<p><strong>ಬೆಳಗಾವಿ:</strong> ‘ಸಾಹಿತಿ ಕಮಲಾ ಹಂಪನಾ ಭಿನ್ನವಾದ ನೆಲೆಯಲ್ಲಿ ಜೈನಶಾಸ್ತ್ರ, ಸೃಜನಶೀಲ ಸಾಹಿತ್ಯ ರಚಿಸಲು ಪ್ರಯತ್ನಿಸಿದ್ದಾರೆ. ಒಂದು ದೊಡ್ಡ ಆಲದ ಮರದ ನೆರಳಿನಲ್ಲಿ ಇನ್ನೊಂದು ಆಲದ ಮರದಂತೆ ಸಾಹಿತ್ಯ ಬೆಳೆಸಿದ್ದಾರೆ’ ಎಂದು ಹಾವೇರಿಯ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ.ಭಾಸ್ಕರ ಹೇಳಿದರು.</p>.<p>ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆ, ಮಹಿಳಾ ಸಬಲೀಕರಣ ಕೋಶ, ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಶಾಖೆ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ನಾಡೋಜ ಕಮಲಾ ಹಂಪನಾ ಸಾಹಿತ್ಯ’ ಕುರಿತು ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ, ‘ಮಹಿಳೆಯರು ವೃತ್ತಿ ಮತ್ತು ಪ್ರವೃತ್ತಿ ಬಗ್ಗೆ ಸದಾ ಜಾಗೃತರಾಗಿರಬೇಕು. ಸೃಜನಶೀಲ ಮತ್ತು ಸಂಶೋಧನಾ ಬರಹದ ಮೂಲಕ ತಮ್ಮ ಅಧ್ಯಾಪನ ಸದೃಢಗೊಳಿಸಿಕೊಂಡು, ವಿದ್ಯಾರ್ಥಿಗಳಲ್ಲಿ ಚೈತನ್ಯ ತುಂಬುವ ಕೆಲಸವಾಗಬೇಕು’ ಎಂದರು.</p>.<p>ಕುಲಸಚಿವೆ ರಾಜಶ್ರೀ ಜೈನಾಪುರ, ‘ಸಾಹಿತ್ಯದ ಜತಗಿನ ಸಂಬಂಧ ನಮ್ಮನ್ನು ಸದಾ ವೈಚಾರಿಕ ಪ್ರಜ್ಞೆಯತ್ತ ಕರೆದ್ಯೊಯ್ಯುತ್ತದೆ. ವಿದ್ಯಾರ್ಥಿಗಳು ಪಠ್ಯ ಮತ್ತು ಇತರೆ ಸಾಹಿತ್ಯದ ಜತೆಗೆ ಸದಾ ಅನುಸಂಧಾನದಲ್ಲಿ ತೊಡಗಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ಲೇಖಕಿಯರ ಸಂಘದ ಬೆಳಗಾವಿ ಶಾಖೆ ಅಧ್ಯಕ್ಷೆ ಕೆ.ಆರ್.ಸಿದ್ದಗಂಗಮ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಂಗಾಬಿಕೆ ಬೆಂಗಳೂರು ಪ್ರಬಂಧ ಮಂಡಿಸಿದರು. </p>.<p>ಮಹಿಳಾ ಸಬಲೀಕರಣ ಕೋಶದ ಅಧ್ಯಕ್ಷೆ ಪ್ರೊ.ಕೆ.ಬಿ.ಚಂದ್ರಿಕಾ ಉಪಸ್ಥಿತರಿದ್ದರು. ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಮುಖ್ಯಸ್ಥ ಪ್ರೊ.ಗುಂಡಣ್ಣ ಕಲಬುರ್ಗಿ ಸ್ವಾಗತಿಸಿದರು. ಗಜಾನನ ನಾಯ್ಕ ನಿರೂಪಿಸಿದರು. ಪಿ.ನಾಗರಾಜ ವಂದಿಸಿದರು. </p>.<p>ನಯನಾ ಗಿರಿಗೌಡರ ಅವರು, ಕಮಲಾ ಹಂಪನಾ ರಚಿಸಿದ ಗೀತ ಗಾಯನ ಗೋಷ್ಠಿ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಸಾಹಿತಿ ಕಮಲಾ ಹಂಪನಾ ಭಿನ್ನವಾದ ನೆಲೆಯಲ್ಲಿ ಜೈನಶಾಸ್ತ್ರ, ಸೃಜನಶೀಲ ಸಾಹಿತ್ಯ ರಚಿಸಲು ಪ್ರಯತ್ನಿಸಿದ್ದಾರೆ. ಒಂದು ದೊಡ್ಡ ಆಲದ ಮರದ ನೆರಳಿನಲ್ಲಿ ಇನ್ನೊಂದು ಆಲದ ಮರದಂತೆ ಸಾಹಿತ್ಯ ಬೆಳೆಸಿದ್ದಾರೆ’ ಎಂದು ಹಾವೇರಿಯ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ.ಭಾಸ್ಕರ ಹೇಳಿದರು.</p>.<p>ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆ, ಮಹಿಳಾ ಸಬಲೀಕರಣ ಕೋಶ, ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಶಾಖೆ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ನಾಡೋಜ ಕಮಲಾ ಹಂಪನಾ ಸಾಹಿತ್ಯ’ ಕುರಿತು ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ, ‘ಮಹಿಳೆಯರು ವೃತ್ತಿ ಮತ್ತು ಪ್ರವೃತ್ತಿ ಬಗ್ಗೆ ಸದಾ ಜಾಗೃತರಾಗಿರಬೇಕು. ಸೃಜನಶೀಲ ಮತ್ತು ಸಂಶೋಧನಾ ಬರಹದ ಮೂಲಕ ತಮ್ಮ ಅಧ್ಯಾಪನ ಸದೃಢಗೊಳಿಸಿಕೊಂಡು, ವಿದ್ಯಾರ್ಥಿಗಳಲ್ಲಿ ಚೈತನ್ಯ ತುಂಬುವ ಕೆಲಸವಾಗಬೇಕು’ ಎಂದರು.</p>.<p>ಕುಲಸಚಿವೆ ರಾಜಶ್ರೀ ಜೈನಾಪುರ, ‘ಸಾಹಿತ್ಯದ ಜತಗಿನ ಸಂಬಂಧ ನಮ್ಮನ್ನು ಸದಾ ವೈಚಾರಿಕ ಪ್ರಜ್ಞೆಯತ್ತ ಕರೆದ್ಯೊಯ್ಯುತ್ತದೆ. ವಿದ್ಯಾರ್ಥಿಗಳು ಪಠ್ಯ ಮತ್ತು ಇತರೆ ಸಾಹಿತ್ಯದ ಜತೆಗೆ ಸದಾ ಅನುಸಂಧಾನದಲ್ಲಿ ತೊಡಗಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ಲೇಖಕಿಯರ ಸಂಘದ ಬೆಳಗಾವಿ ಶಾಖೆ ಅಧ್ಯಕ್ಷೆ ಕೆ.ಆರ್.ಸಿದ್ದಗಂಗಮ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಂಗಾಬಿಕೆ ಬೆಂಗಳೂರು ಪ್ರಬಂಧ ಮಂಡಿಸಿದರು. </p>.<p>ಮಹಿಳಾ ಸಬಲೀಕರಣ ಕೋಶದ ಅಧ್ಯಕ್ಷೆ ಪ್ರೊ.ಕೆ.ಬಿ.ಚಂದ್ರಿಕಾ ಉಪಸ್ಥಿತರಿದ್ದರು. ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಮುಖ್ಯಸ್ಥ ಪ್ರೊ.ಗುಂಡಣ್ಣ ಕಲಬುರ್ಗಿ ಸ್ವಾಗತಿಸಿದರು. ಗಜಾನನ ನಾಯ್ಕ ನಿರೂಪಿಸಿದರು. ಪಿ.ನಾಗರಾಜ ವಂದಿಸಿದರು. </p>.<p>ನಯನಾ ಗಿರಿಗೌಡರ ಅವರು, ಕಮಲಾ ಹಂಪನಾ ರಚಿಸಿದ ಗೀತ ಗಾಯನ ಗೋಷ್ಠಿ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>