<p><strong>ಚಿಕ್ಕೋಡಿ:</strong> ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಗುರುವಾರ ಸ್ವಲ್ಪ ಬಿಡುವು ನೀಡಿದ್ದ ಮಳೆಯು ಶುಕ್ರವಾರ ಮತ್ತೆ ಅಬ್ಬರಿಸಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ ಹಾಗೂ ಉಪನದಿಗಳ ನೀರಿನಲ್ಲಿ ಏರಿಕೆ ಕಂಡುಬಂದಿದೆ.</p>.<p>ಮಹಾರಾಷ್ಟ್ರದ ಕೊಯ್ನಾದಲ್ಲಿ 11.4 ಸೆ.ಮೀ, ವಾರಣಾದಲ್ಲಿ 5.5 ಸೆ.ಮೀ, ಕಾಳಮ್ಮವಾಡಿಯಲ್ಲಿ 7.3 ಸೆ.ಮೀ, ಮಹಾಬಳೇಶ್ವರದಲ್ಲಿ 13.1 ಸೆ.ಮೀ, ನವಜಾದಲ್ಲಿ 16.6 ಸೆ.ಮೀ, ರಾಧಾನಗರಿಯಲ್ಲಿ 16.3 ಸೆ.ಮೀ ಕೊಲ್ಹಾಪುರದಲ್ಲಿ 2.2 ಸೆ.ಮೀ ಮಳೆಯಾಗಿದೆ.</p>.<p>ದೂಧಗಂಗಾ ಮತ್ತು ವೇದಗಂಗಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದರಿಂದ ಈ ಎರಡೂ ನದಿಗಳಲ್ಲಿ ನೀರಿನ ಹರಿವು ಕ್ಷಣದಿಂದ ಕ್ಷಣಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ನಿಪ್ಪಾಣಿ ತಾಲ್ಲೂಕಿನಲ್ಲಿ ವೇದಗಂಗಾ ನದಿಗೆ ಕಟ್ಟಲಾದ ಜತ್ರಾಟ– ಭಿವಶಿ, ಅಕ್ಕೋಳ– ಸಿದ್ನಾಳ, ಬೋಜವಾಡಿ– ಕುನ್ನೂರು ಕಿರು ಸೇತುವೆಗಳು ಜಲಾವೃತಗೊಂಡಿವೆ.</p>.<p>ದೂಧಗಂಗಾ ನದಿಯ ನಿಪ್ಪಾಣಿ ತಾಲ್ಲೂಕಿನ ಕಾರದಗಾ–ಭೋಜ, ಚಿಕ್ಕೋಡಿ ತಾಲ್ಲೂಕಿನ ಮಲಿಕವಾಡ–ದತ್ತವಾಡ ಸೇತುವೆಗಲು ಮುಳುಗಡೆಯಾಗಿವೆ. ಈ ಎಲ್ಲ ಸೇತುವೆಗಳ ಮೇಲೆ ಸಂಚಾರ ಸ್ಥಗಿತಗೊಂಡಿದೆ.</p>.<p>ತಾಲೂಕಿನ ಕಲ್ಲೋಳ–ಯಡೂರ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಯಿಂದ 46 ಸಾವಿರ ಕ್ಯುಸೆಕ್ ಹಾಗೂ ದೂಧಗಂಗಾ ನದಿಯಿಂದ 15 ಸಾವಿರಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೀಗೆ ಕಲ್ಲೋಳ ಬಳಿಯ ಕೃಷ್ಣಾ-ದೂಧಗಂಗಾ ಸಂಗಮ ಸ್ಥಳದಲ್ಲಿ 61,130 ಕ್ಯುಸೆಕ್ ಹೊರ ಹರಿವು ಇದೆ.</p>.