<p><strong>ಬೆಳಗಾವಿ</strong>: ಉಪರಾಷ್ಟ್ರಪತಿ ಜಗದೀಪ್ ಧನಕರ್, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮೇ 27ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ.</p>.<p>ಅಂದು ಬೆಳಿಗ್ಗೆ 10ಕ್ಕೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್–ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೇಡಿಷನಲ್ ಮೆಡಿಸಿನ್(ಐಸಿಎಂಆರ್–ಎನ್ಐಟಿಎಂ)ನಲ್ಲಿ ನಡೆಯಲಿರುವ 18ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.</p>.<p>11.30ಕ್ಕೆ ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಆ್ಯಂಡ್ ರಿಸರ್ಚ್(ಕಾಹೇರ್)ನಲ್ಲಿ ನಡೆಯಲಿರುವ 14ನೇ ಘಟಿಕೋತ್ಸವದಲ್ಲಿ ಜಯದೀಪ್ ಧನಕರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಥಾವರಚಂದ್ ಗೆಹಲೋತ್ ಘಟಿಕೋತ್ಸವ ಭಾಷಣ ಮಾಡುವರು. ಇಲ್ಲಿಂದ ಬೆಂಗಳೂರಿಗೆ ತೆರಳುವರು.</p>.<p>‘ಉಪರಾಷ್ಟ್ರಪತಿ, ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ನಗರಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದೇವೆ. ಸಾಂಬ್ರಾ ವಿಮಾನ ನಿಲ್ದಾಣ, ಅವರು ಸಂಚರಿಸುವ ಮಾರ್ಗ ಹಾಗೂ ಪಾಲ್ಗೊಳ್ಳಲಿರುವ ಕಾರ್ಯಕ್ರಮದ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ್ದೇವೆ’ ಎಂದು ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಉಪರಾಷ್ಟ್ರಪತಿ ಜಗದೀಪ್ ಧನಕರ್, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮೇ 27ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ.</p>.<p>ಅಂದು ಬೆಳಿಗ್ಗೆ 10ಕ್ಕೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್–ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೇಡಿಷನಲ್ ಮೆಡಿಸಿನ್(ಐಸಿಎಂಆರ್–ಎನ್ಐಟಿಎಂ)ನಲ್ಲಿ ನಡೆಯಲಿರುವ 18ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.</p>.<p>11.30ಕ್ಕೆ ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಆ್ಯಂಡ್ ರಿಸರ್ಚ್(ಕಾಹೇರ್)ನಲ್ಲಿ ನಡೆಯಲಿರುವ 14ನೇ ಘಟಿಕೋತ್ಸವದಲ್ಲಿ ಜಯದೀಪ್ ಧನಕರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಥಾವರಚಂದ್ ಗೆಹಲೋತ್ ಘಟಿಕೋತ್ಸವ ಭಾಷಣ ಮಾಡುವರು. ಇಲ್ಲಿಂದ ಬೆಂಗಳೂರಿಗೆ ತೆರಳುವರು.</p>.<p>‘ಉಪರಾಷ್ಟ್ರಪತಿ, ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ನಗರಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದೇವೆ. ಸಾಂಬ್ರಾ ವಿಮಾನ ನಿಲ್ದಾಣ, ಅವರು ಸಂಚರಿಸುವ ಮಾರ್ಗ ಹಾಗೂ ಪಾಲ್ಗೊಳ್ಳಲಿರುವ ಕಾರ್ಯಕ್ರಮದ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ್ದೇವೆ’ ಎಂದು ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>