<p><strong>ರಾಮದುರ್ಗ: ‘</strong>ಗ್ಯಾರಂಟಿ ಹೆಸರಿನಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಗ್ಯಾರಂಟಿ ಹಣ ಮೂರು ತಿಂಗಳಿಂದ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿಲ್ಲ. ಭ್ರಷ್ಟ ಸರ್ಕಾರ ಕಿತ್ತೊಗೆಯಲು ಕಾರ್ಯಕರ್ತರು ಪಣತೊಡಬೇಕು’ ಎಂದು ಬಿಜೆಪಿ ಮುಖಂಡ ಮಹಾದೇವಪ್ಪ ಯಾದವಾಡ ಹೇಳಿದರು.</p>.<p>ಪಟ್ಟಣದ ಮರಾಠಾ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಬಿಜೆಪಿ ರಾಮದುರ್ಗ ಮಂಡಳದ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದರು.</p>.<p>‘ವಾಲ್ಮೀಕಿ ಅಭಿವೃದ್ಧಿ ನಿಗಮ, ಮೂಡ ಹಗರಣ ಖಂಡಿಸಿ ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ನಡೆಯುವ ಪ್ರತಿಭಟನಾ ಪಾದಯಾತ್ರೆಯಲ್ಲಿ ತಾಲ್ಲೂಕಿನ ಕಾರ್ಯಕರ್ತರು ಪಾಲ್ಗೊಳ್ಳಬೇಕು. ನೆರೆ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡದಿದ್ದರೆ ಹೋರಾಟ ಅನಿವಾರ್ಯವಾಗಲಿದೆ’ ಎಂದರು.</p>.<p>ಪಕ್ಷದ ರಾಜ್ಯ ವಕ್ತಾರ ಎಫ್.ಎಸ್. ಸಿದ್ಧನಗೌಡ್ರ ಮಾತನಾಡಿ, ‘ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಹಂತದ ಸುಮಾರು 4 ಸಾವಿರ ಪದಾಧಿಕಾರಿಗಳಿದ್ದು, ಕಾರ್ಯಕಾರಿಣಿಗೆ 150ರಿಂದ 900 ಸದಸ್ಯರನ್ನು ಮಾತ್ರ ಆಮಂತ್ರಿಸಲಾಗುತ್ತಿದೆ. ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವಿಗೆ ಶ್ರಮಿಸಬೇಕು’ ಎಂದು ಹೇಳಿದರು.</p>.<p>ಬಿಜೆಪಿ ಮಂಡಳದ ಅಧ್ಯಕ್ಷ ರಾಜೇಶ ಬೀಳಗಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಕೆ. ವಿ. ಪಾಟೀಲ, ವಿಜಯ ಗುಡದಾರಿ, ಕಾರ್ಯದರ್ಶಿ ಉಮೇಶ ಹಕಾಟಿ, ಶಂಕರ ಹುರಕಡ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ: ‘</strong>ಗ್ಯಾರಂಟಿ ಹೆಸರಿನಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಗ್ಯಾರಂಟಿ ಹಣ ಮೂರು ತಿಂಗಳಿಂದ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿಲ್ಲ. ಭ್ರಷ್ಟ ಸರ್ಕಾರ ಕಿತ್ತೊಗೆಯಲು ಕಾರ್ಯಕರ್ತರು ಪಣತೊಡಬೇಕು’ ಎಂದು ಬಿಜೆಪಿ ಮುಖಂಡ ಮಹಾದೇವಪ್ಪ ಯಾದವಾಡ ಹೇಳಿದರು.</p>.<p>ಪಟ್ಟಣದ ಮರಾಠಾ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಬಿಜೆಪಿ ರಾಮದುರ್ಗ ಮಂಡಳದ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದರು.</p>.<p>‘ವಾಲ್ಮೀಕಿ ಅಭಿವೃದ್ಧಿ ನಿಗಮ, ಮೂಡ ಹಗರಣ ಖಂಡಿಸಿ ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ನಡೆಯುವ ಪ್ರತಿಭಟನಾ ಪಾದಯಾತ್ರೆಯಲ್ಲಿ ತಾಲ್ಲೂಕಿನ ಕಾರ್ಯಕರ್ತರು ಪಾಲ್ಗೊಳ್ಳಬೇಕು. ನೆರೆ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡದಿದ್ದರೆ ಹೋರಾಟ ಅನಿವಾರ್ಯವಾಗಲಿದೆ’ ಎಂದರು.</p>.<p>ಪಕ್ಷದ ರಾಜ್ಯ ವಕ್ತಾರ ಎಫ್.ಎಸ್. ಸಿದ್ಧನಗೌಡ್ರ ಮಾತನಾಡಿ, ‘ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಹಂತದ ಸುಮಾರು 4 ಸಾವಿರ ಪದಾಧಿಕಾರಿಗಳಿದ್ದು, ಕಾರ್ಯಕಾರಿಣಿಗೆ 150ರಿಂದ 900 ಸದಸ್ಯರನ್ನು ಮಾತ್ರ ಆಮಂತ್ರಿಸಲಾಗುತ್ತಿದೆ. ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವಿಗೆ ಶ್ರಮಿಸಬೇಕು’ ಎಂದು ಹೇಳಿದರು.</p>.<p>ಬಿಜೆಪಿ ಮಂಡಳದ ಅಧ್ಯಕ್ಷ ರಾಜೇಶ ಬೀಳಗಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಕೆ. ವಿ. ಪಾಟೀಲ, ವಿಜಯ ಗುಡದಾರಿ, ಕಾರ್ಯದರ್ಶಿ ಉಮೇಶ ಹಕಾಟಿ, ಶಂಕರ ಹುರಕಡ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>