<p><strong>ಗೋಕಾಕ</strong>: ತಾಲ್ಲೂಕಿನ ಹಿರೇನಂದಿ ಕ್ರಾಸ್ ಬಳಿ ರಸ್ತೆ ಮೇಲೆ ನಿಂತಿದ್ದ ಕಬ್ಬು ಹೇರಿದ ಟ್ರ್ಯಾಕ್ಟರ್ಗೆ ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದ ಪರಿಣಾಮ ಟೆಂಪೊದಲ್ಲಿದ್ದ 13 ಪೊಲೀಸ್ ಸಿಬ್ಬಂದಿ ಹಾಗೂ ಚಾಲಕ ಗಾಯಗೊಂಡ ಘಟನೆ ಸೋಮವಾರ ನಸುಕಿನಲ್ಲಿ ನಡೆದಿದೆ.</p>.<p>ತೀವ್ರವಾಗಿ ಗಾಯಗೊಂಡ ದಾವಣೆಗೆರೆ ಜಿಲ್ಲೆಯ ಹೊನ್ನಾಳಿಯ ಕಡಬಕಟ್ಟಿ ಗ್ರಾಮದ ಅಣ್ಣಪ್ಪ, ಕೊಪ್ಪಳ ಜಿಲ್ಲೆ ಕನಕಗಿರಿಯ ಸೋಮನಾಥ ನಿಂಗಪ್ಪ ಕುಂಬಾರ, ಶಿವಮೊಗ್ಗ ಜಿಲ್ಲೆಯ ಸೊರಬದ ಸುಮಗಿ ಗ್ರಾಮದ ರಘು ಅವರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕೋಣನತೆಲೆಯ ವರುಣ ಆಂಜನೇಯ (ಚಾಲಕ), ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬರೂರ ಗ್ರಾಮದ ಸೌರವಕುಮಾರ, ಕಡೂರಿನ ಶೀಗೆಅಡಲು ಗ್ರಾಮದ ಎಸ್.ಬಿ.ಮಲ್ಲೇಶಪ್ಪ, ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕವಲಗಾ ಗ್ರಾಮದ ಸಿದ್ದಲಿಂಗ ಚಂದ್ರಕಾಂತ ನಿಂಬಾಳ, ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಅಲದಾಳ ಗ್ರಾಮದ ಪ್ರವೀಣಕುಮಾರ, ಬೈಲಹೊಂಗಲ ತಾಲ್ಲೂಕಿನ ಪುಲರಕೊಪ್ಪದ ಆನಂದ ವಾಸಪ್ಪ ಪುಂಡಲೀಕನವರ, ಅಥಣಿ ತಾಲ್ಲೂಕಿನ ಅಡಹಟ್ಟಿ ಗ್ರಾಮದ ಸುನೀಲ ಶೇಖರ ಹಿಪ್ಪರಗಿ, ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಂ.ಜೆ.ಪ್ರದೀಪ, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮದ್ವೇರು ಗ್ರಾಮದ ಜಿ.ಎಂ.ಅಕ್ಷಯಕುಮಾರ, ರಾಯಚೂರು ಜಿಲ್ಲೆಯ ಶಿರವಾರ ತಾಲ್ಲೂಕಿನ ಬಾಗವಾಡ ಗ್ರಾಮದ ರಮೇಶ ಮುದಕಪ್ಪ, ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಅರಕೇರಿ ಗ್ರಾಮದ ಸಲೀಮಸಾಬ ಡೊಂಗರಿ ಜಮಾದಾರ ಅವರಿಗೆ ಪುಟ್ಟ ಗಾಯಗಳಾಗಿವೆ.</p>.