<p><strong>ಬೆಳಗಾವಿ</strong>: ಕಳೆದ ಹಲವು ವರ್ಷಗಳ ಹಿಂದೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಯುವಕನಿಗೆ ಇಲ್ಲಿನ ಅರಿಹಂತ ಆಸ್ಪತ್ರೆಯಲ್ಲಿ ಯಶಸ್ವಿ ಕಸಿ ಮಾಡಲಾಗಿದೆ. ಆಸ್ಪತ್ರೆಯ ನುರಿತ ವೈದ್ಯರ ತಂಡವು ಯುವಕನಿಗೆ ಮರುಜನ್ಮ ನೀಡಿದೆ.</p>.<p>ಖಾನಾಪುರ ತಾಲ್ಲೂಕಿನ ಗೋಲ್ಯಾಳಿ ಗ್ರಾಮದ 26 ವರ್ಷದ ರಾಮದಾಸ ಕುಲಂ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತ, ಡಯಾಲಿಸಿಸ್ಗೆ ಒಳಗಾಗುತ್ತಿದ್ದರು. ಮಗನ ನೋವನ್ನು ನೋಡಲಾರದೇ ಅವರ ತಾಯಿ ಗುಣವಂತಿ ಕುಲಂ ಅವರು ತಮ್ಮ ಒಂದು ಕಿಡ್ನಿ ದಾನ ಮಾಡಿದರು.</p>.<p>ಅರಿಹಂತ ಆಸ್ಪತ್ರೆಗೆ ಆಗಮಿಸಿದಾಗ ನೆಫ್ರಾಲಜಿ ತಜ್ಞ ಡಾ.ವಿಜಯಕುಮಾರ ಪಾಟೀಲ ಅವರು ಮೂತ್ರಪಿಂಡ ಕಸಿ ಮಾಡಿದರೆ ಒಳ್ಳೆಯದು ಎಂದು ನಿರ್ಧಾರಕ್ಕೆ ಬಂದರು. ಡಿ.29ರಂದು ಶಸ್ತ್ರಚಿಕಿತ್ಸೆ ನೆರವೇರಿಸಿ ಕಿಡ್ನಿ ಕಸಿ ಮಾಡುವಲ್ಲಿ ಯಶಸ್ವಿಯಾದರು. ಈಗ ಯುವಕ ಸಂಪೂರ್ಣ ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<p>ಯುರಾಲಾಜಿಸ್ಟ್ ಡಾ.ಅಮಿತ ಮುಂಗರವಾಡಿ, ಡಾ.ಶಿವಗೌಡ ಪಾಟೀಲ ಅವರು ನೆರವೇರಿಸಿದ ಶಸ್ತ್ರಚಿಕಿತ್ಸೆಗೆ ನೆಫ್ರಾಲಜಿಸ್ಟ್ ಡಾ.ವಿಜಯಕುಮಾರ ಪಾಟೀಲ, ಅರಿವಳಿಕೆ ತಜ್ಞ ಡಾ.ಎಂ.ಬಿ.ಪ್ರಶಾಂತ, ಡಾ.ಅವಿನಾಶ ಲೋಂಡೆ, ಡಾ.ಅಂಬರೀಷ ನೇರ್ಲಿಕರ ಅವರು ಸಹಕಾರ ನೀಡಿದರು.</p>.<p>‘ಗುಣವಂತಿ ಅವರು ತಾಯಿಯ ಮಮತೆ ಎತ್ತಿ ಹಿಡಿದರು. ತಮ್ಮ ಮಗನ ಯೋಗಕ್ಷೇಮಕ್ಕಾಗಿ ಅರ್ಪನಾ ಮನೋಭಾವದ ತಾಯಿಯು ಕೂಡ ಶಸ್ತ್ರಚಿಕಿತ್ಸೆಗೆ ಒಳಗಾದರು. ಅವರ ನಡೆ ಅಭಿನಂದನೀಯ’ ಎಂದು ಸಂಸ್ಥೆಯ ಅಧ್ಯಕ್ಷ ರಾವಸಾಹೇಬ ಪಾಟೀಲ, ನಿರ್ದೇಶಕ ಅಭಿನಂದನ ಪಾಟೀಲ ಮತ್ತು ಉತ್ತಮ ಪಾಟೀಲ ತಿಳಿಸಿದ್ದಾರೆ.</p>.<p>ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ಡಿ. ದೀಕ್ಷಿತ ಅವರು, ಅರಿಹಂತ ಆಸ್ಪತ್ರೆಯು ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ಒದಗಿಸುವ, ಆರೋಗ್ಯ ಸೇವೆಗಳ ಪ್ರಗತಿಗೆ ಕೊಡುಗೆ ನೀಡುವ ತನ್ನ ಬದ್ಧತೆಯನ್ನು ಎತ್ತಿಹಿಡಿದಿದೆ. ಅಂಗಾಂಗ ಕಸಿಯ ಮೂಲಕ ಜೀವವನ್ನು ಉಳಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಕಳೆದ ಹಲವು ವರ್ಷಗಳ ಹಿಂದೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಯುವಕನಿಗೆ ಇಲ್ಲಿನ ಅರಿಹಂತ ಆಸ್ಪತ್ರೆಯಲ್ಲಿ ಯಶಸ್ವಿ ಕಸಿ ಮಾಡಲಾಗಿದೆ. ಆಸ್ಪತ್ರೆಯ ನುರಿತ ವೈದ್ಯರ ತಂಡವು ಯುವಕನಿಗೆ ಮರುಜನ್ಮ ನೀಡಿದೆ.</p>.<p>ಖಾನಾಪುರ ತಾಲ್ಲೂಕಿನ ಗೋಲ್ಯಾಳಿ ಗ್ರಾಮದ 26 ವರ್ಷದ ರಾಮದಾಸ ಕುಲಂ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತ, ಡಯಾಲಿಸಿಸ್ಗೆ ಒಳಗಾಗುತ್ತಿದ್ದರು. ಮಗನ ನೋವನ್ನು ನೋಡಲಾರದೇ ಅವರ ತಾಯಿ ಗುಣವಂತಿ ಕುಲಂ ಅವರು ತಮ್ಮ ಒಂದು ಕಿಡ್ನಿ ದಾನ ಮಾಡಿದರು.</p>.<p>ಅರಿಹಂತ ಆಸ್ಪತ್ರೆಗೆ ಆಗಮಿಸಿದಾಗ ನೆಫ್ರಾಲಜಿ ತಜ್ಞ ಡಾ.ವಿಜಯಕುಮಾರ ಪಾಟೀಲ ಅವರು ಮೂತ್ರಪಿಂಡ ಕಸಿ ಮಾಡಿದರೆ ಒಳ್ಳೆಯದು ಎಂದು ನಿರ್ಧಾರಕ್ಕೆ ಬಂದರು. ಡಿ.29ರಂದು ಶಸ್ತ್ರಚಿಕಿತ್ಸೆ ನೆರವೇರಿಸಿ ಕಿಡ್ನಿ ಕಸಿ ಮಾಡುವಲ್ಲಿ ಯಶಸ್ವಿಯಾದರು. ಈಗ ಯುವಕ ಸಂಪೂರ್ಣ ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<p>ಯುರಾಲಾಜಿಸ್ಟ್ ಡಾ.ಅಮಿತ ಮುಂಗರವಾಡಿ, ಡಾ.ಶಿವಗೌಡ ಪಾಟೀಲ ಅವರು ನೆರವೇರಿಸಿದ ಶಸ್ತ್ರಚಿಕಿತ್ಸೆಗೆ ನೆಫ್ರಾಲಜಿಸ್ಟ್ ಡಾ.ವಿಜಯಕುಮಾರ ಪಾಟೀಲ, ಅರಿವಳಿಕೆ ತಜ್ಞ ಡಾ.ಎಂ.ಬಿ.ಪ್ರಶಾಂತ, ಡಾ.ಅವಿನಾಶ ಲೋಂಡೆ, ಡಾ.ಅಂಬರೀಷ ನೇರ್ಲಿಕರ ಅವರು ಸಹಕಾರ ನೀಡಿದರು.</p>.<p>‘ಗುಣವಂತಿ ಅವರು ತಾಯಿಯ ಮಮತೆ ಎತ್ತಿ ಹಿಡಿದರು. ತಮ್ಮ ಮಗನ ಯೋಗಕ್ಷೇಮಕ್ಕಾಗಿ ಅರ್ಪನಾ ಮನೋಭಾವದ ತಾಯಿಯು ಕೂಡ ಶಸ್ತ್ರಚಿಕಿತ್ಸೆಗೆ ಒಳಗಾದರು. ಅವರ ನಡೆ ಅಭಿನಂದನೀಯ’ ಎಂದು ಸಂಸ್ಥೆಯ ಅಧ್ಯಕ್ಷ ರಾವಸಾಹೇಬ ಪಾಟೀಲ, ನಿರ್ದೇಶಕ ಅಭಿನಂದನ ಪಾಟೀಲ ಮತ್ತು ಉತ್ತಮ ಪಾಟೀಲ ತಿಳಿಸಿದ್ದಾರೆ.</p>.<p>ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ಡಿ. ದೀಕ್ಷಿತ ಅವರು, ಅರಿಹಂತ ಆಸ್ಪತ್ರೆಯು ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ಒದಗಿಸುವ, ಆರೋಗ್ಯ ಸೇವೆಗಳ ಪ್ರಗತಿಗೆ ಕೊಡುಗೆ ನೀಡುವ ತನ್ನ ಬದ್ಧತೆಯನ್ನು ಎತ್ತಿಹಿಡಿದಿದೆ. ಅಂಗಾಂಗ ಕಸಿಯ ಮೂಲಕ ಜೀವವನ್ನು ಉಳಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>