ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಸ್ಕಾಂ ಇನ್‌ಸ್ಪೆಕ್ಟರ್‌ ವಿಜಯಕುಮಾರ್‌ ಮನೆ, ಕಚೇರಿಗಳ ಮೇಲೆ ಎಸಿಬಿ ದಾಳಿ

Last Updated 15 ಜುಲೈ 2021, 5:48 IST
ಅಕ್ಷರ ಗಾತ್ರ

ಬಳ್ಳಾರಿ: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಜೆಸ್ಕಾಂ ಇನ್‌ಸ್ಪೆಕ್ಟರ್‌ ವಿಜಯಕುಮಾರ್‌ ಅವರ ಮನೆ ಮತ್ತು ಕಚೇರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ಗುರುವಾರ ನಸುಕಿನಲ್ಲಿ ದಾಳಿ ನಡೆಸಿದ್ದಾರೆ.

ವಿಜಯಕುಮಾರ್‌ ಅವರಿಗೆ ಸೇರಿದ ಬಳ್ಳಾರಿಯ ಹಾವಂಭಾವಿ ಮನೆ, ಬಸವೇಶ್ವರ ಬಡಾವಣೆ ಮನೆ, ಕಪ್ಪಗಲ್ಲ ರಸ್ತೆಯಲ್ಲಿರುವ ಜೆಸ್ಕಾಂ ಕಚೇರಿ, ಬೆಂಗಳೂರಿನ ಮನೆ ಸೇರಿದಂತೆ ಐದು ಕಡೆ ದಾಳಿ ನಡೆದಿದೆ ಎಂದು ಎಸಿಬಿ ಹೆಚ್ಚುವರಿ ಮಹಾನಿರ್ದೇಶಕ ಸೀಮಂತ್‌ಕುಮಾರ್ ಸಿಂಗ್‌ ಖಚಿತಪಡಿಸಿದ್ದಾರೆ.

ವಿಜಯಕುಮಾರ್‌ ಮನೆ ಮೇಲೆ ದಾಳಿ ನಡೆಸಿ ಶೋಧಿಸಲಾಗುತ್ತಿದೆ. ಬಳಿಕ ವಿವರ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಎಂಟು ಜನ ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದಾರೆ. ವಿಜಯ ಕುಮಾರ್ ಸದ್ಯ ಹಾವಂಭಾವಿ ಮನೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಜಯ ಕುಮಾರ್‌ ಇತ್ತೀಚೆಗೆ ಬಡ್ತಿ ಪಡೆದು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು, ಬಳ್ಳಾರಿ ಉಸ್ತುವಾರಿ ಹೊತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT