<p><strong>ಬೆಳಗಾವಿ:</strong> 'ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರು ಸಂದರ್ಭಕ್ಕೆ ತಕ್ಕಂತೆ ಧೈರ್ಯದಿಂದ ಕೆಲಸ ಮಾಡಬೇಕು' ಎಂದು ನಗರ ಪೊಲೀಸ್ ಕಮಿಷನರ್ ಎಸ್.ಎನ್.ಸಿದ್ರಾಮಪ್ಪ ಕರೆ ನೀಡಿದರು.</p><p>ಇಲ್ಲಿನ ಪೊಲೀಸ್ ಕವಾಯತು ಮೈದಾನದಲ್ಲಿ ತಮ್ಮ ಸೇವಾನಿವೃತ್ತಿ ಹಿನ್ನೆಲೆಯಲ್ಲಿ ಪೊಲೀಸರಿಂದ ಬುಧವಾರ ಗೌರವವಂದನೆ ಸ್ವೀಕರಿಸಿ ಅವರು ಮಾತನಾಡಿದರು.</p><p>'ಬೆಳಗಾವಿಯಲ್ಲಿ ನಡೆಯುವ ಗಣೇಶ ಉತ್ಸವದ ವಿಸರ್ಜನೆಯಂಥ ಸಂದರ್ಭ ನಾವು 18ರಿಂದ 20 ತಾಸು ಕೆಲಸ ಮಾಡಬೇಕಾಗುತ್ತದೆ. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ನಿಯಮಿತವಾಗಿ ವ್ಯಾಯಾಮ ಮಾಡಬೇಕು. ಪೊಲೀಸ್ ಇಲಾಖೆ ಘನತೆಗೆ ಚ್ಯುತಿ ಬಾರದಂತೆ, ನಾವು ಜನಸ್ನೇಹಿಯಾಗಿ ಕೆಲಸ ಮಾಡಬೇಕು' ಎಂದರು.</p><p>'ಯಾವುದೇ ಕೆಲಸದಲ್ಲಿ ಒಗ್ಗಟ್ಟು ಬಹಳ ಮುಖ್ಯ. ನಮ್ಮಲ್ಲಿ ಏನೇ ಭಿನ್ನಾಭಿಪ್ರಾಯಗಳಿದ್ದರೂ, ತಕ್ಷಣ ಬಗೆಹರಿಸಿಕೊಳ್ಳಬೇಕು. ಒಗ್ಗಟ್ಟಿನಿಂದ ಇದ್ದರೆ ಯಾವುದೇ ಪರಿಸ್ಥಿತಿ ಸುಲಭವಾಗಿ ನಿಭಾಯಿಸಬಹುದು' ಎಂದು ಹೇಳಿದರು.</p><p>'ಆರಕ್ಷಕರು ಜಾತ್ಯತೀತ ಮನೋಭಾವ ಬೆಳೆಸಿಕೊಳ್ಳಬೇಕು. ಅನ್ಯಾಯವಾದವರಿಗೆ ನ್ಯಾಯ ಒದಗಿಸಲು ಶ್ರಮಿಸಬೇಕು' ಎಂದೂ ಕರೆ ನೀಡಿದರು.</p><p>'ಆರಂಭದಲ್ಲಿ ಪೊಲೀಸ್ ಇಲಾಖೆಗೆ ಸೇರಬೇಕೋ, ಬೇಡವೋ ಎಂಬ ಗೊಂದಲದಲ್ಲಿದ್ದೆ. ಆದರೆ, ಮೇಲಧಿಕಾರಿಗಳ ಮಾರ್ಗದರ್ಶನ, ಸಹೋದ್ಯೋಗಿಗಳ ಸಹಕಾರದಿಂದ ಉತ್ತಮ ಕೆಲಸ ಮಾಡಿದೆ. ಹಲವು ಸವಾಲುಗಳನ್ನು ಎದುರಿಸಿ, ನಾನಾ ಅಪರಾಧ ಪ್ರಕರಣಗಳನ್ನು ಬೇಧಿಸಿದ್ದೇನೆ. ನನ್ನ ಅಧಿಕಾರಾವಧಿಯಲ್ಲಿ ಉತ್ತಮವಾಗಿ ಕೆಲಸ ಮಾಡಿದ ತೃಪ್ತಿಯಿದೆ' ಎಂದರು.</p><p>ನಗರ ಪೊಲೀಸ್ ಉಪ ಆಯುಕ್ತರಾದ ರೋಹನ್ ಜಗದೀಶ, ಪಿ.ವಿ.ಸ್ನೇಹಾ, ಪೊಲೀಸ್ ಅಧಿಕಾರಿಗಳು, ಉದ್ಯಮಿಗಳು, ವೈದ್ಯರು, ವಿವಿಧ ಸಂಘಟನೆಯವರು ಹಾಜರಿದ್ದರು.</p><p>ಪೊಲೀಸರು ಆಕರ್ಷಕವಾಗಿ ಪಥಸಂಚಲನ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> 'ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರು ಸಂದರ್ಭಕ್ಕೆ ತಕ್ಕಂತೆ ಧೈರ್ಯದಿಂದ ಕೆಲಸ ಮಾಡಬೇಕು' ಎಂದು ನಗರ ಪೊಲೀಸ್ ಕಮಿಷನರ್ ಎಸ್.ಎನ್.ಸಿದ್ರಾಮಪ್ಪ ಕರೆ ನೀಡಿದರು.</p><p>ಇಲ್ಲಿನ ಪೊಲೀಸ್ ಕವಾಯತು ಮೈದಾನದಲ್ಲಿ ತಮ್ಮ ಸೇವಾನಿವೃತ್ತಿ ಹಿನ್ನೆಲೆಯಲ್ಲಿ ಪೊಲೀಸರಿಂದ ಬುಧವಾರ ಗೌರವವಂದನೆ ಸ್ವೀಕರಿಸಿ ಅವರು ಮಾತನಾಡಿದರು.</p><p>'ಬೆಳಗಾವಿಯಲ್ಲಿ ನಡೆಯುವ ಗಣೇಶ ಉತ್ಸವದ ವಿಸರ್ಜನೆಯಂಥ ಸಂದರ್ಭ ನಾವು 18ರಿಂದ 20 ತಾಸು ಕೆಲಸ ಮಾಡಬೇಕಾಗುತ್ತದೆ. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ನಿಯಮಿತವಾಗಿ ವ್ಯಾಯಾಮ ಮಾಡಬೇಕು. ಪೊಲೀಸ್ ಇಲಾಖೆ ಘನತೆಗೆ ಚ್ಯುತಿ ಬಾರದಂತೆ, ನಾವು ಜನಸ್ನೇಹಿಯಾಗಿ ಕೆಲಸ ಮಾಡಬೇಕು' ಎಂದರು.</p><p>'ಯಾವುದೇ ಕೆಲಸದಲ್ಲಿ ಒಗ್ಗಟ್ಟು ಬಹಳ ಮುಖ್ಯ. ನಮ್ಮಲ್ಲಿ ಏನೇ ಭಿನ್ನಾಭಿಪ್ರಾಯಗಳಿದ್ದರೂ, ತಕ್ಷಣ ಬಗೆಹರಿಸಿಕೊಳ್ಳಬೇಕು. ಒಗ್ಗಟ್ಟಿನಿಂದ ಇದ್ದರೆ ಯಾವುದೇ ಪರಿಸ್ಥಿತಿ ಸುಲಭವಾಗಿ ನಿಭಾಯಿಸಬಹುದು' ಎಂದು ಹೇಳಿದರು.</p><p>'ಆರಕ್ಷಕರು ಜಾತ್ಯತೀತ ಮನೋಭಾವ ಬೆಳೆಸಿಕೊಳ್ಳಬೇಕು. ಅನ್ಯಾಯವಾದವರಿಗೆ ನ್ಯಾಯ ಒದಗಿಸಲು ಶ್ರಮಿಸಬೇಕು' ಎಂದೂ ಕರೆ ನೀಡಿದರು.</p><p>'ಆರಂಭದಲ್ಲಿ ಪೊಲೀಸ್ ಇಲಾಖೆಗೆ ಸೇರಬೇಕೋ, ಬೇಡವೋ ಎಂಬ ಗೊಂದಲದಲ್ಲಿದ್ದೆ. ಆದರೆ, ಮೇಲಧಿಕಾರಿಗಳ ಮಾರ್ಗದರ್ಶನ, ಸಹೋದ್ಯೋಗಿಗಳ ಸಹಕಾರದಿಂದ ಉತ್ತಮ ಕೆಲಸ ಮಾಡಿದೆ. ಹಲವು ಸವಾಲುಗಳನ್ನು ಎದುರಿಸಿ, ನಾನಾ ಅಪರಾಧ ಪ್ರಕರಣಗಳನ್ನು ಬೇಧಿಸಿದ್ದೇನೆ. ನನ್ನ ಅಧಿಕಾರಾವಧಿಯಲ್ಲಿ ಉತ್ತಮವಾಗಿ ಕೆಲಸ ಮಾಡಿದ ತೃಪ್ತಿಯಿದೆ' ಎಂದರು.</p><p>ನಗರ ಪೊಲೀಸ್ ಉಪ ಆಯುಕ್ತರಾದ ರೋಹನ್ ಜಗದೀಶ, ಪಿ.ವಿ.ಸ್ನೇಹಾ, ಪೊಲೀಸ್ ಅಧಿಕಾರಿಗಳು, ಉದ್ಯಮಿಗಳು, ವೈದ್ಯರು, ವಿವಿಧ ಸಂಘಟನೆಯವರು ಹಾಜರಿದ್ದರು.</p><p>ಪೊಲೀಸರು ಆಕರ್ಷಕವಾಗಿ ಪಥಸಂಚಲನ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>