<p><strong>ಬೆಳಗಾವಿ: ‘</strong>ಬರದಿಂದ ಕಂಗೆಟ್ಟಿರುವ ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತ್ವರಿತವಾಗಿ ಬರ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಸಮಾವೇಶಗೊಂಡ ರೈತರು, ಉಭಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ನಂತರ, ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಿದರು.</p>.<p>ಬ್ಯಾರಿಕೇಡ್ ಅಳವಡಿಸಿದ ಪೊಲೀಸರು, ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದ ರೈತರನ್ನು ತಡೆದರು. ಆಗ ಪರಸ್ಪರರ ಮಧ್ಯೆ ವಾಗ್ವಾದ, ನೂಕಾಟ-ತಳ್ಳಾಟ ನಡೆಯಿತು.</p>.<p>ರೈತ ಮುಖಂಡ ಚೂನಪ್ಪ ಪೂಜಾರಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿವೆ. ಒಂದಿಷ್ಟು ರೈತರಿಗೆ ಭಿಕ್ಷೆ ರೂಪದಲ್ಲಿ ₹2 ಸಾವಿರ ತಾತ್ಕಾಲಿಕ ಪರಿಹಾರ ಕೊಡಲಾಗಿದೆ. ಆದರೆ, ಕುಡಿಯುವ ನೀರು, ಮೇವಿಗಾಗಿ ಜನರು ಮತ್ತು ಜಾನುವಾರುಗಳು ಪರದಾಡುತ್ತಿವೆ. ಹಾಗಾಗಿ ತಕ್ಷಣವೇ ಬರ ಪರಿಹಾರ ಕೊಡಬೇಕು. ರೈತರ ಸಾಲಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡ ಪ್ರಕಾಶ ನಾಯ್ಕ, ‘ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ನಾಡಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಷ್ಟ್ರಪತಿ ಅವರು ತಮ್ಮ ವಿಶೇಷ ಅಧಿಕಾರ ಬಳಸಿಕೊಂಡು, ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಬರ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸುವಂತೆ ಆದೇಶಿಸಬೇಕು. ಬೆಳಗಾವಿಯಲ್ಲಿ ₹300 ಕೋಟಿ ವೆಚ್ಚದಲ್ಲಿ ಮಿನಿ ಸುವರ್ಣಸೌಧ ನಿರ್ಮಿಸುವ ಅಗತ್ಯವಿಲ್ಲ. ಆ ಹಣವನ್ನು ರೈತರ ಸಾಲ ಮನ್ನಾಕ್ಕೆ ಬಳಸಬೇಕು’ ಎಂದು ಒತ್ತಾಯಿಸಿದರು.</p>.<p>ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಕಾಡಸಿದ್ಧೇಶ್ವರ ಸ್ವಾಮೀಜಿ, ಶಶಿಕಾಂತ ಪಡಸಲಗಿ, ಕಿಶನ್ ನಂದಿ, ಪ್ರಕಾಶ ಪೂಜಾರಿ, ಸುರೇಶ ಸಂಪಗಾವಿ, ಮಲ್ಲಿಕಾರ್ಜುನ ವಾಲಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: ‘</strong>ಬರದಿಂದ ಕಂಗೆಟ್ಟಿರುವ ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತ್ವರಿತವಾಗಿ ಬರ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಸಮಾವೇಶಗೊಂಡ ರೈತರು, ಉಭಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ನಂತರ, ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಿದರು.</p>.<p>ಬ್ಯಾರಿಕೇಡ್ ಅಳವಡಿಸಿದ ಪೊಲೀಸರು, ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದ ರೈತರನ್ನು ತಡೆದರು. ಆಗ ಪರಸ್ಪರರ ಮಧ್ಯೆ ವಾಗ್ವಾದ, ನೂಕಾಟ-ತಳ್ಳಾಟ ನಡೆಯಿತು.</p>.<p>ರೈತ ಮುಖಂಡ ಚೂನಪ್ಪ ಪೂಜಾರಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿವೆ. ಒಂದಿಷ್ಟು ರೈತರಿಗೆ ಭಿಕ್ಷೆ ರೂಪದಲ್ಲಿ ₹2 ಸಾವಿರ ತಾತ್ಕಾಲಿಕ ಪರಿಹಾರ ಕೊಡಲಾಗಿದೆ. ಆದರೆ, ಕುಡಿಯುವ ನೀರು, ಮೇವಿಗಾಗಿ ಜನರು ಮತ್ತು ಜಾನುವಾರುಗಳು ಪರದಾಡುತ್ತಿವೆ. ಹಾಗಾಗಿ ತಕ್ಷಣವೇ ಬರ ಪರಿಹಾರ ಕೊಡಬೇಕು. ರೈತರ ಸಾಲಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡ ಪ್ರಕಾಶ ನಾಯ್ಕ, ‘ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ನಾಡಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಷ್ಟ್ರಪತಿ ಅವರು ತಮ್ಮ ವಿಶೇಷ ಅಧಿಕಾರ ಬಳಸಿಕೊಂಡು, ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಬರ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸುವಂತೆ ಆದೇಶಿಸಬೇಕು. ಬೆಳಗಾವಿಯಲ್ಲಿ ₹300 ಕೋಟಿ ವೆಚ್ಚದಲ್ಲಿ ಮಿನಿ ಸುವರ್ಣಸೌಧ ನಿರ್ಮಿಸುವ ಅಗತ್ಯವಿಲ್ಲ. ಆ ಹಣವನ್ನು ರೈತರ ಸಾಲ ಮನ್ನಾಕ್ಕೆ ಬಳಸಬೇಕು’ ಎಂದು ಒತ್ತಾಯಿಸಿದರು.</p>.<p>ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಕಾಡಸಿದ್ಧೇಶ್ವರ ಸ್ವಾಮೀಜಿ, ಶಶಿಕಾಂತ ಪಡಸಲಗಿ, ಕಿಶನ್ ನಂದಿ, ಪ್ರಕಾಶ ಪೂಜಾರಿ, ಸುರೇಶ ಸಂಪಗಾವಿ, ಮಲ್ಲಿಕಾರ್ಜುನ ವಾಲಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>