<p><strong>ಹುಕ್ಕೇರಿ</strong>: ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಹರಗಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಗುಡ್ಡ ಕುಸಿತದ ಸ್ಥಳಕ್ಕೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ ಕಟ್ಟಿ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಕಲ್ಲುಗಳು ಉರುಳಿ ಬಿದ್ದು, ವಸತಿ ಪ್ರದೇಶದ ಸಮೀಪ ಬಂದು ನಿಂತಿವೆ. ಯಾವುದೇ ಪ್ರಾಣಹಾನಿ ಅಥವಾ ಮನೆಗೆ ತೊಂದರೆ ಆಗಿಲ್ಲ. ಆದರೆ ಕಲ್ಲು ಬಿದ್ದ ಹೊಡೆತಕ್ಕೆ ಚರಂಡಿ ರಿಪೇರಿಗೆ ಬಂದಿವೆ’ ಎಂದು ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಅಧ್ಯಕ್ಷ ಪವನ್ ಪಾಟೀಲ್ ತಿಳಿಸಿದರು.</p>.<p>‘ಗುಡ್ಡದ ಸುತ್ತ ಸುಮಾರು ನಾಲ್ಕು ನೂರು ಮನೆಗಳಿದ್ದು, ಇನ್ನೂ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದುರಿಂದ ಅಪಾಯ ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ ಸುತ್ತಮುತ್ತಲಿನ ಜನರನ್ನು ಕಾಳಜಿ ಕೇಂದ್ರಕ್ಕೆ ಅಥವಾ ಸುರಕ್ಷಿತ ಪ್ರದೇಶಕ್ಕೆ ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಿಸಬೇಕು’ ಇಒ ಪ್ರವೀಣ ಕಟ್ಟಿ ಸೂಚಿಸಿದರು.</p>.<p>ಹಳೆ ಮನೆಯಲ್ಲಿ ಅಥವಾ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಡಂಗುರ ಸಾರಲು ಸೂಚಿಸಲಾಯಿತು.</p>.<p>ಪಂಚಾಯತ್ ರಾಜ್ ಇಲಾಖೆ ಸಹಾಯಕ ನಿರ್ದೇಶಕ ರಾಜು ಢಾಂಗೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುರೇಖಾ ಹಾಲಟ್ಟಿ, ಉಪಾಧ್ಯಕ್ಷೆ ಸುಮನ್ ಸುತಾರ್, ಸದಸ್ಯರು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸವಿತಾ ಹಲಕಿ, ಪಿಡಿಒ ಶಿಲ್ಪಾ ಮಗದುಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ</strong>: ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಹರಗಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಗುಡ್ಡ ಕುಸಿತದ ಸ್ಥಳಕ್ಕೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ ಕಟ್ಟಿ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಕಲ್ಲುಗಳು ಉರುಳಿ ಬಿದ್ದು, ವಸತಿ ಪ್ರದೇಶದ ಸಮೀಪ ಬಂದು ನಿಂತಿವೆ. ಯಾವುದೇ ಪ್ರಾಣಹಾನಿ ಅಥವಾ ಮನೆಗೆ ತೊಂದರೆ ಆಗಿಲ್ಲ. ಆದರೆ ಕಲ್ಲು ಬಿದ್ದ ಹೊಡೆತಕ್ಕೆ ಚರಂಡಿ ರಿಪೇರಿಗೆ ಬಂದಿವೆ’ ಎಂದು ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಅಧ್ಯಕ್ಷ ಪವನ್ ಪಾಟೀಲ್ ತಿಳಿಸಿದರು.</p>.<p>‘ಗುಡ್ಡದ ಸುತ್ತ ಸುಮಾರು ನಾಲ್ಕು ನೂರು ಮನೆಗಳಿದ್ದು, ಇನ್ನೂ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದುರಿಂದ ಅಪಾಯ ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ ಸುತ್ತಮುತ್ತಲಿನ ಜನರನ್ನು ಕಾಳಜಿ ಕೇಂದ್ರಕ್ಕೆ ಅಥವಾ ಸುರಕ್ಷಿತ ಪ್ರದೇಶಕ್ಕೆ ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಿಸಬೇಕು’ ಇಒ ಪ್ರವೀಣ ಕಟ್ಟಿ ಸೂಚಿಸಿದರು.</p>.<p>ಹಳೆ ಮನೆಯಲ್ಲಿ ಅಥವಾ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಡಂಗುರ ಸಾರಲು ಸೂಚಿಸಲಾಯಿತು.</p>.<p>ಪಂಚಾಯತ್ ರಾಜ್ ಇಲಾಖೆ ಸಹಾಯಕ ನಿರ್ದೇಶಕ ರಾಜು ಢಾಂಗೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುರೇಖಾ ಹಾಲಟ್ಟಿ, ಉಪಾಧ್ಯಕ್ಷೆ ಸುಮನ್ ಸುತಾರ್, ಸದಸ್ಯರು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸವಿತಾ ಹಲಕಿ, ಪಿಡಿಒ ಶಿಲ್ಪಾ ಮಗದುಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>