<p><strong>ಬೆಳಗಾವಿ</strong>: ‘ಇಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಕನ್ನಡ ಭಾಷೆಯನ್ನು ಆದ್ಯತೆ ಮೇರೆಗೆ ಬಳಸಬೇಕಿದೆ. ರಾಜ್ಯ ಸರ್ಕಾರವೂ ಕನ್ನಡವನ್ನು ಅನ್ನದ ಭಾಷೆಯಾಗಿ ಪರಿವರ್ತಿಸಬೇಕಿದೆ’ ಎಂದು ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರದಿಂದ ಆರಂಭಗೊಂಡ ಐದು ದಿನಗಳ ನಾಡಹಬ್ಬ ಉತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p><p>‘ಇಂದು ಪಾಲಕರಲ್ಲಿ ಇಂಗ್ಲಿಷ್ ವ್ಯಾಮೋಹ ಹೆಚ್ಚಾಗಿದೆ. ಅದೇ ಅನ್ನದ ಭಾಷೆಯೂ ಆಗಿದೆ. ಎಲ್ಲಿಯವರೆಗೆ ಕನ್ನಡವೂ ಅನ್ನದ ಭಾಷೆಯಾಗುವುದಿಲ್ಲವೋ, ಅಲ್ಲಿಯವರೆಗೆ ಜನರು ಕನ್ನಡದ ಬಗ್ಗೆ ಒಲವು ತೋರುವುದಿಲ್ಲ’ ಎಂದರು.</p><p>‘ಸೀರೆಗೆ ದಡಿ ಗಟ್ಟಿ ಇರುವಂತೆ, ನಾಡಿಗೆ ಗಟ್ಟಿ ಇರಬೇಕು. ಹಾಗಾಗಿ ಗಡಿಭಾಗದ ಬೆಳವಣಿಗೆಗೆ ಸರ್ಕಾರ ಕ್ರಮ ವಹಿಸಬೇಕು. ಗಡಿಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿರುವ ಕನ್ನಡ ಶಾಲೆಗಳ ಸುಧಾರಣೆಯತ್ತ ಗಮನಹರಿಸಬೇಕು’ ಎಂದರು.</p><p>‘ಯಾವ ಕಾಲಕ್ಕೂ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಲು ಬಿಡುವುದಿಲ್ಲ. ಇದು ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಆದರೆ, ಗಡಿಗೆ ಸಂಬಂಧಿಸಿದ ಪ್ರಾಧಿಕಾರಗಳ ಅಧ್ಯಕ್ಷರು ಗಡಿಗಳನ್ನೇ ನಿರ್ಲಕ್ಷಿಸುತ್ತಿರುವುದು ಸರಿಯಲ್ಲ’ ಎಂದು ಬೇಸರಿಸಿದರು.</p><p>ಉದ್ಘಾಟಿಸಿದ ಸಂಸದ ಜಗದೀಶ ಶೆಟ್ಟರ್, ‘ಪ್ರಸ್ತುತ ಕಾಲಘಟ್ಟದಲ್ಲಿ ಕನ್ನಡ ಉಳಿಸಿ, ಬೆಳೆಸಿಕೊಂಡು ಹೋಗುವ ಕೆಲಸವಾಗಬೇಕಿದೆ. ಕನ್ನಡದ ಬಗ್ಗೆ ಜಾಗೃತಿ ಮೂಡಿಸಬೇಕಿದೆ’ ಎಂದರು.</p><p>‘ಗಡಿಯಲ್ಲಿ ಕನ್ನಡ ಕಟ್ಟುವ ಸಲುವಾಗಿ 97 ವರ್ಷಗಳಿಂದ ನಾಡಹಬ್ಬ ಉತ್ಸವ ಆಚರಿಸುತ್ತಿರುವುದು ಶ್ಲಾಘನೀಯ. ಈ ಭಾಗದಲ್ಲಿ ಕನ್ನಡದ ಬೆಳವಣಿಗೆಗೆ ನಾಗನೂರು ರುದ್ರಾಕ್ಷಿಮಠದ ಕೊಡುಗೆಯೂ ದೊಡ್ಡದಿದೆ’ ಎಂದರು.</p><p>ಮಾಜಿ ಸಂಸದೆ ಮಂಗಲಾ ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ಬಿ.ಎಸ್.ಗವಿಮಠ ಉಪನ್ಯಾಸ ನೀಡಿದರು. ನಾಡಹಬ್ಬ ಉತ್ಸವ ಸಮಿತಿ ಅಧ್ಯಕ್ಷ ಎಚ್.ಬಿ.ರಾಜಶೇಖರ, ಪ್ರಧಾನ ಕಾರ್ಯದರ್ಶಿ ಸಿ.ಕೆ.ಜೋರಾಪುರ, ಎಚ್.ಐ.