<p><strong>ಸವದತ್ತಿ</strong>: ತಾಲ್ಲೂಕಿನ ಆಚಮಟ್ಟಿ ಗ್ರಾಮದ ಜಮೀನಿನ ವಿವಾದದ ಕುರಿತು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ 6ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ ತಲಾ ₹50 ಸಾವಿರ ದಂಡ ವಿಧಿಸಿ ಶನಿವಾರ ತೀರ್ಪು ನೀಡಿದೆ.</p>.<p>ಆರೋಪಿಗಳಾದ ಆಚಮಟ್ಟಿ ಗ್ರಾಮದ ಓಂಕಾರಗೌಡ ಪಕ್ಕೀರಗೌಡ ಮೇಲಿನಮನಿ ಉರ್ಫ್ ಪಾಟೀಲ ಹಾಗೂ ದ್ಯಾಮನಗೌಡ ಪಕ್ಕೀರಗೌಡ ಮೇಲಿನಮನಿ ಉರ್ಫ್ ಪಾಟೀಲ, ಜಮೀನಿನ ಕುರಿತು ಮಕ್ಕಳಿಲ್ಲದ ತಮ್ಮ ಚಿಕ್ಕಪ್ಪ ಈರನಗೌಡ ರುದ್ರಗೌಡ ಮೇಲಿನಮನಿ ಉರ್ಫ್ ಪಾಟೀಲ (45) ಅವರನ್ನು ಕೊಲೆ ಮಾಡಿದ್ದರು.</p>.<p>ಮೃತ ಈರನಗೌಡ ಅವರ ಪತ್ನಿ ಶ್ರೀದೇವಿ, ಆರೋಪಿಗಳು ತಮ್ಮನ್ನು ಕೊಲೆ ಮಾಡಲು ಹಾಗೂ ಪುರಾವೆ ನಾಶ ಪಡಿಸಲು ಯತ್ನಿಸಿದ್ದರೆಂದು ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. </p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸಿದ ಇಲಾಖೆ ಆರೋಪಿಗಳ ಮೇಲೆ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ನ್ಯಾಯಾಧೀಶ ಎಚ್.ಎಸ್.ಮಂಜುನಾಥ ತೀರ್ಪು ನೀಡಿದ್ದಾರೆ. ಪಿಎಸ್ಐ ಶಿವಾನಂದ ಗುಡಗನಟ್ಟಿ ದಾಖಲಾಧಿಕಾರಿಯಾಗಿ, ಸಿಪಿಐ ಮಂಜುನಾಥ ನಡುವಿನಮನಿ ತನಿಖಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವದತ್ತಿ</strong>: ತಾಲ್ಲೂಕಿನ ಆಚಮಟ್ಟಿ ಗ್ರಾಮದ ಜಮೀನಿನ ವಿವಾದದ ಕುರಿತು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ 6ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ ತಲಾ ₹50 ಸಾವಿರ ದಂಡ ವಿಧಿಸಿ ಶನಿವಾರ ತೀರ್ಪು ನೀಡಿದೆ.</p>.<p>ಆರೋಪಿಗಳಾದ ಆಚಮಟ್ಟಿ ಗ್ರಾಮದ ಓಂಕಾರಗೌಡ ಪಕ್ಕೀರಗೌಡ ಮೇಲಿನಮನಿ ಉರ್ಫ್ ಪಾಟೀಲ ಹಾಗೂ ದ್ಯಾಮನಗೌಡ ಪಕ್ಕೀರಗೌಡ ಮೇಲಿನಮನಿ ಉರ್ಫ್ ಪಾಟೀಲ, ಜಮೀನಿನ ಕುರಿತು ಮಕ್ಕಳಿಲ್ಲದ ತಮ್ಮ ಚಿಕ್ಕಪ್ಪ ಈರನಗೌಡ ರುದ್ರಗೌಡ ಮೇಲಿನಮನಿ ಉರ್ಫ್ ಪಾಟೀಲ (45) ಅವರನ್ನು ಕೊಲೆ ಮಾಡಿದ್ದರು.</p>.<p>ಮೃತ ಈರನಗೌಡ ಅವರ ಪತ್ನಿ ಶ್ರೀದೇವಿ, ಆರೋಪಿಗಳು ತಮ್ಮನ್ನು ಕೊಲೆ ಮಾಡಲು ಹಾಗೂ ಪುರಾವೆ ನಾಶ ಪಡಿಸಲು ಯತ್ನಿಸಿದ್ದರೆಂದು ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. </p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸಿದ ಇಲಾಖೆ ಆರೋಪಿಗಳ ಮೇಲೆ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ನ್ಯಾಯಾಧೀಶ ಎಚ್.ಎಸ್.ಮಂಜುನಾಥ ತೀರ್ಪು ನೀಡಿದ್ದಾರೆ. ಪಿಎಸ್ಐ ಶಿವಾನಂದ ಗುಡಗನಟ್ಟಿ ದಾಖಲಾಧಿಕಾರಿಯಾಗಿ, ಸಿಪಿಐ ಮಂಜುನಾಥ ನಡುವಿನಮನಿ ತನಿಖಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>