<p><strong>ಸತ್ತಿಗೇರಿ/ ಮುಗಳಿಹಾಳ:</strong> ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ಯರಗಟ್ಟಿ ತಾಲ್ಲೂಕಿನ ಕೊಡ್ಲಿವಾಡ, ಅಕ್ಕಿಸಾಗರ ಗುಡಮಕೇರಿ, ಇಟ್ನಾಳ ಗ್ರಾಮಗಳಲ್ಲಿ ಬೆಳೆದ ಬೆಳೆಗಳು ಹಾನಿಯಾಗಿವೆ. ಹಾನಿ ಪರಿಶೀಲನೆಗೆ ಈಗಾಗಲೇ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡ ಸಮೀಕ್ಷೆ ಶುರು ಮಾಡಿದೆ.</p>.<p>ಯರಗಟ್ಟಿ ತಾಲ್ಲೂಕಿನ ಹತ್ತಿ, ಶೇಂಗಾ, ಈರುಳ್ಳಿ, ಗೋವಿನಜೋಳ ಮುಂತಾದ ಹಾನಿಗೊಳಗಾದ ಬೆಳೆಗಳನ್ನು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ್ ಪಾಟೀಲ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು, ಎ.ಬಿ. ಹುಣಶ್ಯಾಳ, ಕೃಷಿ ಇಲಾಖೆ ಅಧಿಕಾರಿ ಎಸ್.ಎಲ್. ದೇಸಾಯಿ ಹೊಲಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ರೈತ ಸಂಘದ ಮುಖಂಡ ಸಿಂದೂರ್ ತೆಗ್ಗಿ ಮಾತನಾಡಿ, ‘ರೈತರಿಗೆ ಈ ಬಾರಿ ಸಾಕಷ್ಟು ಬೆಳೆ ಹಾನಿಯಾಗಿದೆ. ಸಾಲ ಮಾಡಿ ರೈತ ಗೋವಿನ ಜೋಳ, ಹತ್ತಿ ಮುಂತಾದ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ನೀಡಬೇಕು’ ಎಂದು ಹೇಳಿದರು.</p>.<p>‘ಮಳೆಯಿಂದ ನೀರಾವರಿ, ಒಣಭೂಮಿಯ ಬೆಳೆಗಳೂ ಹಾಳಾಗಿವೆ. ಪರಿಹಾರ ಮತ್ತು ಬೆಳೆವಿಮೆ ನೀಡಬೇಕು. ಬೆಳೆ ಪರಿಹಾರ ನೀಡುವಲ್ಲಿ ಯಾವುದೇ ತಾರತಮ್ಯ ಮಾಡದೇ ಆದಷ್ಟು ಬೇಗನೆ ಪರಿಹಾರ ಒದಗಿಸಬೇಕು’ ಎಂದು ಅಗ್ರಹಿಸಿದರು.</p>.<p>ಕೃಷಿ ಸಂಜೀವಿನಿ ಸಿಬ್ಬಂದಿ, ಶ್ರವಣ್ ಶಿವಪೂಜಿ, ಮಂಜುನಾಥ್ ಮುಂದೇಶಿ ಮತ್ತಿತರರು ಉಪಸ್ಥಿತರಿದ್ದರು.</p>.<p>ಮುಗಳಿಹಾಳ ವರದಿ: ‘ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ಗ್ರಾಮದ ವ್ಯಾಪ್ತಿಯಲ್ಲಿ ಬೆಳೆದ ಬೆಳೆ ಹಾನಿಯಾದ ಹತ್ತಿ, ಶೇಂಗಾ, ಈರುಳ್ಳಿ, ಗೋವಿನಜೋಳ ಮುಂತಾದ ಬೆಳೆಗಳು ಹಾಳಾಗಿದ್ದು, ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ್ ಪಾಟೀಲ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸತ್ತಿಗೇರಿ/ ಮುಗಳಿಹಾಳ:</strong> ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ಯರಗಟ್ಟಿ ತಾಲ್ಲೂಕಿನ ಕೊಡ್ಲಿವಾಡ, ಅಕ್ಕಿಸಾಗರ ಗುಡಮಕೇರಿ, ಇಟ್ನಾಳ ಗ್ರಾಮಗಳಲ್ಲಿ ಬೆಳೆದ ಬೆಳೆಗಳು ಹಾನಿಯಾಗಿವೆ. ಹಾನಿ ಪರಿಶೀಲನೆಗೆ ಈಗಾಗಲೇ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡ ಸಮೀಕ್ಷೆ ಶುರು ಮಾಡಿದೆ.</p>.<p>ಯರಗಟ್ಟಿ ತಾಲ್ಲೂಕಿನ ಹತ್ತಿ, ಶೇಂಗಾ, ಈರುಳ್ಳಿ, ಗೋವಿನಜೋಳ ಮುಂತಾದ ಹಾನಿಗೊಳಗಾದ ಬೆಳೆಗಳನ್ನು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ್ ಪಾಟೀಲ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು, ಎ.ಬಿ. ಹುಣಶ್ಯಾಳ, ಕೃಷಿ ಇಲಾಖೆ ಅಧಿಕಾರಿ ಎಸ್.ಎಲ್. ದೇಸಾಯಿ ಹೊಲಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ರೈತ ಸಂಘದ ಮುಖಂಡ ಸಿಂದೂರ್ ತೆಗ್ಗಿ ಮಾತನಾಡಿ, ‘ರೈತರಿಗೆ ಈ ಬಾರಿ ಸಾಕಷ್ಟು ಬೆಳೆ ಹಾನಿಯಾಗಿದೆ. ಸಾಲ ಮಾಡಿ ರೈತ ಗೋವಿನ ಜೋಳ, ಹತ್ತಿ ಮುಂತಾದ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ನೀಡಬೇಕು’ ಎಂದು ಹೇಳಿದರು.</p>.<p>‘ಮಳೆಯಿಂದ ನೀರಾವರಿ, ಒಣಭೂಮಿಯ ಬೆಳೆಗಳೂ ಹಾಳಾಗಿವೆ. ಪರಿಹಾರ ಮತ್ತು ಬೆಳೆವಿಮೆ ನೀಡಬೇಕು. ಬೆಳೆ ಪರಿಹಾರ ನೀಡುವಲ್ಲಿ ಯಾವುದೇ ತಾರತಮ್ಯ ಮಾಡದೇ ಆದಷ್ಟು ಬೇಗನೆ ಪರಿಹಾರ ಒದಗಿಸಬೇಕು’ ಎಂದು ಅಗ್ರಹಿಸಿದರು.</p>.<p>ಕೃಷಿ ಸಂಜೀವಿನಿ ಸಿಬ್ಬಂದಿ, ಶ್ರವಣ್ ಶಿವಪೂಜಿ, ಮಂಜುನಾಥ್ ಮುಂದೇಶಿ ಮತ್ತಿತರರು ಉಪಸ್ಥಿತರಿದ್ದರು.</p>.<p>ಮುಗಳಿಹಾಳ ವರದಿ: ‘ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ಗ್ರಾಮದ ವ್ಯಾಪ್ತಿಯಲ್ಲಿ ಬೆಳೆದ ಬೆಳೆ ಹಾನಿಯಾದ ಹತ್ತಿ, ಶೇಂಗಾ, ಈರುಳ್ಳಿ, ಗೋವಿನಜೋಳ ಮುಂತಾದ ಬೆಳೆಗಳು ಹಾಳಾಗಿದ್ದು, ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ್ ಪಾಟೀಲ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>