<p><strong>ಸಂಕೇಶ್ವರ:</strong> ‘ಮುಸ್ಲಿಂ ದೇಹ- ಕನ್ನಡ ಮನಸ್ಸು ಹೊಂದಿರುವ ಬೆಳಗಾವಿ ಹತ್ತಿರದ ಸಿಂದೊಳ್ಳಿಯ ಸನದಿ ಕುಟುಂಬ ಕನ್ನಡ ಸಾಹಿತ್ಯ ಮತ್ತು ಶಿಕ್ಷಣಕ್ಕೆ ಅಪಾರ ಕೊಡುಗೆ ನೀಡಿದೆ’ ಎಂದು ಹಿರಿಯ ಡಾ.ಬಸವರಾಜ ಜಗಜಂಪಿ ಹೇಳಿದರು.</p>.<p>ಅವರು ಸಂಕೇಶ್ವರದಲ್ಲಿ ಕವಿ ಅಕ್ಬರ ಸನದಿ ಅವರಿಗೆ ಅಭಿನಂದನೆ ಸಮಾರಂಭ ಹಾಗೂ ‘ನಾದ ನಿನಾದ’ ಗ್ರಂಥ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಕೈಗಾರಿಕಾ ಘಟಕದಲ್ಲಿ ಹಗಲಿರಳು ಕೆಲಸ ಮಾಡುತ್ತಾ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃತಿಗಳನ್ನು ತಂದಿರುವ ಸನದಿ ಅವರು ಇಂದಿನ ಪೀಳಿಗೆಯವರಿಗೆ ಮಾದರಿ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಂಶೋಧಕ ಡಾ.ರಾಮಕೃಷ್ಣ ಮರಾಠೆ ಮಾತನಾಡಿ, ‘ಗಡಿನಾಡಿನ ಹಳ್ಳಿಯಿಂದ ಬಂದ ಸನದಿ ಕುಟುಂಬದ 6 ಜನ ಸದಸ್ಯರು ಕನ್ನಡ ಸಾಹಿತ್ಯದಲ್ಲಿ ವಿವಿಧ ಕೃತಿಗಳನ್ನು ಹೊರ ತಂದಿರುವುದು ಐತಿಹಾಸಿಕ ಕೆಲಸ. ಭಾಷೆ, ಧರ್ಮ ಹಾಗೂ ಜಾತಿಯ ಹೆಸರಿಲ್ಲಿ ಸಮಾಜ ಒಡೆದು ಹೋಗುತ್ತಿರುವಾಗ ಸನದಿ ಕುಟುಂಬದ ಸದಸ್ಯರು ಎಕತ್ವದ ಕಲ್ಪನೆಯಲ್ಲಿ ಸಾಹಿತ್ಯ ಕೃತಿಗಳನ್ನು ರಚಿಸಿರುವುದು ಸಂತಸದ ಸಂಗತಿ’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ನಿಡಸೋಸಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿ, ‘ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಂದೆ-ತಾಯಿಗಳ ಜವಾಬ್ದಾರಿ ಬಹು ದೊಡ್ಡದು. ಸನದಿ ಸಹೋದರರ ತಂದೆ ಕಲಾವಿದರಾಗಿದ್ದರಿಂದ ತಮ್ಮ ಮಕ್ಕಳಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿಯ ಅಭಿರುಚಿಯನ್ನು ತುಂಬಿದರು. ಬಡತನವೇ ಬದುಕಿನ ಸಾಧನೆಗೆ ಮಾರ್ಗದರ್ಶಿಯಾಗಿರುತ್ತದೆ. ಅಂಥ ನೆಲೆಯಿಂದ ಬಂದ ಅಕಬರ ಸನದಿ ಅವರ ಕಾರ್ಯ ಶ್ಲಾಘನೀಯ’ ಎಂದರು.</p>.<p>ಎ.ಎ.ಸನದಿ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಹಾಗೂ ಸಂಗೀತ ಕಾರ್ಯಕ್ರಮ ಜರುಗಿತು.</p>.<p><br> ಸಂಕೇಶ್ವರದಲ್ಲಿ ಕವಿ ಅಕಬರ ಸನದಿ ಅವರ ಅಭಿನಂದನೆ ಸಮಾರಂಭದಲ್ಲಿ ‘ನಾದ ನಿನಾದ’ ಗ್ರಂಥವನ್ನು ನಿಡಸೋಸಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಲೋಕಾರ್ಪಣೆ ಮಾಡಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಕೇಶ್ವರ:</strong> ‘ಮುಸ್ಲಿಂ ದೇಹ- ಕನ್ನಡ ಮನಸ್ಸು ಹೊಂದಿರುವ ಬೆಳಗಾವಿ ಹತ್ತಿರದ ಸಿಂದೊಳ್ಳಿಯ ಸನದಿ ಕುಟುಂಬ ಕನ್ನಡ ಸಾಹಿತ್ಯ ಮತ್ತು ಶಿಕ್ಷಣಕ್ಕೆ ಅಪಾರ ಕೊಡುಗೆ ನೀಡಿದೆ’ ಎಂದು ಹಿರಿಯ ಡಾ.