‘ದಾನಿಗಳು, ಮಹಾದಾನಿಗಳು, ಸಿರಸಂಗಿ ಲಿಂಗರಾಜರು, ರಾಜಾ ಲಖಮಗೌಡರು, ಭೂಮರಡ್ಡಿ ಬಸಪ್ಪನವರಂಥ ತ್ಯಾಗವೀರರಿಂದ ಕೆಎಲ್ಇ ಬೆಳೆದುನಿಂತಿದೆ. ಇಲ್ಲಿ ಕಾಂಗ್ರೆಸ್, ಬಿಜೆಪಿ ಪ್ರಶ್ನೆ ಉದ್ಭವಿಸಬಾರದು. ಕೆಎಲ್ಇ ಸಂಸ್ಥೆ ಸ್ವಂತ ಹಣದಲ್ಲಿ ಆಸ್ತಿ ಖರೀದಿಸಿದೆ. ಆಯಾ ಕಾಲಘಟ್ಟದಲ್ಲಿದ್ದ ಪಕ್ಷಗಳಿಂದ ಸಹಾಯ, ಸಹಕಾರ ಪಡೆದಿದೆ. ಆದರೆ, ಕೇವಲ ಕಾಂಗ್ರೆಸ್ನಿಂದ ಕೆಎಲ್ಇ ತನ್ನ ಆಸ್ಪತ್ರೆ ನಿರ್ಮಿಸಿದೆ. ವಿ.ವಿಗಳನ್ನು ಸ್ಥಾಪಿಸಿದೆ ಎಂಬರ್ಥದ ಹೇಳಿಕೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿರುವುದು ದುರದೃಷ್ಟಕರ. ಕೆಎಲ್ಇ ಇತಿಹಾಸ ಸರಿಯಾಗಿ ಅರ್ಥೈಸಿಕೊಳ್ಳದೆ, ಈ ರೀತಿ ಹೇಳಿರುವದನ್ನು ಪ್ರತಿಭಟಿಸುತ್ತೇನೆ’ ಎಂದು ಹೇಳಿದ್ದಾರೆ.