<p><strong>ರಾಮದುರ್ಗ:</strong> ಗಿಡ-ಮರ, ಕೆರೆ-ಕಟ್ಟೆಗಳು ಮಾಯವಾಗಿ ಕಾಂಕ್ರೀಟ್ ಕಾಡು ಬೆಳೆಯುತ್ತಿರುವ ಕಾರಣ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಲವಕುಮಾರ ಹೇಳಿದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದ ಅಡಿಯಲ್ಲಿ ತಾಲ್ಲೂಕಿನ ಪಂಚಗಾಂವಿ ಗ್ರಾಮದಲ್ಲಿ ಪುನಶ್ಚೇತನಗೊಂಡ 635ನೇ ಕೆರೆ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಊರ ಮಧ್ಯೆ ಆಲದ ಮರ ಹಾಗೂ ಊರಿಗೊಂದು ಕೆರೆ ಇರಬೇಕು ಎಂದು ಹೇಳಲಾಗುತ್ತಿದೆ. ಕಾಲ ಬದಲಾದಂತೆ ಗಿಡ–ಮರಗಳು, ಕೆರೆ ಕಟ್ಟೆಗಳು ಉಳ್ಳವರ ಪಾಲಾಗುತ್ತಿವೆ’ ಎಂದು ಹೇಳಿದರು.</p>.<p>‘ಕೆರೆಗಳು ತುಂಬಿ ಹರಿದರೆ ಗ್ರಾಮದಲ್ಲಿನ ಸೊಬಗು ಹೆಚ್ಚುತ್ತದೆ. ಹೀಗಾಗಿ ಧರ್ಮಸ್ಥಳ ಸಂಸ್ಥೆ ಹೂಳು ತುಂಬಿದ ಮತ್ತು ನಿರುಪಯುಕ್ತವಾದ ಕೆರೆಗಳನ್ನು ದತ್ತು ಪಡೆದು ಹೂಳು ತೆಗೆದು ಅದೇ ಗ್ರಾಮಕ್ಕೆ ಹಸ್ತಾಂತರಿಸುವ ಕಾರ್ಯವನ್ನು ಕಳೆದ 8 ವರ್ಷಗಳಿಂದ ನಡೆಸುತ್ತಿದೆ. ಈಗಾಗಲೆ ರಾಜ್ಯದಲ್ಲಿ 700 ಕೆರೆಗಳು ಅಭಿವೃದ್ಧಿ ಕಂಡು ಸಮೃದ್ಧವಾಗಿ ನೀರು ತುಂಬಿ ಕಂಗೊಳಿಸುತ್ತಿವೆ’ ಎಂದರು.</p>.<p>ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಕುಳ್ಳೂರು ಮಠದ ಬಸವಾನಂದ ಭಾರತಿ ಸ್ವಾಮೀಜಿ ಮಾತನಾಡಿ, ‘ಮಾನವ ಜೀವನ ನೀರಿನೊಂದಿಗೆ ಆರಂಭವಾಗಿ ನೀರಿನೊಂದಿಗೆ ಮುಕ್ತಾಯವಾಗುತ್ತದೆ. ಅಂತಹ ಪವಿತ್ರ ನೀರನ್ನು ಉಳಿಸಲು ಧರ್ಮಸ್ಥಳ ಸಂಸ್ಥೆ ಪಣ ತೊಟ್ಟಿದೆ’ ಎಂದು ಹೇಳಿದರು.</p>.<p>ನಾಮಫಲಕ ಅನಾವರಣಗೊಳಿಸಿದ ಉದಪುಡಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅರ್ಜುನ ಬಡಿಗೇರ, ಕೆರೆ ಸಮಿತಿ ಅಧ್ಯಕ್ಷ ರುದ್ರಗೌಡ ಪಾಟೀಲ ಮಾತನಾಡಿದರು.</p>.<p>ಗ್ರಾಮದ ಹಿರಿಯರಾದ ಕಾಜಾಮೀರ ಖಾಜಿ, ಗೋಪಾಲ ಲಕ್ಷಾಣಿ, ಶಂಕರಗೌಡ ಪಾಟೀಲ, ಸದಸ್ಯೆ ಗೀತಾ ಮಿರ್ಜಿ, ಜಿ.ಬಿ. ರಂಗನಗೌಡ್ರ ಇದ್ದರು.</p>.