<p><strong>ಚಿಕ್ಕೋಡಿ:</strong>‘ಕೇರಳದ ಶಬರಿಮಲೈ ಕ್ಷೇತ್ರಕ್ಕೆ ವರ್ಷಕ್ಕೆ 5 ಕೋಟಿಗೂ ಹೆಚ್ಚು ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಭೇಟಿ ನೀಡುತ್ತಾರೆ. ಅಲ್ಲಿನ ಸರ್ಕಾರಕ್ಕೆ ಪ್ರತಿ ವರ್ಷ ₹3 ಸಾವಿರ ಕೋಟಿ ಆದಾಯ ಬರುತ್ತಿದೆ. ಆದರೆ, ಅಲ್ಲಿ ಭಕ್ತರಿಗೆ ಮೂಲಸೌಲಭ್ಯ ಕಲ್ಪಿಸುತ್ತಿಲ್ಲ’ ಎಂದು ಶ್ರೀರಾಮಸೇನೆ ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ ಮುತಾಲಿಕ ಆರೋಪಿಸಿದರು.</p>.<p>‘ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ, ತಮಿಳುನಾಡು, ಕೇರಳದಿಂದ 1 ಕೋಟಿ ವಾಹನಗಳು ಪ್ರತಿವರ್ಷ ಈ ಕ್ಷೇತ್ರಕ್ಕೆ ಹೋಗುತ್ತವೆ. ಕೇರಳ ಸರ್ಕಾರ ಪ್ರತಿ ವಾಹನದಿಂದ ₹40 ವಸೂಲಿ ಮಾಡುತ್ತದೆ. ಅಲ್ಲಿನ ಸರ್ಕಾರವು ದೇವಸ್ಥಾನ ಸಮಿತಿ ಮೇಲೆ ಒತ್ತಡ ಹೇರಿ, ಸೌಲಭ್ಯ ಕಲ್ಪಿಸುತ್ತಿಲ್ಲ. ಶಬರಿಮಲೈಗೆ ಹೋಗುವ ಭಕ್ತರಿಗೆ ಕರ್ನಾಟಕ ಸರ್ಕಾರವೂ ಸೌಲಭ್ಯ ಕಲ್ಪಿಸಬೇಕು’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>ಅಯ್ಯಪ್ಪಸ್ವಾಮಿ ಮಾಲಾ ಧಾರಿಗಳಿಂದ ಸಂಗ್ರಹವಾದ ಆದಾಯವನ್ನು ಅವರಿಗೆ ಅನುಕೂಲ ಕಲ್ಪಿಸಲು ವಿನಿಯೋಗಿಸಬೇಕು. ಟೋಲ್ ನಾಕಾಗಳಲ್ಲಿ ಮಾಲಾಧಾರಿಗಳ ವಾಹನಗಳಿಗೆ ಉಚಿತವಾಗಿ ಪ್ರವೇಶ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong>‘ಕೇರಳದ ಶಬರಿಮಲೈ ಕ್ಷೇತ್ರಕ್ಕೆ ವರ್ಷಕ್ಕೆ 5 ಕೋಟಿಗೂ ಹೆಚ್ಚು ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಭೇಟಿ ನೀಡುತ್ತಾರೆ. ಅಲ್ಲಿನ ಸರ್ಕಾರಕ್ಕೆ ಪ್ರತಿ ವರ್ಷ ₹3 ಸಾವಿರ ಕೋಟಿ ಆದಾಯ ಬರುತ್ತಿದೆ. ಆದರೆ, ಅಲ್ಲಿ ಭಕ್ತರಿಗೆ ಮೂಲಸೌಲಭ್ಯ ಕಲ್ಪಿಸುತ್ತಿಲ್ಲ’ ಎಂದು ಶ್ರೀರಾಮಸೇನೆ ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ ಮುತಾಲಿಕ ಆರೋಪಿಸಿದರು.</p>.<p>‘ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ, ತಮಿಳುನಾಡು, ಕೇರಳದಿಂದ 1 ಕೋಟಿ ವಾಹನಗಳು ಪ್ರತಿವರ್ಷ ಈ ಕ್ಷೇತ್ರಕ್ಕೆ ಹೋಗುತ್ತವೆ. ಕೇರಳ ಸರ್ಕಾರ ಪ್ರತಿ ವಾಹನದಿಂದ ₹40 ವಸೂಲಿ ಮಾಡುತ್ತದೆ. ಅಲ್ಲಿನ ಸರ್ಕಾರವು ದೇವಸ್ಥಾನ ಸಮಿತಿ ಮೇಲೆ ಒತ್ತಡ ಹೇರಿ, ಸೌಲಭ್ಯ ಕಲ್ಪಿಸುತ್ತಿಲ್ಲ. ಶಬರಿಮಲೈಗೆ ಹೋಗುವ ಭಕ್ತರಿಗೆ ಕರ್ನಾಟಕ ಸರ್ಕಾರವೂ ಸೌಲಭ್ಯ ಕಲ್ಪಿಸಬೇಕು’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>ಅಯ್ಯಪ್ಪಸ್ವಾಮಿ ಮಾಲಾ ಧಾರಿಗಳಿಂದ ಸಂಗ್ರಹವಾದ ಆದಾಯವನ್ನು ಅವರಿಗೆ ಅನುಕೂಲ ಕಲ್ಪಿಸಲು ವಿನಿಯೋಗಿಸಬೇಕು. ಟೋಲ್ ನಾಕಾಗಳಲ್ಲಿ ಮಾಲಾಧಾರಿಗಳ ವಾಹನಗಳಿಗೆ ಉಚಿತವಾಗಿ ಪ್ರವೇಶ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>