<p>ಟೆಂಪೊ ಚಾಲಕ ವರುಣ ಆಂಜನೇಯ ಹಾಗೂ ಟ್ರ್ಯಾಕ್ಟರ್ ಚಾಲಕ ಮಹಾರಾಷ್ಟ್ರ ಮೂಲದ ಸತೀಶ ತಾತ್ಯಾಬಾ ಚೋರಮಾಲೆ ವಿರುದ್ಧ ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ</strong>: ತಾಲ್ಲೂಕಿನ ಹಿರೇನಂದಿ ಕ್ರಾಸ್ ಬಳಿ ರಸ್ತೆ ಮೇಲೆ ನಿಂತಿದ್ದ ಕಬ್ಬು ಹೇರಿದ ಟ್ರ್ಯಾಕ್ಟರ್ಗೆ ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದ ಪರಿಣಾಮ ಟೆಂಪೊದಲ್ಲಿದ್ದ 13 ಪೊಲೀಸ್ ಸಿಬ್ಬಂದಿ ಹಾಗೂ ಚಾಲಕ ಗಾಯಗೊಂಡ ಘಟನೆ ಸೋಮವಾರ ನಸುಕಿನಲ್ಲಿ ನಡೆದಿದೆ.</p>.<p>ತೀವ್ರವಾಗಿ ಗಾಯಗೊಂಡ ದಾವಣೆಗೆರೆ ಜಿಲ್ಲೆಯ ಹೊನ್ನಾಳಿಯ ಕಡಬಕಟ್ಟಿ ಗ್ರಾಮದ ಅಣ್ಣಪ್ಪ, ಕೊಪ್ಪಳ ಜಿಲ್ಲೆ ಕನಕಗಿರಿಯ ಸೋಮನಾಥ ನಿಂಗಪ್ಪ ಕುಂಬಾರ, ಶಿವಮೊಗ್ಗ ಜಿಲ್ಲೆಯ ಸೊರಬದ ಸುಮಗಿ ಗ್ರಾಮದ ರಘು ಅವರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕೋಣನತೆಲೆಯ ವರುಣ ಆಂಜನೇಯ (ಚಾಲಕ), ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬರೂರ ಗ್ರಾಮದ ಸೌರವಕುಮಾರ, ಕಡೂರಿನ ಶೀಗೆಅಡಲು ಗ್ರಾಮದ ಎಸ್.ಬಿ.ಮಲ್ಲೇಶಪ್ಪ, ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕವಲಗಾ ಗ್ರಾಮದ ಸಿದ್ದಲಿಂಗ ಚಂದ್ರಕಾಂತ ನಿಂಬಾಳ, ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಅಲದಾಳ ಗ್ರಾಮದ ಪ್ರವೀಣಕುಮಾರ, ಬೈಲಹೊಂಗಲ ತಾಲ್ಲೂಕಿನ ಪುಲರಕೊಪ್ಪದ ಆನಂದ ವಾಸಪ್ಪ ಪುಂಡಲೀಕನವರ, ಅಥಣಿ ತಾಲ್ಲೂಕಿನ ಅಡಹಟ್ಟಿ ಗ್ರಾಮದ ಸುನೀಲ ಶೇಖರ ಹಿಪ್ಪರಗಿ, ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಂ.ಜೆ.ಪ್ರದೀಪ, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮದ್ವೇರು ಗ್ರಾಮದ ಜಿ.ಎಂ.ಅಕ್ಷಯಕುಮಾರ, ರಾಯಚೂರು ಜಿಲ್ಲೆಯ ಶಿರವಾರ ತಾಲ್ಲೂಕಿನ ಬಾಗವಾಡ ಗ್ರಾಮದ ರಮೇಶ ಮುದಕಪ್ಪ, ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಅರಕೇರಿ ಗ್ರಾಮದ ಸಲೀಮಸಾಬ ಡೊಂಗರಿ ಜಮಾದಾರ ಅವರಿಗೆ ಪುಟ್ಟ ಗಾಯಗಳಾಗಿವೆ.</p>.<p>ಟೆಂಪೊ ಚಾಲಕ ವರುಣ ಆಂಜನೇಯ ಹಾಗೂ ಟ್ರ್ಯಾಕ್ಟರ್ ಚಾಲಕ ಮಹಾರಾಷ್ಟ್ರ ಮೂಲದ ಸತೀಶ ತಾತ್ಯಾಬಾ ಚೋರಮಾಲೆ ವಿರುದ್ಧ ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>