<p><strong>ಹುಕ್ಕೇರಿ</strong>: ಘಟಪ್ರಭಾ ನದಿಗೆ ನಿರ್ಮಿಸಲಾದ ಇಲ್ಲಿನ ರಾಜಾ ಲಖಮಗೌಡ ಜಲಾಶಯ (ಹಿಡಕಲ್ ಡ್ಯಾಂ)ದಿಂದ ಬುಧವಾರ, ಎಲ್ಲ ಹತ್ತು ಕ್ರೆಸ್ಟ್ ಗೇಟ್ಗಳನ್ನು ತೆರೆದು 10 ಸಾವಿರ ಕ್ಯುಸೆಕ್ ನೀರು ನದಿಗೆ ಬಿಡಲಾಯಿತು.</p><p>ಜಲಾಶಯದಿಂದ ಮಧ್ಯಾಹ್ನ 4.30ರ ಸುಮಾರಿಗೆ ನೀರು ಹರಿಬಿಡಲಾಯಿತು. ಜಲಾಶಯವು ಶೇ 90ರಷ್ಟು ಭರ್ತಿಯಾಗಿದೆ. ಬುಧವಾರ ಜಲಾಶಯದ ಗರಿಷ್ಠ ನೀರಿನ ಮಟ್ಟ 2,175 ಅಡಿ. ಬುಧವಾರ 2165 ಅಡಿ ತಲುಪಿದೆ. 31,153 ಕ್ಯುಸೆಕ್ ಒಳಹರಿವು ನಿರಂತರ ಇದೆ.</p><p>ಮಹಾರಾಷ್ಟ್ರ ಹಾಗೂ ಘಟಪ್ರಭಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಮುಂದುವರಿದಿದೆ. ಒಳ ಹರಿವು ಹೆಚ್ಚಾದರೆ ನದಿಗೆ ನೀರು ಹರಿಸುವ ಪ್ರಮಾಣವನ್ನು 20 ಸಾವಿರ ಕ್ಯುಸೆಕ್ಗೆ ಏರಿಸಲಾಗುವುದು ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅರವಿಂದ ಜಮಖಂಡಿ ‘ಪ್ರಜಾವಾಣಿ’ಗೆ ತಿಳಿಸಿದರು.</p><p>ನದಿ ನೀರು ಬಿಟ್ಟಿದ್ದರಿಂದ ತೀರದ ಜನರ ಎಚ್ಚರಿಕೆ ವಹಿಸಬೇಕು ಎಂದೂ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ತಹಶೀಲ್ದಾರ ಮಂಜುಳಾ ನಾಯಕ್ ಮತ್ತು ಕರ್ನಾಟಕ ನೀರಾವರಿ ನಿಗಮದ ಎಂಜಿನಿಯರ್ಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ</strong>: ಘಟಪ್ರಭಾ ನದಿಗೆ ನಿರ್ಮಿಸಲಾದ ಇಲ್ಲಿನ ರಾಜಾ ಲಖಮಗೌಡ ಜಲಾಶಯ (ಹಿಡಕಲ್ ಡ್ಯಾಂ)ದಿಂದ ಬುಧವಾರ, ಎಲ್ಲ ಹತ್ತು ಕ್ರೆಸ್ಟ್ ಗೇಟ್ಗಳನ್ನು ತೆರೆದು 10 ಸಾವಿರ ಕ್ಯುಸೆಕ್ ನೀರು ನದಿಗೆ ಬಿಡಲಾಯಿತು.</p><p>ಜಲಾಶಯದಿಂದ ಮಧ್ಯಾಹ್ನ 4.30ರ ಸುಮಾರಿಗೆ ನೀರು ಹರಿಬಿಡಲಾಯಿತು. ಜಲಾಶಯವು ಶೇ 90ರಷ್ಟು ಭರ್ತಿಯಾಗಿದೆ. ಬುಧವಾರ ಜಲಾಶಯದ ಗರಿಷ್ಠ ನೀರಿನ ಮಟ್ಟ 2,175 ಅಡಿ. ಬುಧವಾರ 2165 ಅಡಿ ತಲುಪಿದೆ. 31,153 ಕ್ಯುಸೆಕ್ ಒಳಹರಿವು ನಿರಂತರ ಇದೆ.</p><p>ಮಹಾರಾಷ್ಟ್ರ ಹಾಗೂ ಘಟಪ್ರಭಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಮುಂದುವರಿದಿದೆ. ಒಳ ಹರಿವು ಹೆಚ್ಚಾದರೆ ನದಿಗೆ ನೀರು ಹರಿಸುವ ಪ್ರಮಾಣವನ್ನು 20 ಸಾವಿರ ಕ್ಯುಸೆಕ್ಗೆ ಏರಿಸಲಾಗುವುದು ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅರವಿಂದ ಜಮಖಂಡಿ ‘ಪ್ರಜಾವಾಣಿ’ಗೆ ತಿಳಿಸಿದರು.</p><p>ನದಿ ನೀರು ಬಿಟ್ಟಿದ್ದರಿಂದ ತೀರದ ಜನರ ಎಚ್ಚರಿಕೆ ವಹಿಸಬೇಕು ಎಂದೂ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ತಹಶೀಲ್ದಾರ ಮಂಜುಳಾ ನಾಯಕ್ ಮತ್ತು ಕರ್ನಾಟಕ ನೀರಾವರಿ ನಿಗಮದ ಎಂಜಿನಿಯರ್ಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>