ಬಸವರಾಜ ಜಗಜಂಪಿ ಹೇಳಿದರು.</p>.<p>ಅವರು ಸಂಕೇಶ್ವರದಲ್ಲಿ ಕವಿ ಅಕ್ಬರ ಸನದಿ ಅವರಿಗೆ ಅಭಿನಂದನೆ ಸಮಾರಂಭ ಹಾಗೂ ‘ನಾದ ನಿನಾದ’ ಗ್ರಂಥ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಕೈಗಾರಿಕಾ ಘಟಕದಲ್ಲಿ ಹಗಲಿರಳು ಕೆಲಸ ಮಾಡುತ್ತಾ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃತಿಗಳನ್ನು ತಂದಿರುವ ಸನದಿ ಅವರು ಇಂದಿನ ಪೀಳಿಗೆಯವರಿಗೆ ಮಾದರಿ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಂಶೋಧಕ ಡಾ.ರಾಮಕೃಷ್ಣ ಮರಾಠೆ ಮಾತನಾಡಿ, ‘ಗಡಿನಾಡಿನ ಹಳ್ಳಿಯಿಂದ ಬಂದ ಸನದಿ ಕುಟುಂಬದ 6 ಜನ ಸದಸ್ಯರು ಕನ್ನಡ ಸಾಹಿತ್ಯದಲ್ಲಿ ವಿವಿಧ ಕೃತಿಗಳನ್ನು ಹೊರ ತಂದಿರುವುದು ಐತಿಹಾಸಿಕ ಕೆಲಸ. ಭಾಷೆ, ಧರ್ಮ ಹಾಗೂ ಜಾತಿಯ ಹೆಸರಿಲ್ಲಿ ಸಮಾಜ ಒಡೆದು ಹೋಗುತ್ತಿರುವಾಗ ಸನದಿ ಕುಟುಂಬದ ಸದಸ್ಯರು ಎಕತ್ವದ ಕಲ್ಪನೆಯಲ್ಲಿ ಸಾಹಿತ್ಯ ಕೃತಿಗಳನ್ನು ರಚಿಸಿರುವುದು ಸಂತಸದ ಸಂಗತಿ’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ನಿಡಸೋಸಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿ, ‘ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಂದೆ-ತಾಯಿಗಳ ಜವಾಬ್ದಾರಿ ಬಹು ದೊಡ್ಡದು. ಸನದಿ ಸಹೋದರರ ತಂದೆ ಕಲಾವಿದರಾಗಿದ್ದರಿಂದ ತಮ್ಮ ಮಕ್ಕಳಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿಯ ಅಭಿರುಚಿಯನ್ನು ತುಂಬಿದರು. ಬಡತನವೇ ಬದುಕಿನ ಸಾಧನೆಗೆ ಮಾರ್ಗದರ್ಶಿಯಾಗಿರುತ್ತದೆ. ಅಂಥ ನೆಲೆಯಿಂದ ಬಂದ ಅಕಬರ ಸನದಿ ಅವರ ಕಾರ್ಯ ಶ್ಲಾಘನೀಯ’ ಎಂದರು.</p>.<p>ಎ.ಎ.ಸನದಿ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಹಾಗೂ ಸಂಗೀತ ಕಾರ್ಯಕ್ರಮ ಜರುಗಿತು.</p>.<p><br> ಸಂಕೇಶ್ವರದಲ್ಲಿ ಕವಿ ಅಕಬರ ಸನದಿ ಅವರ ಅಭಿನಂದನೆ ಸಮಾರಂಭದಲ್ಲಿ ‘ನಾದ ನಿನಾದ’ ಗ್ರಂಥವನ್ನು ನಿಡಸೋಸಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಲೋಕಾರ್ಪಣೆ ಮಾಡಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>