<p><strong>ಚನ್ನಮ್ಮನ ಕಿತ್ತೂರು:</strong> ‘ಎಲ್ಲ ರಂಗಗಳಲ್ಲೂ ಪುರುಷರಿಗೆ ಸಮಾನವಾಗಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲೂ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕಿದೆ’ ಎಂದು ಜಾನಪದ ಸಂಶೋಧನೆ ಕೇಂದ್ರದ ಅಧ್ಯಕ್ಷೆ ಹಾಗೂ ಹಿರಿಯ ರಂಗ ನಿರ್ದೇಶಕಿ ವಿಶ್ವೇಶ್ವರಿ ಹಿರೇಮಠ ಹೇಳಿದರು.</p>.<p>ಇಲ್ಲಿಯ ಕಲ್ಮಠದ ಶಂಕರ ಚಂದರಗಿ ಸಭಾಭವನದಲ್ಲಿ ಶನಿವಾರ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರ ಸಂಖ್ಯೆ ಬೆರಳೆಣಿಕೆಯಷ್ಟಿದೆ. ರಾಜಕೀಯ ಪಕ್ಷಗಳೂ ಅವರಿಗೆ ಹೆಚ್ಚಿನ ಅವಕಾಶ ನೀಡಬೇಕು. ಪ್ರತಿ ಕ್ಷೇತ್ರದಲ್ಲಿಯೂ ಮಹಿಳೆ ಅಬಲೆಯಲ್ಲ ಸಬಲೆ ಎಂದು ಈಗಾಗಲೇ ಸಾಬೀತು ಮಾಡಿಯಾಗಿದೆ’ ಎಂದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಬಿ. ದಳವಾಯಿ, ವೈದ್ಯ ಭಾರತಿ ತೇಲಿ, ಪತ್ರಕರ್ತ ಉಳವಯ್ಯ ಹಿರೇಮಠ ಮಾತನಾಡಿದರು. ರಾಜಗುರು ಸಂಸ್ಥಾನ ಕಲ್ಮಠದ ಪೀಠಾಧ್ಯಕ್ಷ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಮರಣಾನಂತರ ದೇಹದಾನ ಮಾಡಿದ ಗಂಗಮ್ಮ ಪೂಜೇರ ಮತ್ತು ಸಾಧಕಿ ಶಿವಮ್ಮ ಆನಿಗೋಳ ಅವರನ್ನು ಇದೇ ವೇಳೆ ಸತ್ಕರಿಸಲಾಯಿತು.</p>.<p>ನಂದಾ ಕಾಜಗಾರ, ಜಯಶ್ರೀ ಹಿರೇಮಠ, ಸ್ನೇಹಾ ದೇವರಮನಿ, ಶೋಭಾ ಪಾಶ್ಚಾಪುರ, ಪ್ರಭಾ ಲದ್ದಿಮಠ, ಸೌಮ್ಯ ರಾಘವೇಂದ್ರ, ಸವಿತಾ ಹಿರೇಮಠ, ಪ್ರತಿಭಾ ಉಣಕಲ್ಲಕರ, ಮಹೇಶ್ವರ ಹೊಂಗಲ, ಬಸವರಾಜ ಬಿದರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು:</strong> ‘ಎಲ್ಲ ರಂಗಗಳಲ್ಲೂ ಪುರುಷರಿಗೆ ಸಮಾನವಾಗಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲೂ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕಿದೆ’ ಎಂದು ಜಾನಪದ ಸಂಶೋಧನೆ ಕೇಂದ್ರದ ಅಧ್ಯಕ್ಷೆ ಹಾಗೂ ಹಿರಿಯ ರಂಗ ನಿರ್ದೇಶಕಿ ವಿಶ್ವೇಶ್ವರಿ ಹಿರೇಮಠ ಹೇಳಿದರು.</p>.<p>ಇಲ್ಲಿಯ ಕಲ್ಮಠದ ಶಂಕರ ಚಂದರಗಿ ಸಭಾಭವನದಲ್ಲಿ ಶನಿವಾರ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರ ಸಂಖ್ಯೆ ಬೆರಳೆಣಿಕೆಯಷ್ಟಿದೆ. ರಾಜಕೀಯ ಪಕ್ಷಗಳೂ ಅವರಿಗೆ ಹೆಚ್ಚಿನ ಅವಕಾಶ ನೀಡಬೇಕು. ಪ್ರತಿ ಕ್ಷೇತ್ರದಲ್ಲಿಯೂ ಮಹಿಳೆ ಅಬಲೆಯಲ್ಲ ಸಬಲೆ ಎಂದು ಈಗಾಗಲೇ ಸಾಬೀತು ಮಾಡಿಯಾಗಿದೆ’ ಎಂದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಬಿ. ದಳವಾಯಿ, ವೈದ್ಯ ಭಾರತಿ ತೇಲಿ, ಪತ್ರಕರ್ತ ಉಳವಯ್ಯ ಹಿರೇಮಠ ಮಾತನಾಡಿದರು. ರಾಜಗುರು ಸಂಸ್ಥಾನ ಕಲ್ಮಠದ ಪೀಠಾಧ್ಯಕ್ಷ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಮರಣಾನಂತರ ದೇಹದಾನ ಮಾಡಿದ ಗಂಗಮ್ಮ ಪೂಜೇರ ಮತ್ತು ಸಾಧಕಿ ಶಿವಮ್ಮ ಆನಿಗೋಳ ಅವರನ್ನು ಇದೇ ವೇಳೆ ಸತ್ಕರಿಸಲಾಯಿತು.</p>.<p>ನಂದಾ ಕಾಜಗಾರ, ಜಯಶ್ರೀ ಹಿರೇಮಠ, ಸ್ನೇಹಾ ದೇವರಮನಿ, ಶೋಭಾ ಪಾಶ್ಚಾಪುರ, ಪ್ರಭಾ ಲದ್ದಿಮಠ, ಸೌಮ್ಯ ರಾಘವೇಂದ್ರ, ಸವಿತಾ ಹಿರೇಮಠ, ಪ್ರತಿಭಾ ಉಣಕಲ್ಲಕರ, ಮಹೇಶ್ವರ ಹೊಂಗಲ, ಬಸವರಾಜ ಬಿದರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>