<p><strong>ಗೋಕಾಕ</strong>: ಘಟಪ್ರಭಾ ನದಿ ತೀರದ ಮತ್ತು ತಗ್ಗು ಪ್ರದೇಶಗಳ ಜನರನ್ನು ಕಾಳಜಿ ಕೇಂದ್ರ ಅಥವಾ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸ ಬೇಕು. ಜಾನುವಾರಿಗೂ ಸೂಕ್ತ ರಕ್ಷಣೆ ಮತ್ತು ಉಪಚಾರ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆಯಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ತಿಳಿಸಿದರು.</p>.<p>ನಗರದ ತಗ್ಗು ಪ್ರದೇಶಗಳಾದ ಶಿಂಧಿಖೂಟ್, ಮಟನ್ ಮಾರ್ಕೆಟ್, ಕುಂಬಾರ ಓಣಿ, ಡೋಹರ, ಉಪ್ಪಾರ, ಪಿಂಜಾರ ಗಲ್ಲಿ, ಮಾಖಂಡೇಯ ನಗರ ಬಡಾವಣೆ ವಿವಿದ ಪ್ರದೇಶಗಳಿಗೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ಅವಲೋಕಿಸಿ, ಸರ್ಕಾರಿ ಪ.ಪೂ. ಕಾಲೇಜು ಮತ್ತು ಎಪಿಎಂಸಿ ಆವರಣದಲ್ಲಿ ತಾಲ್ಲೂಕು ಆಡಳಿತ ಆರಂಭಿಸಿರುವ ಕಾಳಜಿ ಕೇಂದ್ರಗಳಿಗೂ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ಪ್ರವಾಹ ಭೀತಿಯಲ್ಲಿ ಇರುವುದು ನೋವಿನ ಸಂಗತಿ ಆಗಿದ್ದು, ಅವರ ಸುರಕ್ಷತೆ ಮತ್ತು ಪುನರ್ವಸತಿ ಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.</p>.<p>ಇಲ್ಲಿನ ಸರ್ಕಾರಿ ಪ.ಪೂ. ಮಹಾವಿದ್ಯಾಲಯ ಮತ್ತು ಎಪಿಎಂಸಿ ಆವರಣದಲ್ಲಿ ಪ್ರವಾಹ ಪೀಡಿತರಿಗಾಗಿ ಆರಂಭಿಸಿರುವ ಕಾಳಜಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮೊಹ್ಮದ ರೋಷನ್ ಭೇಟಿ ನೀಡಿ, ನಿರಾಶ್ರಿತರಿಗೆ ಒದಗಿಸಿರುವ ಸೌಕರ್ಯಗಳನ್ನು ಪರಿಶೀಲಿಸಿದರು.</p>.<p>ತಹಶೀಲ್ದಾರ್ ಮೋಹನ ಭಸ್ಮೆ, ನಗರಸಭೆ ಪೌರಾಯುಕ್ತ ರಮೇಶ ಜಾಧವ, ಡಿವೈಎಸ್ಪಿ ಡಿ.ಎಚ್.ಮುಲ್ಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ</strong>: ಘಟಪ್ರಭಾ ನದಿ ತೀರದ ಮತ್ತು ತಗ್ಗು ಪ್ರದೇಶಗಳ ಜನರನ್ನು ಕಾಳಜಿ ಕೇಂದ್ರ ಅಥವಾ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸ ಬೇಕು. ಜಾನುವಾರಿಗೂ ಸೂಕ್ತ ರಕ್ಷಣೆ ಮತ್ತು ಉಪಚಾರ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆಯಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ತಿಳಿಸಿದರು.</p>.<p>ನಗರದ ತಗ್ಗು ಪ್ರದೇಶಗಳಾದ ಶಿಂಧಿಖೂಟ್, ಮಟನ್ ಮಾರ್ಕೆಟ್, ಕುಂಬಾರ ಓಣಿ, ಡೋಹರ, ಉಪ್ಪಾರ, ಪಿಂಜಾರ ಗಲ್ಲಿ, ಮಾಖಂಡೇಯ ನಗರ ಬಡಾವಣೆ ವಿವಿದ ಪ್ರದೇಶಗಳಿಗೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ಅವಲೋಕಿಸಿ, ಸರ್ಕಾರಿ ಪ.ಪೂ. ಕಾಲೇಜು ಮತ್ತು ಎಪಿಎಂಸಿ ಆವರಣದಲ್ಲಿ ತಾಲ್ಲೂಕು ಆಡಳಿತ ಆರಂಭಿಸಿರುವ ಕಾಳಜಿ ಕೇಂದ್ರಗಳಿಗೂ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ಪ್ರವಾಹ ಭೀತಿಯಲ್ಲಿ ಇರುವುದು ನೋವಿನ ಸಂಗತಿ ಆಗಿದ್ದು, ಅವರ ಸುರಕ್ಷತೆ ಮತ್ತು ಪುನರ್ವಸತಿ ಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.</p>.<p>ಇಲ್ಲಿನ ಸರ್ಕಾರಿ ಪ.ಪೂ. ಮಹಾವಿದ್ಯಾಲಯ ಮತ್ತು ಎಪಿಎಂಸಿ ಆವರಣದಲ್ಲಿ ಪ್ರವಾಹ ಪೀಡಿತರಿಗಾಗಿ ಆರಂಭಿಸಿರುವ ಕಾಳಜಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮೊಹ್ಮದ ರೋಷನ್ ಭೇಟಿ ನೀಡಿ, ನಿರಾಶ್ರಿತರಿಗೆ ಒದಗಿಸಿರುವ ಸೌಕರ್ಯಗಳನ್ನು ಪರಿಶೀಲಿಸಿದರು.</p>.<p>ತಹಶೀಲ್ದಾರ್ ಮೋಹನ ಭಸ್ಮೆ, ನಗರಸಭೆ ಪೌರಾಯುಕ್ತ ರಮೇಶ ಜಾಧವ, ಡಿವೈಎಸ್ಪಿ ಡಿ.ಎಚ್.ಮುಲ್ಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>