<p>ಅಲ್ಲಲ್ಲಿ ಹೊಲ ಗದ್ದೆಗಳಿಗೆ ನದಿ ನೀರು ನುಗ್ಗಿದೆ. ಕಬ್ಬು, ಸೋಯಾಬಿನ್ ಸೇರಿದಂತೆ ವಿವಿಧ ಬೆಳೆಯು ನೀರಿನಲ್ಲಿ ನಿಂತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong> ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಗುರುವಾರ ಸ್ವಲ್ಪ ಬಿಡುವು ನೀಡಿದ್ದ ಮಳೆಯು ಶುಕ್ರವಾರ ಮತ್ತೆ ಅಬ್ಬರಿಸಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ ಹಾಗೂ ಉಪನದಿಗಳ ನೀರಿನಲ್ಲಿ ಏರಿಕೆ ಕಂಡುಬಂದಿದೆ.</p>.<p>ಮಹಾರಾಷ್ಟ್ರದ ಕೊಯ್ನಾದಲ್ಲಿ 11.4 ಸೆ.ಮೀ, ವಾರಣಾದಲ್ಲಿ 5.5 ಸೆ.ಮೀ, ಕಾಳಮ್ಮವಾಡಿಯಲ್ಲಿ 7.3 ಸೆ.ಮೀ, ಮಹಾಬಳೇಶ್ವರದಲ್ಲಿ 13.1 ಸೆ.ಮೀ, ನವಜಾದಲ್ಲಿ 16.6 ಸೆ.ಮೀ, ರಾಧಾನಗರಿಯಲ್ಲಿ 16.3 ಸೆ.ಮೀ ಕೊಲ್ಹಾಪುರದಲ್ಲಿ 2.2 ಸೆ.ಮೀ ಮಳೆಯಾಗಿದೆ.</p>.<p>ದೂಧಗಂಗಾ ಮತ್ತು ವೇದಗಂಗಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದರಿಂದ ಈ ಎರಡೂ ನದಿಗಳಲ್ಲಿ ನೀರಿನ ಹರಿವು ಕ್ಷಣದಿಂದ ಕ್ಷಣಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ನಿಪ್ಪಾಣಿ ತಾಲ್ಲೂಕಿನಲ್ಲಿ ವೇದಗಂಗಾ ನದಿಗೆ ಕಟ್ಟಲಾದ ಜತ್ರಾಟ– ಭಿವಶಿ, ಅಕ್ಕೋಳ– ಸಿದ್ನಾಳ, ಬೋಜವಾಡಿ– ಕುನ್ನೂರು ಕಿರು ಸೇತುವೆಗಳು ಜಲಾವೃತಗೊಂಡಿವೆ.</p>.<p>ದೂಧಗಂಗಾ ನದಿಯ ನಿಪ್ಪಾಣಿ ತಾಲ್ಲೂಕಿನ ಕಾರದಗಾ–ಭೋಜ, ಚಿಕ್ಕೋಡಿ ತಾಲ್ಲೂಕಿನ ಮಲಿಕವಾಡ–ದತ್ತವಾಡ ಸೇತುವೆಗಲು ಮುಳುಗಡೆಯಾಗಿವೆ. ಈ ಎಲ್ಲ ಸೇತುವೆಗಳ ಮೇಲೆ ಸಂಚಾರ ಸ್ಥಗಿತಗೊಂಡಿದೆ.</p>.<p>ತಾಲೂಕಿನ ಕಲ್ಲೋಳ–ಯಡೂರ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಯಿಂದ 46 ಸಾವಿರ ಕ್ಯುಸೆಕ್ ಹಾಗೂ ದೂಧಗಂಗಾ ನದಿಯಿಂದ 15 ಸಾವಿರಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೀಗೆ ಕಲ್ಲೋಳ ಬಳಿಯ ಕೃಷ್ಣಾ-ದೂಧಗಂಗಾ ಸಂಗಮ ಸ್ಥಳದಲ್ಲಿ 61,130 ಕ್ಯುಸೆಕ್ ಹೊರ ಹರಿವು ಇದೆ.</p>.<p>ಅಲ್ಲಲ್ಲಿ ಹೊಲ ಗದ್ದೆಗಳಿಗೆ ನದಿ ನೀರು ನುಗ್ಗಿದೆ. ಕಬ್ಬು, ಸೋಯಾಬಿನ್ ಸೇರಿದಂತೆ ವಿವಿಧ ಬೆಳೆಯು ನೀರಿನಲ್ಲಿ ನಿಂತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>