<p><strong>ಮೂಡಲಗಿ(ಬೆಳಗಾವಿ ಜಿಲ್ಲೆ):</strong> ಸತತ ಮಳೆಯಿಂದಾಗಿ ತಾಲ್ಲೂಕಿನ ಅವರಾದಿ ಸೇತುವೆ ಮುಳುಗಡೆಯಾಗಿದೆ. ಅಪಾಯದ ಮುನ್ಸೂಚನೆ ಮೀರಿ, ಭಾನುವಾರ ಬೆಳಿಗ್ಗೆ ಈ ಸೇತುವೆ ದಾಟುತ್ತಿದ್ದಾಗ ಟ್ರ್ಯಾಕ್ಟರ್ ಮಗುಚಿ ನದಿಗೆ ಬಿದ್ದಿದೆ.</p><p>ಈ ವೇಳೆ, ಘಟಪ್ರಭಾ ನದಿ ನೀರಿನ ಸೆಳವಿಗೆ ಸಿಕ್ಕು ಮುಳುಗುತ್ತಿದ್ದ 10 ಜನರ ಪೈಕಿ 9 ಮಂದಿ ಈಜಿ ದಡ ಸೇರಿದ್ದಾರೆ. ಮತ್ತೊಬ್ಬರಿಗಾಗಿ ಗೋಕಾಕದ ಅಗ್ನಿಶಾಮಕ ಠಾಣೆ ಹಾಗೂ ಎಸ್ಡಿಆರ್ಎಫ್ ತಂಡದವರು ಕಾರ್ಯಾಚರಣೆ ನಡೆಸಿದ್ದಾರೆ.</p><p>‘ಹೆಸ್ಕಾಂ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು, ಎರಡು ಟ್ರ್ಯಾಕ್ಟರ್ಗಳಲ್ಲಿ ಯಾದವಾಡದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರಕ್ಕೆ ಹೋಗುತ್ತಿದ್ದರು. ಸ್ಥಳೀಯರು ಒಂದು ಟ್ರ್ಯಾಕ್ಟರ್ ವಾಪಸ್ ಕಳುಹಿಸಿದ್ದರು. ಇನ್ನೊಂದು ಟ್ರ್ಯಾಕ್ಟರ್</p><p>ನವರು ಅಪಾಯದ ಮುನ್ಸೂಚನೆ ಮೀರಿಯೂ ಸೇತುವೆ ದಾಟುತ್ತಿದ್ದಾಗ ಅವಘಡ ಸಂಭವಿಸಿದೆ’ ಎಂದು ಕುಲಗೋಡ ಪಿಎಸ್ಐ ಬಿ.ಆನಂದ ‘ಪ್ರಜಾವಾಣಿ’ಗೆ ತಿಳಿಸಿದರು.</p><p>‘ಈ ಸೇತುವೆ ಮುಳುಗಡೆಯಾಗಿ ನಾಲ್ಕು ದಿನಗಳಾಯಿತು. ಸಂಚಾರ ನಿರ್ಬಂಧಕ್ಕಾಗಿ ಬ್ಯಾರಿಕೇಡ್ ಅಳವಡಿಸಿದ್ದೆವು. ಆದರೂ, ಕೆಲವರು ಅಪಾಯ ಲೆಕ್ಕಿಸದೆ ಸಂಚರಿಸುತ್ತಿರುವ ಕಾರಣ ಇಂಥ ಅವಘಡ ಸಂಭವಿಸುತ್ತಿದೆ’ ಎಂದು ಅವರು ಹೇಳಿದರು.</p><p><strong>ಮರ ಬಿದ್ದು ಇಬ್ಬರ ಸಾವು:</strong> ಸತತ ಮಳೆಗೆ ಬೆಳಗಾವಿ ತಾಲ್ಲೂಕಿನ ಬೆಳಗುಂದಿ ಬಳಿ ಬಿಜಗರ್ಣಿ ರಸ್ತೆಯಲ್ಲಿ ಮರವೊಂದು ಬೈಕ್ ಮೇಲೆ ಉರುಳಿ ಬಿದ್ದು ಕರ್ಲೆ ಗ್ರಾಮದ ಯುವಕ ಸೋಮನಾಥ ಮುಚ್ಚಂಡಿಕರ(21) ಮತ್ತು ಬಾಲಕ ವಿಠ್ಠಲ ತಳವಾರ(16) ಮೃತಪಟ್ಟಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ(ಬೆಳಗಾವಿ ಜಿಲ್ಲೆ):</strong> ಸತತ ಮಳೆಯಿಂದಾಗಿ ತಾಲ್ಲೂಕಿನ ಅವರಾದಿ ಸೇತುವೆ ಮುಳುಗಡೆಯಾಗಿದೆ. ಅಪಾಯದ ಮುನ್ಸೂಚನೆ ಮೀರಿ, ಭಾನುವಾರ ಬೆಳಿಗ್ಗೆ ಈ ಸೇತುವೆ ದಾಟುತ್ತಿದ್ದಾಗ ಟ್ರ್ಯಾಕ್ಟರ್ ಮಗುಚಿ ನದಿಗೆ ಬಿದ್ದಿದೆ.</p><p>ಈ ವೇಳೆ, ಘಟಪ್ರಭಾ ನದಿ ನೀರಿನ ಸೆಳವಿಗೆ ಸಿಕ್ಕು ಮುಳುಗುತ್ತಿದ್ದ 10 ಜನರ ಪೈಕಿ 9 ಮಂದಿ ಈಜಿ ದಡ ಸೇರಿದ್ದಾರೆ. ಮತ್ತೊಬ್ಬರಿಗಾಗಿ ಗೋಕಾಕದ ಅಗ್ನಿಶಾಮಕ ಠಾಣೆ ಹಾಗೂ ಎಸ್ಡಿಆರ್ಎಫ್ ತಂಡದವರು ಕಾರ್ಯಾಚರಣೆ ನಡೆಸಿದ್ದಾರೆ.</p><p>‘ಹೆಸ್ಕಾಂ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು, ಎರಡು ಟ್ರ್ಯಾಕ್ಟರ್ಗಳಲ್ಲಿ ಯಾದವಾಡದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರಕ್ಕೆ ಹೋಗುತ್ತಿದ್ದರು. ಸ್ಥಳೀಯರು ಒಂದು ಟ್ರ್ಯಾಕ್ಟರ್ ವಾಪಸ್ ಕಳುಹಿಸಿದ್ದರು. ಇನ್ನೊಂದು ಟ್ರ್ಯಾಕ್ಟರ್</p><p>ನವರು ಅಪಾಯದ ಮುನ್ಸೂಚನೆ ಮೀರಿಯೂ ಸೇತುವೆ ದಾಟುತ್ತಿದ್ದಾಗ ಅವಘಡ ಸಂಭವಿಸಿದೆ’ ಎಂದು ಕುಲಗೋಡ ಪಿಎಸ್ಐ ಬಿ.ಆನಂದ ‘ಪ್ರಜಾವಾಣಿ’ಗೆ ತಿಳಿಸಿದರು.</p><p>‘ಈ ಸೇತುವೆ ಮುಳುಗಡೆಯಾಗಿ ನಾಲ್ಕು ದಿನಗಳಾಯಿತು. ಸಂಚಾರ ನಿರ್ಬಂಧಕ್ಕಾಗಿ ಬ್ಯಾರಿಕೇಡ್ ಅಳವಡಿಸಿದ್ದೆವು. ಆದರೂ, ಕೆಲವರು ಅಪಾಯ ಲೆಕ್ಕಿಸದೆ ಸಂಚರಿಸುತ್ತಿರುವ ಕಾರಣ ಇಂಥ ಅವಘಡ ಸಂಭವಿಸುತ್ತಿದೆ’ ಎಂದು ಅವರು ಹೇಳಿದರು.</p><p><strong>ಮರ ಬಿದ್ದು ಇಬ್ಬರ ಸಾವು:</strong> ಸತತ ಮಳೆಗೆ ಬೆಳಗಾವಿ ತಾಲ್ಲೂಕಿನ ಬೆಳಗುಂದಿ ಬಳಿ ಬಿಜಗರ್ಣಿ ರಸ್ತೆಯಲ್ಲಿ ಮರವೊಂದು ಬೈಕ್ ಮೇಲೆ ಉರುಳಿ ಬಿದ್ದು ಕರ್ಲೆ ಗ್ರಾಮದ ಯುವಕ ಸೋಮನಾಥ ಮುಚ್ಚಂಡಿಕರ(21) ಮತ್ತು ಬಾಲಕ ವಿಠ್ಠಲ ತಳವಾರ(16) ಮೃತಪಟ್ಟಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>