಲ್ಲೂಕು ಘಟಕದ ಸದಸ್ಯರು ಶಿರಸ್ಥೇದಾರ ರಾಘವೇಂದ್ರ ಪೂಜಾರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ನದಾಫ-ಪಿಂಜಾರ ತಾಲ್ಲೂಕು ಘಟಕದ ಅಧ್ಯಕ್ಷ ಅಬ್ದುಲಕಲಾಮ ಆಜಾದ ನದಾಫ ಮಾತನಾಡಿ, ರಾಜ್ಯದಲ್ಲಿ 22ಲಕ್ಷಕ್ಕೂ ಅಧಿಕ ಸಂಖ್ಯೆ ಹೊಂದಿರುವ ಪಿಂಜಾರ,ನದಾಫ ಜನಾಂಗವು ಸಾಮಾಜಿಕ,ಔದ್ಯೋಗಿಕ, ಶೈಕ್ಷಣಿಕ,ರಾಜಕೀಯ ಕ್ಷೇತ್ರ ಸೇರಿದಂತೆ ಅತ್ಯಂತ ಶೋಷಣೆ ಯಿಂದ ನಲುಗುತ್ತಿದೆ. ಪ್ರವರ್ಗ-1 ಮೀಸಲಾತಿಯಡಿ ಅಲ್ಪಸಂಖ್ಯಾತ ಹಿಂದುಳಿದ ವರ್ಗದ ಯೋಜನೆಯಡಿ ಸೌಲಭ್ಯಗಳನ್ನು ನೀಡಲು ಸರ್ಕಾರದ ಆದೇಶವಿದ್ದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ.</p>.<p>ನದಾಪ್ ಪಿಂಜಾರ ಸಮಾಜವು ಅಲ್ಪಸಂಖ್ಯಾತ ಪಂಗಡ ದಲ್ಲಿನ ಪ್ರವರ್ಗ 1 ಮೀಸಲಾತಿ ಹೊಂದಿದ್ದು ಸರ್ಕಾರ ನಮ್ಮ ಸಮಾಜದ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಹೊಂದಲು ನಿಗಮಕ್ಕೆ ಅನುಧಾನ ನೀಡಬೇಕು. ನಮ್ಮ ಬೇಡಿಕೆಗೆ ಸ್ಪಂದಿಸದೇ ಇದ್ದಲ್ಲಿ ಬಹಿರಂಗವಾಗಿ ಪ್ರತಿಭಟನೆ, ಧರಣಿ ನಡೆಸಲಾಗುವದು ಎಂದು ಮನವಿ ಪತ್ರದಲ್ಲಿ ಎಚ್ಚರಿಸಿದರು.</p>.<p>ಫಕೃಸಾಬ ಹಳೇಮನಿ, ಸತ್ತಾರ ಅಹಮದ ನದಾಫ, ಬುಡ್ಡೆಸಾಬ ಮದಲಮಟ್ಟಿ, ಇರ್ಷಾದ ಪಾಟೀಲ, ಮಲ್ಲಿಕ ಕುಸಲಾಪುರ, ಸಾಜಿದ ಬಾಬಣ್ಣವರ, ಶೌಕತ ಬುಡ್ರಕಟ್ಟಿ, ಮಕ್ತುಮ ನದಾಫ, ನಬಿಸಾಬ ನದಾಫ, ಎನ್.ಎ. ನದಾಫ, ಫಕೃಸಾಬ ಕುಸಲಾಪುರ, ಅನ್ವರ ಮದಲಮಟ್ಟಿ, ರಫೀಕ ನದಾಫ, ಮೈನು ನದಾಫ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ:</strong> ನೂತನವಾಗಿ ಘೋಷಣೆ ಮಾಡಿರುವ ನದಾಫ-ಪಿಂಜಾರ ಹಾಗೂ ಇತರೆ 13 ಜಾತಿಗಳ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡುವಂತೆ ಒತ್ತಾಯಿಸಿ ನದಾಫ, ಪಿಂಜಾರ ಸಮಾಜ ತಾಲ್ಲೂಕು ಘಟಕದ ಸದಸ್ಯರು ಶಿರಸ್ಥೇದಾರ ರಾಘವೇಂದ್ರ ಪೂಜಾರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ನದಾಫ-ಪಿಂಜಾರ ತಾಲ್ಲೂಕು ಘಟಕದ ಅಧ್ಯಕ್ಷ ಅಬ್ದುಲಕಲಾಮ ಆಜಾದ ನದಾಫ ಮಾತನಾಡಿ, ರಾಜ್ಯದಲ್ಲಿ 22ಲಕ್ಷಕ್ಕೂ ಅಧಿಕ ಸಂಖ್ಯೆ ಹೊಂದಿರುವ ಪಿಂಜಾರ,ನದಾಫ ಜನಾಂಗವು ಸಾಮಾಜಿಕ,ಔದ್ಯೋಗಿಕ, ಶೈಕ್ಷಣಿಕ,ರಾಜಕೀಯ ಕ್ಷೇತ್ರ ಸೇರಿದಂತೆ ಅತ್ಯಂತ ಶೋಷಣೆ ಯಿಂದ ನಲುಗುತ್ತಿದೆ. ಪ್ರವರ್ಗ-1 ಮೀಸಲಾತಿಯಡಿ ಅಲ್ಪಸಂಖ್ಯಾತ ಹಿಂದುಳಿದ ವರ್ಗದ ಯೋಜನೆಯಡಿ ಸೌಲಭ್ಯಗಳನ್ನು ನೀಡಲು ಸರ್ಕಾರದ ಆದೇಶವಿದ್ದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ.</p>.<p>ನದಾಪ್ ಪಿಂಜಾರ ಸಮಾಜವು ಅಲ್ಪಸಂಖ್ಯಾತ ಪಂಗಡ ದಲ್ಲಿನ ಪ್ರವರ್ಗ 1 ಮೀಸಲಾತಿ ಹೊಂದಿದ್ದು ಸರ್ಕಾರ ನಮ್ಮ ಸಮಾಜದ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಹೊಂದಲು ನಿಗಮಕ್ಕೆ ಅನುಧಾನ ನೀಡಬೇಕು. ನಮ್ಮ ಬೇಡಿಕೆಗೆ ಸ್ಪಂದಿಸದೇ ಇದ್ದಲ್ಲಿ ಬಹಿರಂಗವಾಗಿ ಪ್ರತಿಭಟನೆ, ಧರಣಿ ನಡೆಸಲಾಗುವದು ಎಂದು ಮನವಿ ಪತ್ರದಲ್ಲಿ ಎಚ್ಚರಿಸಿದರು.</p>.<p>ಫಕೃಸಾಬ ಹಳೇಮನಿ, ಸತ್ತಾರ ಅಹಮದ ನದಾಫ, ಬುಡ್ಡೆಸಾಬ ಮದಲಮಟ್ಟಿ, ಇರ್ಷಾದ ಪಾಟೀಲ, ಮಲ್ಲಿಕ ಕುಸಲಾಪುರ, ಸಾಜಿದ ಬಾಬಣ್ಣವರ, ಶೌಕತ ಬುಡ್ರಕಟ್ಟಿ, ಮಕ್ತುಮ ನದಾಫ, ನಬಿಸಾಬ ನದಾಫ, ಎನ್.ಎ. ನದಾಫ, ಫಕೃಸಾಬ ಕುಸಲಾಪುರ, ಅನ್ವರ ಮದಲಮಟ್ಟಿ, ರಫೀಕ ನದಾಫ, ಮೈನು ನದಾಫ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>