<p>ಗೋಕಾಕ: ಮೊಬೈಲ್ ಬಳಸಿ ಶಿಕ್ಷಣ ನೀಡುವ ವಿನೂತನ ಕಾರ್ಯಕ್ರಮ ‘ಮಿಸ್ಡ್ಕಾಲ್ ಮಾಡಿ ಉತ್ತರ ಪಡೆಯಿರಿ’ ಅಭಿಯಾನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವರದಾನವಾಗಿದೆ ಎಂದು ತಹಶೀಲ್ದಾರ ಡಾ. ಮೋಹನ್ ಭಸ್ಮೆ ಹೇಳಿದರು.</p>.<p>ಇಲ್ಲಿನ ಮಯೂರ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಇತ್ತೀಚೆಗೆ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ‘ಮಿಸ್ಡ್ಕಾಲ್ ಮಾಡಿ ಉತ್ತರ ಪಡೆಯಿರಿ’ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಜೀವನದಲ್ಲಿ ಯಾವಾಗ ಏನುಬೇಕಾದರೂ ಆಗಬಹುದು. ಹಾಗೆ ಒಂದು ಮಿಸ್ಡ್ಕಾಲ್ ವಿದ್ಯಾರ್ಥಿಗಳ ಜೀವನ ಬದಲಾವಣೆ ಮಾಡಬಹುದು. ಅಭಿಯಾನದ ಸದುಪಯೋಗ ಪಡೆದು ಅಂತಿಮ ಹಂತದ ಪರೀಕ್ಷೆಗೆ ಸಿದ್ಧರಾಗಬೇಕು ಎಂದರು.</p>.<p>ಮಮದಾಪೂರ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ ಸನದಿ ಚಾಲನೆ ನೀಡಿದರು.</p>.<p>ಡಿವೈಎಸ್ಪಿ ಡಿ.ಎಚ್.ಮುಲ್ಲಾ, ಗೋಕಾಕ ಬಿಇಓ ಜಿ.ಬಿ.ಬಳಗಾರ, ಮೂಡಲಗಿ ಬಿಇಓ ಅಜೀತ ಮನ್ನಿಕೇರಿ, ಪಿಎಸ್ಐ ಕೆ.ವಾಲಿಕರ, ವಲಯ ಅರಣ್ಯ ಅಧಿಕಾರಿ ಸಂಜೀವ ಸಂಸುದ್ದಿ, ಡಾ. ಮೋಹನ್ ಕಮತ್, ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಕಾಕ: ಮೊಬೈಲ್ ಬಳಸಿ ಶಿಕ್ಷಣ ನೀಡುವ ವಿನೂತನ ಕಾರ್ಯಕ್ರಮ ‘ಮಿಸ್ಡ್ಕಾಲ್ ಮಾಡಿ ಉತ್ತರ ಪಡೆಯಿರಿ’ ಅಭಿಯಾನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವರದಾನವಾಗಿದೆ ಎಂದು ತಹಶೀಲ್ದಾರ ಡಾ. ಮೋಹನ್ ಭಸ್ಮೆ ಹೇಳಿದರು.</p>.<p>ಇಲ್ಲಿನ ಮಯೂರ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಇತ್ತೀಚೆಗೆ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ‘ಮಿಸ್ಡ್ಕಾಲ್ ಮಾಡಿ ಉತ್ತರ ಪಡೆಯಿರಿ’ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಜೀವನದಲ್ಲಿ ಯಾವಾಗ ಏನುಬೇಕಾದರೂ ಆಗಬಹುದು. ಹಾಗೆ ಒಂದು ಮಿಸ್ಡ್ಕಾಲ್ ವಿದ್ಯಾರ್ಥಿಗಳ ಜೀವನ ಬದಲಾವಣೆ ಮಾಡಬಹುದು. ಅಭಿಯಾನದ ಸದುಪಯೋಗ ಪಡೆದು ಅಂತಿಮ ಹಂತದ ಪರೀಕ್ಷೆಗೆ ಸಿದ್ಧರಾಗಬೇಕು ಎಂದರು.</p>.<p>ಮಮದಾಪೂರ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ ಸನದಿ ಚಾಲನೆ ನೀಡಿದರು.</p>.<p>ಡಿವೈಎಸ್ಪಿ ಡಿ.ಎಚ್.ಮುಲ್ಲಾ, ಗೋಕಾಕ ಬಿಇಓ ಜಿ.ಬಿ.ಬಳಗಾರ, ಮೂಡಲಗಿ ಬಿಇಓ ಅಜೀತ ಮನ್ನಿಕೇರಿ, ಪಿಎಸ್ಐ ಕೆ.ವಾಲಿಕರ, ವಲಯ ಅರಣ್ಯ ಅಧಿಕಾರಿ ಸಂಜೀವ ಸಂಸುದ್ದಿ, ಡಾ. ಮೋಹನ್ ಕಮತ್, ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>