<p><strong>ರಾಮದುರ್ಗ</strong>: ‘ಸಮಾಜದಲ್ಲಿ ಲಯನ್ಸ್ ಸಂಸ್ಥೆ ಹಲವಾರು ಜನಪರ ಕಾರ್ಯಕ್ರಮವನ್ನು ಹಾಕಿಕೊಂಡು ಉತ್ತಮ ಕೆಲಸವನ್ನು ಮಾಡುತ್ತಿದೆ. ಸುಸಜ್ಜಿತ ಕಣ್ಣಿನ ಆಸ್ಪತ್ರೆಯನ್ನು ಸ್ಥಾಪಿಸಿ ಬಡವರ ಪಾಲಿಗೆ ಸಂಜೀವಿನಿಯಾಗಿ ಕೆಲಸ ಮಾಡುತ್ತಿದೆ’ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಪಟ್ಟಣದ ಪಿ.ಎಂ. ಪಾಲರೇಶಾ ಲಯನ್ಸ್ ಕಣ್ಣಿನ ಆಸ್ಪತ್ರೆಯಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕಣ್ಣಿನ ಆಸ್ಪತ್ರೆಯ ಅಭಿವೃದ್ದಿಗೆ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಲ್ಲಿ ಅನುದಾನ ನೀಡುವುದಾಗಿ ಭರವಸೆ ನೀಡಿದರು.</p>.<p>ಪದಗ್ರಹಣ ನೆರವೇರಿಸಿದ ಭಾರತಿ ಒಡವಿ ಮಾತನಾಡಿ, ಲಯನ್ಸ್ ಸಂಸ್ಥೆಯು ಸಮಾಜದ ಸಮಗ್ರ ಏಳಿಗೆಗೆ ಯಾವ ರೀತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬುದನ್ನು ವಿವರಿಸಿದರು.</p>.<p>ಲಯನ್ಸ್ ರಾಮದುರ್ಗ ಘಟಕದ ನೂತನ ಅಧ್ಯಕ್ಷರಾಗಿ ಪ್ರಭಾಕರ ಕಂಬಾರ, ಕಾರ್ಯದರ್ಶಿಯಾಗಿ ಸುನೀಲ ಹೊಂಗಲ, ಖಜಾಂಚಿಯಾಗಿ ಬಿ.ಪಿ. ಅರಳಿಮಟ್ಟಿ ಹಾಗೂ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.</p>.<p>ಸಂಸ್ಥೆಯ ಟ್ರಸ್ಟ್ ಅಧ್ಯಕ್ಷ ಬಾಬಣ್ಣಾ ಪತ್ತೆಪೂರ, ನಿಕಟಪೂರ್ವ ಅಧ್ಯಕ್ಷ ವೆಂಕಟೇಶ ಜಾಯಿ, ಸಾಹಿತಿ ಜ್ಯೋತಿ ಬದಾಮಿ ಗಂಗಾಧರ ಕಮ್ಮಾರ ಹಾಗೂ ಇತರರು ವೇದಿಕೆಯ ಮೇಲೆ ಇದ್ದರು.</p>.<p>ವೈಶಾಲಿ ಹಿರೇರಡ್ಡಿ ಕಾರ್ಯಕ್ರಮ ನಿರೂಪಿಸಿದರು. ವೈಶಾಲಿ ಸಂಕನಗೌಡ್ರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ</strong>: ‘ಸಮಾಜದಲ್ಲಿ ಲಯನ್ಸ್ ಸಂಸ್ಥೆ ಹಲವಾರು ಜನಪರ ಕಾರ್ಯಕ್ರಮವನ್ನು ಹಾಕಿಕೊಂಡು ಉತ್ತಮ ಕೆಲಸವನ್ನು ಮಾಡುತ್ತಿದೆ. ಸುಸಜ್ಜಿತ ಕಣ್ಣಿನ ಆಸ್ಪತ್ರೆಯನ್ನು ಸ್ಥಾಪಿಸಿ ಬಡವರ ಪಾಲಿಗೆ ಸಂಜೀವಿನಿಯಾಗಿ ಕೆಲಸ ಮಾಡುತ್ತಿದೆ’ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಪಟ್ಟಣದ ಪಿ.ಎಂ. ಪಾಲರೇಶಾ ಲಯನ್ಸ್ ಕಣ್ಣಿನ ಆಸ್ಪತ್ರೆಯಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕಣ್ಣಿನ ಆಸ್ಪತ್ರೆಯ ಅಭಿವೃದ್ದಿಗೆ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಲ್ಲಿ ಅನುದಾನ ನೀಡುವುದಾಗಿ ಭರವಸೆ ನೀಡಿದರು.</p>.<p>ಪದಗ್ರಹಣ ನೆರವೇರಿಸಿದ ಭಾರತಿ ಒಡವಿ ಮಾತನಾಡಿ, ಲಯನ್ಸ್ ಸಂಸ್ಥೆಯು ಸಮಾಜದ ಸಮಗ್ರ ಏಳಿಗೆಗೆ ಯಾವ ರೀತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬುದನ್ನು ವಿವರಿಸಿದರು.</p>.<p>ಲಯನ್ಸ್ ರಾಮದುರ್ಗ ಘಟಕದ ನೂತನ ಅಧ್ಯಕ್ಷರಾಗಿ ಪ್ರಭಾಕರ ಕಂಬಾರ, ಕಾರ್ಯದರ್ಶಿಯಾಗಿ ಸುನೀಲ ಹೊಂಗಲ, ಖಜಾಂಚಿಯಾಗಿ ಬಿ.ಪಿ. ಅರಳಿಮಟ್ಟಿ ಹಾಗೂ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.</p>.<p>ಸಂಸ್ಥೆಯ ಟ್ರಸ್ಟ್ ಅಧ್ಯಕ್ಷ ಬಾಬಣ್ಣಾ ಪತ್ತೆಪೂರ, ನಿಕಟಪೂರ್ವ ಅಧ್ಯಕ್ಷ ವೆಂಕಟೇಶ ಜಾಯಿ, ಸಾಹಿತಿ ಜ್ಯೋತಿ ಬದಾಮಿ ಗಂಗಾಧರ ಕಮ್ಮಾರ ಹಾಗೂ ಇತರರು ವೇದಿಕೆಯ ಮೇಲೆ ಇದ್ದರು.</p>.<p>ವೈಶಾಲಿ ಹಿರೇರಡ್ಡಿ ಕಾರ್ಯಕ್ರಮ ನಿರೂಪಿಸಿದರು. ವೈಶಾಲಿ ಸಂಕನಗೌಡ್ರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>