ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಪರಾಧ ಹಿನ್ನೆಲೆಯುಳ್ಳ 164 ಮಂದಿ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಪ್ರಕರಣ ದಾಖಲಿಸಿ, ಮುಚ್ಚಳಿಕೆ ಬರೆಸಿಕೊಳ್ಳಲಾಗಿತ್ತು. ಈ ಪೈಕಿ ಮೂವರು ಮುಚ್ಚಳಿಕೆ ನಿಯಮ ಉಲ್ಲಂಘಿಸಿದ್ದು, ಬಾಂಡ್ ಮೌಲ್ಯದ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ’ ಎಂದರು.