<p>ಬೆಂಗಳೂರು: ಚಾಲನೆ ಕಲಿಯಲು ಹೊರಟಿದ್ದ ಯುವಕನೊಬ್ಬ ಅಡ್ಡಾದಿಡ್ಡಿ ಕಾರು ಚಲಾಯಿಸಿ ಅಪಘಾತವನ್ನುಂಟು ಮಾಡಿದ್ದು, 8 ಬೈಕ್ಗಳು ಜಖಂಗೊಂಡಿವೆ.</p>.<p>‘ಉಲ್ಲಾಳ ಬಳಿ ಗುರುವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಸಾರ್ವಜನಿಕರ ಜೀವಕ್ಕೆ ಕುತ್ತು ತಂದ ಆರೋಪದಡಿ ಕಾರು ಚಾಲಕ ಗುರುದೀಪ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾರು ಜಪ್ತಿ ಮಾಡಿ, ತನಿಖೆ ಮುಂದುವರಿಸಲಾಗಿದೆ’ ಎಂದು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಹೇಳಿದರು.</p>.<p>‘ಗುರುವಾರ ರಾತ್ರಿ ಸ್ನೇಹಿತರು ಒಂದೆಡೆ ಸೇರಿ ಪಾರ್ಟಿ ಮಾಡಿದ್ದರು. ಚಾಲನೆ ಕಲಿಯಬೇಕೆಂದು ಹೇಳಿದ್ದ ಗುರುದೀಪ್, ಸ್ನೇಹಿತರೊಬ್ಬರ ಕಾರು ಪಡೆದುಕೊಂಡಿದ್ದರು. ಅದೇ ಕಾರು ಚಲಾಯಿಸಿಕೊಂಡು ಉಲ್ಲಾಳ ಮುಖ್ಯರಸ್ತೆಯಲ್ಲಿ ಹೊರಟಿದ್ದರು. ಅತಿ ವೇಗವಾಗಿ, ನಿರ್ಲಕ್ಷ್ಯದಿಂದ ಕಾರು ಚಲಾಯಿಸಿದ್ದರು.’</p>.<p>‘ಬೇಕರಿಯೊಂದರ ಎದುರು ಬೈಕ್ಗಳನ್ನು ನಿಲ್ಲಿಸಲಾಗಿತ್ತು. ನಿಯಂತ್ರಣ ತಪ್ಪಿದ್ದ ಕಾರು, ಬೈಕ್ಗಳಿಗೆ ಡಿಕ್ಕಿ ಹೊಡೆದಿತ್ತು. ಇದರಿಂದಾಗಿ ಬೈಕ್ಗಳು ಜಖಂಗೊಂಡವು. ಕಾರಿನ ಮುಂಭಾಗವೂ ಜಖಂಗೊಂಡಿತ್ತು.’</p>.<p>‘ಗುರುದೀಪ್ ಬಳಿ ಚಾಲನಾ ಪರವಾನಗಿ ಇರಲಿಲ್ಲ. ಜೊತೆಗೆ, ಮದ್ಯ ಕುಡಿದಿದ್ದರೆಂಬ ಅನುಮಾನವಿದೆ. ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವರದಿ ಬರಬೇಕಿದೆ. ಕಾರು ನೀಡಿದ್ದ ಸ್ನೇಹಿತನ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಚಾಲನೆ ಕಲಿಯಲು ಹೊರಟಿದ್ದ ಯುವಕನೊಬ್ಬ ಅಡ್ಡಾದಿಡ್ಡಿ ಕಾರು ಚಲಾಯಿಸಿ ಅಪಘಾತವನ್ನುಂಟು ಮಾಡಿದ್ದು, 8 ಬೈಕ್ಗಳು ಜಖಂಗೊಂಡಿವೆ.</p>.<p>‘ಉಲ್ಲಾಳ ಬಳಿ ಗುರುವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಸಾರ್ವಜನಿಕರ ಜೀವಕ್ಕೆ ಕುತ್ತು ತಂದ ಆರೋಪದಡಿ ಕಾರು ಚಾಲಕ ಗುರುದೀಪ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾರು ಜಪ್ತಿ ಮಾಡಿ, ತನಿಖೆ ಮುಂದುವರಿಸಲಾಗಿದೆ’ ಎಂದು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಹೇಳಿದರು.</p>.<p>‘ಗುರುವಾರ ರಾತ್ರಿ ಸ್ನೇಹಿತರು ಒಂದೆಡೆ ಸೇರಿ ಪಾರ್ಟಿ ಮಾಡಿದ್ದರು. ಚಾಲನೆ ಕಲಿಯಬೇಕೆಂದು ಹೇಳಿದ್ದ ಗುರುದೀಪ್, ಸ್ನೇಹಿತರೊಬ್ಬರ ಕಾರು ಪಡೆದುಕೊಂಡಿದ್ದರು. ಅದೇ ಕಾರು ಚಲಾಯಿಸಿಕೊಂಡು ಉಲ್ಲಾಳ ಮುಖ್ಯರಸ್ತೆಯಲ್ಲಿ ಹೊರಟಿದ್ದರು. ಅತಿ ವೇಗವಾಗಿ, ನಿರ್ಲಕ್ಷ್ಯದಿಂದ ಕಾರು ಚಲಾಯಿಸಿದ್ದರು.’</p>.<p>‘ಬೇಕರಿಯೊಂದರ ಎದುರು ಬೈಕ್ಗಳನ್ನು ನಿಲ್ಲಿಸಲಾಗಿತ್ತು. ನಿಯಂತ್ರಣ ತಪ್ಪಿದ್ದ ಕಾರು, ಬೈಕ್ಗಳಿಗೆ ಡಿಕ್ಕಿ ಹೊಡೆದಿತ್ತು. ಇದರಿಂದಾಗಿ ಬೈಕ್ಗಳು ಜಖಂಗೊಂಡವು. ಕಾರಿನ ಮುಂಭಾಗವೂ ಜಖಂಗೊಂಡಿತ್ತು.’</p>.<p>‘ಗುರುದೀಪ್ ಬಳಿ ಚಾಲನಾ ಪರವಾನಗಿ ಇರಲಿಲ್ಲ. ಜೊತೆಗೆ, ಮದ್ಯ ಕುಡಿದಿದ್ದರೆಂಬ ಅನುಮಾನವಿದೆ. ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವರದಿ ಬರಬೇಕಿದೆ. ಕಾರು ನೀಡಿದ್ದ ಸ್ನೇಹಿತನ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>