<p><strong>ಬೆಳಗಾವಿ</strong>: ‘ಇಲ್ಲಿನ ಕೋನವಾಳ ಗಲ್ಲಿಯ ಲೋಕಮಾನ್ಯ ರಂಗಮಂದಿರದಲ್ಲಿ ಏ.13, 14ರಂದು ಸಂಜೆ 6.30ಕ್ಕೆ ರಾಘವೇಂದ್ರ ಸ್ವಾಮೀಜಿ ಜೀವನಾಧಾರಿತವಾದ ‘ಪರಿಮಳದವರು’ ನಾಟಕ ಪ್ರದರ್ಶನಗೊಳ್ಳಲಿದೆ’ ಎಂದು ರಂಗಸಂಪದ ಅಧ್ಯಕ್ಷ ಅರವಿಂದ ಕುಲಕರ್ಣಿ ಹೇಳಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕಮಾನ್ಯ ರಂಗಮಂದಿರದಲ್ಲಿ ಮಾ.29ರಂದು ಈ ನಾಟಕ ಪ್ರದರ್ಶಿಸಿದ್ದೆವು. ವೀಕ್ಷಣೆಗೆ ಜನರು ಕಿಕ್ಕಿರಿದು ಸೇರಿದ್ದರು. ಇನ್ನೂ ಕೆಲವು ಪ್ರದರ್ಶನ ನೀಡಬೇಕೆಂದು ಒತ್ತಾಯಿಸಿದರು. ಹಾಗಾಗಿ ಈಗ ಮತ್ತೆ ಪ್ರದರ್ಶಿಸುತ್ತಿದ್ದೇವೆ’ ಎಂದರು.</p>.<p>‘ಶ್ರೀಪತಿ ಮಂಜನಬೈಲು ನಿರ್ದೇಶಿಸಿರುವ ಈ ನಾಟಕದಲ್ಲಿ ನಾನು ರಾಘವೇಂದ್ರ ಸ್ವಾಮೀಜಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಪದ್ಮಾ ಕುಲಕರ್ಣಿ, ಪವಿತ್ರಾ ರೇವಣಕರ, ಸ್ನೇಹಾ ಜೋಶಿ ಮತ್ತಿತರರು ಅಭಿನಯಿಸಿದ್ದಾರೆ. ಪ್ರೇಕ್ಷಕರು ಉಚಿತವಾಗಿ ನಾಟಕ ವೀಕ್ಷಿಸಿ ಪ್ರೋತ್ಸಾಹಿಸಬೇಕು’ ಎಂದು ಮನವಿ ಮಾಡಿದರು.</p>.<p>ಡಾ.ಅರವಿಂದ ಕುಲಕರ್ಣಿ, ರಾಮಚಂದ್ರ ಕಟ್ಟಿ, ಪ್ರಸಾದ ಕಾರಜೋಳ, ದಿಲೀಪ ಮಳಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಇಲ್ಲಿನ ಕೋನವಾಳ ಗಲ್ಲಿಯ ಲೋಕಮಾನ್ಯ ರಂಗಮಂದಿರದಲ್ಲಿ ಏ.13, 14ರಂದು ಸಂಜೆ 6.30ಕ್ಕೆ ರಾಘವೇಂದ್ರ ಸ್ವಾಮೀಜಿ ಜೀವನಾಧಾರಿತವಾದ ‘ಪರಿಮಳದವರು’ ನಾಟಕ ಪ್ರದರ್ಶನಗೊಳ್ಳಲಿದೆ’ ಎಂದು ರಂಗಸಂಪದ ಅಧ್ಯಕ್ಷ ಅರವಿಂದ ಕುಲಕರ್ಣಿ ಹೇಳಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕಮಾನ್ಯ ರಂಗಮಂದಿರದಲ್ಲಿ ಮಾ.29ರಂದು ಈ ನಾಟಕ ಪ್ರದರ್ಶಿಸಿದ್ದೆವು. ವೀಕ್ಷಣೆಗೆ ಜನರು ಕಿಕ್ಕಿರಿದು ಸೇರಿದ್ದರು. ಇನ್ನೂ ಕೆಲವು ಪ್ರದರ್ಶನ ನೀಡಬೇಕೆಂದು ಒತ್ತಾಯಿಸಿದರು. ಹಾಗಾಗಿ ಈಗ ಮತ್ತೆ ಪ್ರದರ್ಶಿಸುತ್ತಿದ್ದೇವೆ’ ಎಂದರು.</p>.<p>‘ಶ್ರೀಪತಿ ಮಂಜನಬೈಲು ನಿರ್ದೇಶಿಸಿರುವ ಈ ನಾಟಕದಲ್ಲಿ ನಾನು ರಾಘವೇಂದ್ರ ಸ್ವಾಮೀಜಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಪದ್ಮಾ ಕುಲಕರ್ಣಿ, ಪವಿತ್ರಾ ರೇವಣಕರ, ಸ್ನೇಹಾ ಜೋಶಿ ಮತ್ತಿತರರು ಅಭಿನಯಿಸಿದ್ದಾರೆ. ಪ್ರೇಕ್ಷಕರು ಉಚಿತವಾಗಿ ನಾಟಕ ವೀಕ್ಷಿಸಿ ಪ್ರೋತ್ಸಾಹಿಸಬೇಕು’ ಎಂದು ಮನವಿ ಮಾಡಿದರು.</p>.<p>ಡಾ.ಅರವಿಂದ ಕುಲಕರ್ಣಿ, ರಾಮಚಂದ್ರ ಕಟ್ಟಿ, ಪ್ರಸಾದ ಕಾರಜೋಳ, ದಿಲೀಪ ಮಳಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>