ತಿಮ್ಮಾಪುರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಇಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಕನ್ನಡ ಭಾಷೆಯನ್ನು ಆದ್ಯತೆ ಮೇರೆಗೆ ಬಳಸಬೇಕಿದೆ. ರಾಜ್ಯ ಸರ್ಕಾರವೂ ಕನ್ನಡವನ್ನು ಅನ್ನದ ಭಾಷೆಯಾಗಿ ಪರಿವರ್ತಿಸಬೇಕಿದೆ’ ಎಂದು ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರದಿಂದ ಆರಂಭಗೊಂಡ ಐದು ದಿನಗಳ ನಾಡಹಬ್ಬ ಉತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p><p>‘ಇಂದು ಪಾಲಕರಲ್ಲಿ ಇಂಗ್ಲಿಷ್ ವ್ಯಾಮೋಹ ಹೆಚ್ಚಾಗಿದೆ. ಅದೇ ಅನ್ನದ ಭಾಷೆಯೂ ಆಗಿದೆ. ಎಲ್ಲಿಯವರೆಗೆ ಕನ್ನಡವೂ ಅನ್ನದ ಭಾಷೆಯಾಗುವುದಿಲ್ಲವೋ, ಅಲ್ಲಿಯವರೆಗೆ ಜನರು ಕನ್ನಡದ ಬಗ್ಗೆ ಒಲವು ತೋರುವುದಿಲ್ಲ’ ಎಂದರು.</p><p>‘ಸೀರೆಗೆ ದಡಿ ಗಟ್ಟಿ ಇರುವಂತೆ, ನಾಡಿಗೆ ಗಟ್ಟಿ ಇರಬೇಕು. ಹಾಗಾಗಿ ಗಡಿಭಾಗದ ಬೆಳವಣಿಗೆಗೆ ಸರ್ಕಾರ ಕ್ರಮ ವಹಿಸಬೇಕು. ಗಡಿಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿರುವ ಕನ್ನಡ ಶಾಲೆಗಳ ಸುಧಾರಣೆಯತ್ತ ಗಮನಹರಿಸಬೇಕು’ ಎಂದರು.</p><p>‘ಯಾವ ಕಾಲಕ್ಕೂ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಲು ಬಿಡುವುದಿಲ್ಲ. ಇದು ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಆದರೆ, ಗಡಿಗೆ ಸಂಬಂಧಿಸಿದ ಪ್ರಾಧಿಕಾರಗಳ ಅಧ್ಯಕ್ಷರು ಗಡಿಗಳನ್ನೇ ನಿರ್ಲಕ್ಷಿಸುತ್ತಿರುವುದು ಸರಿಯಲ್ಲ’ ಎಂದು ಬೇಸರಿಸಿದರು.</p><p>ಉದ್ಘಾಟಿಸಿದ ಸಂಸದ ಜಗದೀಶ ಶೆಟ್ಟರ್, ‘ಪ್ರಸ್ತುತ ಕಾಲಘಟ್ಟದಲ್ಲಿ ಕನ್ನಡ ಉಳಿಸಿ, ಬೆಳೆಸಿಕೊಂಡು ಹೋಗುವ ಕೆಲಸವಾಗಬೇಕಿದೆ. ಕನ್ನಡದ ಬಗ್ಗೆ ಜಾಗೃತಿ ಮೂಡಿಸಬೇಕಿದೆ’ ಎಂದರು.</p><p>‘ಗಡಿಯಲ್ಲಿ ಕನ್ನಡ ಕಟ್ಟುವ ಸಲುವಾಗಿ 97 ವರ್ಷಗಳಿಂದ ನಾಡಹಬ್ಬ ಉತ್ಸವ ಆಚರಿಸುತ್ತಿರುವುದು ಶ್ಲಾಘನೀಯ. ಈ ಭಾಗದಲ್ಲಿ ಕನ್ನಡದ ಬೆಳವಣಿಗೆಗೆ ನಾಗನೂರು ರುದ್ರಾಕ್ಷಿಮಠದ ಕೊಡುಗೆಯೂ ದೊಡ್ಡದಿದೆ’ ಎಂದರು.</p><p>ಮಾಜಿ ಸಂಸದೆ ಮಂಗಲಾ ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ಬಿ.ಎಸ್.ಗವಿಮಠ ಉಪನ್ಯಾಸ ನೀಡಿದರು. ನಾಡಹಬ್ಬ ಉತ್ಸವ ಸಮಿತಿ ಅಧ್ಯಕ್ಷ ಎಚ್.ಬಿ.ರಾಜಶೇಖರ, ಪ್ರಧಾನ ಕಾರ್ಯದರ್ಶಿ ಸಿ.ಕೆ.ಜೋರಾಪುರ, ಎಚ್.ಐ.ತಿಮ್ಮಾಪುರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>