ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಳಸಾ– ಬಂಡೂರಿ ನಾಲಾ ತಿರುವು ಸಂಬಂಧ ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ಬಂದಿದೆ. ಆದರೂ ಗೋವಾ ಸರ್ಕಾರ ಕೇಂದ್ರದ ತಂಡವನ್ನು ಆಹ್ವಾನಿಸಿದೆ. ಯೋಜನೆ ತಡೆಹಿಡಿಯಲು ಗೋವಾ ಸರ್ಕಾರ ನೆಪ ಮಾಡಿಕೊಂಡು ಬರುತ್ತಿದೆ. ಇದಕ್ಕೆ ತಕ್ಕ ಉತ್ತರ ನೀಡಲು ರಾಜ್ಯ ಸರ್ಕಾರ ಸಿದ್ಧವಾಗಬೇಕು’ ಎಂದರು.