<p>ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ವೇಳೆ ನಿಪ್ಪಾಣಿ ನಗರಸಭೆ ಕಚೇರಿ ಮೇಲೆ ಭಗವಾಧ್ವಜ ಹಾರಿಸಲು ಮುಂದಾದ ನಗರಸಭೆಯ ಎನ್ಸಿಪಿ ಬೆಂಬಲಿತ ಸದಸ್ಯರಾದ ಸಂಜಯ ಸಾಂಗಾವಕರ ಮತ್ತು ವಿನಾಯಕ ವಡೆ ಅವರನ್ನು ಪೊಲೀಸರು ತಡೆದರು.</p>.<p>ರಾಷ್ಟ್ರಧ್ವಜದ ಕಂಬದ ಪಕ್ಕದಲ್ಲೇ ಇರುವ ಇನ್ನೊಂದು ಕಂಬದಲ್ಲಿ ಹಳೆಯ ಭಗವಾಧ್ವಜ ತೆಗೆದು ಹೊಸ ಧ್ವಜ ಹಾರಿಸಲು ಮುಂದಾದಾಗ, ಇಬ್ಬರೂ ಸದಸ್ಯರು ಮತ್ತು ಪೊಲೀಸರ ಮಧ್ಯೆ ವಾಗ್ವಾದ ಆಯಿತು. ‘ರಾಷ್ಟ್ರಧ್ವಜ ಹೊರತುಪಡಿಸಿ ಬೇರೆ ಧ್ವಜ ಹಾರಿಸಲು ಅವಕಾಶವಿಲ್ಲ’ ಎಂದು ಪೊಲೀಸರು ಮನವರಿಕೆ ಮಾಡಿದರು.</p>.<p>‘ನಗರಸಭೆ ಸದಸ್ಯರ ಈ ರೀತಿಯ ಕೃತ್ಯ ಮೊದಲ ಸಲವಲ್ಲ. ರಾಷ್ಟ್ರೀಯ ಹಬ್ಬಗಳಲ್ಲಿ ಇಂಥ ಘಟನೆಗಳು ಪದೇಪದೇ ಜರುಗುತ್ತವೆ. ರಾಜ್ಯ ಸರ್ಕಾರ ಈ ಬಗ್ಗೆ ದಿಟ್ಟ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಸಮಾರಂಭದಲ್ಲಿ ಪಾಲ್ಗೊಂಡವರು ತಿಳಿಸಿದರು.</p>.<p>‘ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜ ಹೊರತುಪಡಿಸಿದರೆ, ಬೇರೆ ಯಾವುದೇ ಧ್ವಜ ಹಾರಿಸುವಂತಿಲ್ಲ. ರಾಷ್ಟ್ರಧ್ವಜ ಹಾರಿಸಿದ ಬಳಿಕ ಭಗವಾಧ್ವಜ ಹಾರಿಸಲು ಯತ್ನಿಸಿದವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುವರು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.</p>.<p>ಸಿಪಿಐ ಸಂಗಮೇಶ ಶಿವಯೋಗಿ, ಪಿಎಸ್ಐ ಉಮಾದೇವಿ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ವೇಳೆ ನಿಪ್ಪಾಣಿ ನಗರಸಭೆ ಕಚೇರಿ ಮೇಲೆ ಭಗವಾಧ್ವಜ ಹಾರಿಸಲು ಮುಂದಾದ ನಗರಸಭೆಯ ಎನ್ಸಿಪಿ ಬೆಂಬಲಿತ ಸದಸ್ಯರಾದ ಸಂಜಯ ಸಾಂಗಾವಕರ ಮತ್ತು ವಿನಾಯಕ ವಡೆ ಅವರನ್ನು ಪೊಲೀಸರು ತಡೆದರು.</p>.<p>ರಾಷ್ಟ್ರಧ್ವಜದ ಕಂಬದ ಪಕ್ಕದಲ್ಲೇ ಇರುವ ಇನ್ನೊಂದು ಕಂಬದಲ್ಲಿ ಹಳೆಯ ಭಗವಾಧ್ವಜ ತೆಗೆದು ಹೊಸ ಧ್ವಜ ಹಾರಿಸಲು ಮುಂದಾದಾಗ, ಇಬ್ಬರೂ ಸದಸ್ಯರು ಮತ್ತು ಪೊಲೀಸರ ಮಧ್ಯೆ ವಾಗ್ವಾದ ಆಯಿತು. ‘ರಾಷ್ಟ್ರಧ್ವಜ ಹೊರತುಪಡಿಸಿ ಬೇರೆ ಧ್ವಜ ಹಾರಿಸಲು ಅವಕಾಶವಿಲ್ಲ’ ಎಂದು ಪೊಲೀಸರು ಮನವರಿಕೆ ಮಾಡಿದರು.</p>.<p>‘ನಗರಸಭೆ ಸದಸ್ಯರ ಈ ರೀತಿಯ ಕೃತ್ಯ ಮೊದಲ ಸಲವಲ್ಲ. ರಾಷ್ಟ್ರೀಯ ಹಬ್ಬಗಳಲ್ಲಿ ಇಂಥ ಘಟನೆಗಳು ಪದೇಪದೇ ಜರುಗುತ್ತವೆ. ರಾಜ್ಯ ಸರ್ಕಾರ ಈ ಬಗ್ಗೆ ದಿಟ್ಟ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಸಮಾರಂಭದಲ್ಲಿ ಪಾಲ್ಗೊಂಡವರು ತಿಳಿಸಿದರು.</p>.<p>‘ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜ ಹೊರತುಪಡಿಸಿದರೆ, ಬೇರೆ ಯಾವುದೇ ಧ್ವಜ ಹಾರಿಸುವಂತಿಲ್ಲ. ರಾಷ್ಟ್ರಧ್ವಜ ಹಾರಿಸಿದ ಬಳಿಕ ಭಗವಾಧ್ವಜ ಹಾರಿಸಲು ಯತ್ನಿಸಿದವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುವರು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.</p>.<p>ಸಿಪಿಐ ಸಂಗಮೇಶ ಶಿವಯೋಗಿ, ಪಿಎಸ್ಐ ಉಮಾದೇವಿ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>