<p><strong>ಬೆಂಗಳೂರು</strong>: ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಒಂದನೇ ಎಫ್ಟಿಎಸ್ಸಿ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹ 5 ಸಾವಿರ ದಂಡ ವಿಧಿಸಿದೆ.</p>.<p>ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ರಾಘವೇಂದ್ರ ಎಂಬಾತ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಮನೆಗೆ ಕರೆದುಕೊಂಡು ಹೋಗಿ ಮದುವೆಯಾಗುವುದಾಗಿ ಲೈಂಗಿಕ ಕ್ರಿಯೆ ಸಹ ನಡೆಸಿದ್ದ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.</p>.<p>ಸಂತ್ರಸ್ತೆಯ ತಂದೆ ಪೊಲೀಸರಿಗೆ ಈ ವಿಷಯ ತಿಳಿಸಿದರು. ಆರೋಪಿ ವಿರುದ್ಧ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿದರು. ತನಿಖಾಧಿಕಾರಿ ಸಿದ್ದರಾಜು ದೋಷಾರೋಪಣಾ ಪಟ್ಟಿ ಸಲ್ಲಿಸಿದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು 20 ವರ್ಷ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ಐಪಿಸಿ ಕಲಂ 363 ಅಡಿ 1 ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ಮತ್ತು ₹5 ಸಾವಿರ ದಂಡ ವಿಧಿಸಿದ್ದಾರೆ. ಬಾಲಕಿಗೆ ಡಿಎಲ್ಎಸ್ಯಿಂದ ₹ 5 ಲಕ್ಷ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಅಭಿಯೋಜಕಿ ಎ.ಚಂದ್ರಕಲಾ ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಒಂದನೇ ಎಫ್ಟಿಎಸ್ಸಿ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹ 5 ಸಾವಿರ ದಂಡ ವಿಧಿಸಿದೆ.</p>.<p>ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ರಾಘವೇಂದ್ರ ಎಂಬಾತ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಮನೆಗೆ ಕರೆದುಕೊಂಡು ಹೋಗಿ ಮದುವೆಯಾಗುವುದಾಗಿ ಲೈಂಗಿಕ ಕ್ರಿಯೆ ಸಹ ನಡೆಸಿದ್ದ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.</p>.<p>ಸಂತ್ರಸ್ತೆಯ ತಂದೆ ಪೊಲೀಸರಿಗೆ ಈ ವಿಷಯ ತಿಳಿಸಿದರು. ಆರೋಪಿ ವಿರುದ್ಧ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿದರು. ತನಿಖಾಧಿಕಾರಿ ಸಿದ್ದರಾಜು ದೋಷಾರೋಪಣಾ ಪಟ್ಟಿ ಸಲ್ಲಿಸಿದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು 20 ವರ್ಷ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ಐಪಿಸಿ ಕಲಂ 363 ಅಡಿ 1 ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ಮತ್ತು ₹5 ಸಾವಿರ ದಂಡ ವಿಧಿಸಿದ್ದಾರೆ. ಬಾಲಕಿಗೆ ಡಿಎಲ್ಎಸ್ಯಿಂದ ₹ 5 ಲಕ್ಷ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಅಭಿಯೋಜಕಿ ಎ.ಚಂದ್ರಕಲಾ ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>