<p>ಧಾರವಾಡ ಪ್ರಾದೇಶಿಕ ವಿಭಾಗದ ಕೆರೆ ಎಂಜಿನಿಯರ್ ನಿಂಗರಾಜ ಮಾಳವಾಡ ಪ್ರಾಸ್ತಾವಿಕ ಮಾತನಾಡಿದರು. ಲೋಕೇಶ ಅರುಣ ಗೌಡ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಕೃಷಿ ಅಧಿಕಾರಿ ಪ್ರದೀಪ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ:</strong> ಗಿಡ-ಮರ, ಕೆರೆ-ಕಟ್ಟೆಗಳು ಮಾಯವಾಗಿ ಕಾಂಕ್ರೀಟ್ ಕಾಡು ಬೆಳೆಯುತ್ತಿರುವ ಕಾರಣ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಲವಕುಮಾರ ಹೇಳಿದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದ ಅಡಿಯಲ್ಲಿ ತಾಲ್ಲೂಕಿನ ಪಂಚಗಾಂವಿ ಗ್ರಾಮದಲ್ಲಿ ಪುನಶ್ಚೇತನಗೊಂಡ 635ನೇ ಕೆರೆ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಊರ ಮಧ್ಯೆ ಆಲದ ಮರ ಹಾಗೂ ಊರಿಗೊಂದು ಕೆರೆ ಇರಬೇಕು ಎಂದು ಹೇಳಲಾಗುತ್ತಿದೆ. ಕಾಲ ಬದಲಾದಂತೆ ಗಿಡ–ಮರಗಳು, ಕೆರೆ ಕಟ್ಟೆಗಳು ಉಳ್ಳವರ ಪಾಲಾಗುತ್ತಿವೆ’ ಎಂದು ಹೇಳಿದರು.</p>.<p>‘ಕೆರೆಗಳು ತುಂಬಿ ಹರಿದರೆ ಗ್ರಾಮದಲ್ಲಿನ ಸೊಬಗು ಹೆಚ್ಚುತ್ತದೆ. ಹೀಗಾಗಿ ಧರ್ಮಸ್ಥಳ ಸಂಸ್ಥೆ ಹೂಳು ತುಂಬಿದ ಮತ್ತು ನಿರುಪಯುಕ್ತವಾದ ಕೆರೆಗಳನ್ನು ದತ್ತು ಪಡೆದು ಹೂಳು ತೆಗೆದು ಅದೇ ಗ್ರಾಮಕ್ಕೆ ಹಸ್ತಾಂತರಿಸುವ ಕಾರ್ಯವನ್ನು ಕಳೆದ 8 ವರ್ಷಗಳಿಂದ ನಡೆಸುತ್ತಿದೆ. ಈಗಾಗಲೆ ರಾಜ್ಯದಲ್ಲಿ 700 ಕೆರೆಗಳು ಅಭಿವೃದ್ಧಿ ಕಂಡು ಸಮೃದ್ಧವಾಗಿ ನೀರು ತುಂಬಿ ಕಂಗೊಳಿಸುತ್ತಿವೆ’ ಎಂದರು.</p>.<p>ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಕುಳ್ಳೂರು ಮಠದ ಬಸವಾನಂದ ಭಾರತಿ ಸ್ವಾಮೀಜಿ ಮಾತನಾಡಿ, ‘ಮಾನವ ಜೀವನ ನೀರಿನೊಂದಿಗೆ ಆರಂಭವಾಗಿ ನೀರಿನೊಂದಿಗೆ ಮುಕ್ತಾಯವಾಗುತ್ತದೆ. ಅಂತಹ ಪವಿತ್ರ ನೀರನ್ನು ಉಳಿಸಲು ಧರ್ಮಸ್ಥಳ ಸಂಸ್ಥೆ ಪಣ ತೊಟ್ಟಿದೆ’ ಎಂದು ಹೇಳಿದರು.</p>.<p>ನಾಮಫಲಕ ಅನಾವರಣಗೊಳಿಸಿದ ಉದಪುಡಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅರ್ಜುನ ಬಡಿಗೇರ, ಕೆರೆ ಸಮಿತಿ ಅಧ್ಯಕ್ಷ ರುದ್ರಗೌಡ ಪಾಟೀಲ ಮಾತನಾಡಿದರು.</p>.<p>ಗ್ರಾಮದ ಹಿರಿಯರಾದ ಕಾಜಾಮೀರ ಖಾಜಿ, ಗೋಪಾಲ ಲಕ್ಷಾಣಿ, ಶಂಕರಗೌಡ ಪಾಟೀಲ, ಸದಸ್ಯೆ ಗೀತಾ ಮಿರ್ಜಿ, ಜಿ.ಬಿ. ರಂಗನಗೌಡ್ರ ಇದ್ದರು.</p>.<p>ಧಾರವಾಡ ಪ್ರಾದೇಶಿಕ ವಿಭಾಗದ ಕೆರೆ ಎಂಜಿನಿಯರ್ ನಿಂಗರಾಜ ಮಾಳವಾಡ ಪ್ರಾಸ್ತಾವಿಕ ಮಾತನಾಡಿದರು. ಲೋಕೇಶ ಅರುಣ ಗೌಡ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಕೃಷಿ ಅಧಿಕಾರಿ ಪ್ರದೀಪ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>