<p><strong>ಮೂಡಲಗಿ:</strong> ‘ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ಪಂಚ ಸದಸ್ಯ ಸಾಂವಿಧಾನಿಕ ಪೀಠ ಎತ್ತಿ ಹಿಡಿಯುವ ಮೂಲಕ ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ಸಾಬೀತಾಗಿದೆ’ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.</p>.<p>ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ಅವರು, ಸೋಮವಾರ ಪತ್ರಿಕಾ ಹೇಳಿಕೆ ನೀಡಿ, ‘ದೇಶದ ಸಮಗ್ರತೆ, ಅಖಂಡತೆಗೆ ಧಕ್ಕೆಯಾಗಿದ್ದ 370-ವಿಶೇಷ ಸ್ಥಾನಮಾನ ರದ್ದು ಮಾಡಲು ಜನಸಂಘದ ನಾಯಕ ಶ್ಯಾಮಾ ಪ್ರಸಾದ್ ಮುಖರ್ಜಿಯವರು ಪ್ರಯತ್ನ ಆರಂಭಿಸಿದ್ದರು. 2019ರ ಆಗಸ್ಟ್ 6 ರಂದು ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರವು ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿ, ಶ್ಯಾಮಾ ಪ್ರಸಾದ್ ಮುಖರ್ಜಿಯವರ ಆ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ ಶಾ ಸಾಕಾರಗೊಳಿಸಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>2024ರ ಸೆಪ್ಟೆಂಬರ್ 30ರ ಒಳಗಡೆ ವಿಧಾನಸಭಾ ಚುನಾವಣೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚಿಸಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖನ ಸರ್ವತೋಮುಖ ಅಭಿವೃದ್ಧಿ ಹಾಗೂ ಭಾರತದ ಏಕತೆಯ ದೃಷ್ಟಿಯಿಂದ ಇದು ಅತ್ಯಂತ ಮಹತ್ವದ ತೀರ್ಮಾನ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ:</strong> ‘ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ಪಂಚ ಸದಸ್ಯ ಸಾಂವಿಧಾನಿಕ ಪೀಠ ಎತ್ತಿ ಹಿಡಿಯುವ ಮೂಲಕ ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ಸಾಬೀತಾಗಿದೆ’ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.</p>.<p>ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ಅವರು, ಸೋಮವಾರ ಪತ್ರಿಕಾ ಹೇಳಿಕೆ ನೀಡಿ, ‘ದೇಶದ ಸಮಗ್ರತೆ, ಅಖಂಡತೆಗೆ ಧಕ್ಕೆಯಾಗಿದ್ದ 370-ವಿಶೇಷ ಸ್ಥಾನಮಾನ ರದ್ದು ಮಾಡಲು ಜನಸಂಘದ ನಾಯಕ ಶ್ಯಾಮಾ ಪ್ರಸಾದ್ ಮುಖರ್ಜಿಯವರು ಪ್ರಯತ್ನ ಆರಂಭಿಸಿದ್ದರು. 2019ರ ಆಗಸ್ಟ್ 6 ರಂದು ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರವು ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿ, ಶ್ಯಾಮಾ ಪ್ರಸಾದ್ ಮುಖರ್ಜಿಯವರ ಆ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ ಶಾ ಸಾಕಾರಗೊಳಿಸಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>2024ರ ಸೆಪ್ಟೆಂಬರ್ 30ರ ಒಳಗಡೆ ವಿಧಾನಸಭಾ ಚುನಾವಣೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚಿಸಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖನ ಸರ್ವತೋಮುಖ ಅಭಿವೃದ್ಧಿ ಹಾಗೂ ಭಾರತದ ಏಕತೆಯ ದೃಷ್ಟಿಯಿಂದ ಇದು ಅತ್ಯಂತ ಮಹತ್ವದ ತೀರ್ಮಾನ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>