<p><strong>ಬೆಂಗಳೂರು:</strong> ಹ್ರೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯ ವಕ್ಫ್ ಬೋರ್ಡ್ ಕಚೇರಿ ಸಮೀಪ ಸೋಮವಾರ ರಾತ್ರಿ ನಡೆದ ಅಪಘಾತದಲ್ಲಿ ಯುವಕರೊಬ್ಬರು ಮೃತಪಟ್ಟಿದ್ದಾರೆ. </p>.<p>ಮಾರತ್ತಹಳ್ಳಿ ನಿವಾಸಿ ಆಯುಷ್ ಅಪ್ಪಯ್ಯ(21) ಮೃತಪಟ್ಟವರು.</p>.<p>ಕೊಡಗಿನ ಆಯುಷ್ ಅಪ್ಪಯ್ಯ ಅವರ ಕುಟುಂಬದ ಸದಸ್ಯರು 20 ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದು, ಮಾರತ್ತಹಳ್ಳಿಯಲ್ಲಿ ವಾಸವಿದ್ದರು. ಬಿ.ಕಾಂ ಪದವಿ ಪಡೆದುಕೊಂಡಿದ್ದ ಆಯುಷ್ ಅವರು ವಸಂತನಗರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.</p>.<p>ಸೋಮವಾರ ರಾತ್ರಿ 10.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಕಲ್ಪನಾ ಜಂಕ್ಷನ್ ಕಡೆಯಿಂದ ಚಂದ್ರಿಕಾ ಹೋಟೆಲ್ ಜಂಕ್ಷನ್ ಕಡೆಗೆ ಸಾಗುತ್ತಿದ್ದರು. ವಕ್ಫ್ ಬೋರ್ಡ್ ಕಚೇರಿ ಬಳಿ ಬರುತ್ತಿದ್ದಂತೆ ಆಯುಷ್ ಅವರ ಬೈಕ್ಗೆ ವಾಹನವೊಂದು ಡಿಕ್ಕಿ ಹೊಡೆಯಿತು. ಆಗ ಕೆಳಗೆ ಬಿದ್ದು, ತಲೆಗೆ ತೀವ್ರ ಪೆಟ್ಟಾಗಿತ್ತು. ಕೂಡಲೇ ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಪರೀಕ್ಷಿಸಿದ ವೈದ್ಯರು ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನ ಚಾಲಕನ ಪತ್ತೆಗೆ ಶೋಧಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹ್ರೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯ ವಕ್ಫ್ ಬೋರ್ಡ್ ಕಚೇರಿ ಸಮೀಪ ಸೋಮವಾರ ರಾತ್ರಿ ನಡೆದ ಅಪಘಾತದಲ್ಲಿ ಯುವಕರೊಬ್ಬರು ಮೃತಪಟ್ಟಿದ್ದಾರೆ. </p>.<p>ಮಾರತ್ತಹಳ್ಳಿ ನಿವಾಸಿ ಆಯುಷ್ ಅಪ್ಪಯ್ಯ(21) ಮೃತಪಟ್ಟವರು.</p>.<p>ಕೊಡಗಿನ ಆಯುಷ್ ಅಪ್ಪಯ್ಯ ಅವರ ಕುಟುಂಬದ ಸದಸ್ಯರು 20 ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದು, ಮಾರತ್ತಹಳ್ಳಿಯಲ್ಲಿ ವಾಸವಿದ್ದರು. ಬಿ.ಕಾಂ ಪದವಿ ಪಡೆದುಕೊಂಡಿದ್ದ ಆಯುಷ್ ಅವರು ವಸಂತನಗರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.</p>.<p>ಸೋಮವಾರ ರಾತ್ರಿ 10.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಕಲ್ಪನಾ ಜಂಕ್ಷನ್ ಕಡೆಯಿಂದ ಚಂದ್ರಿಕಾ ಹೋಟೆಲ್ ಜಂಕ್ಷನ್ ಕಡೆಗೆ ಸಾಗುತ್ತಿದ್ದರು. ವಕ್ಫ್ ಬೋರ್ಡ್ ಕಚೇರಿ ಬಳಿ ಬರುತ್ತಿದ್ದಂತೆ ಆಯುಷ್ ಅವರ ಬೈಕ್ಗೆ ವಾಹನವೊಂದು ಡಿಕ್ಕಿ ಹೊಡೆಯಿತು. ಆಗ ಕೆಳಗೆ ಬಿದ್ದು, ತಲೆಗೆ ತೀವ್ರ ಪೆಟ್ಟಾಗಿತ್ತು. ಕೂಡಲೇ ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಪರೀಕ್ಷಿಸಿದ ವೈದ್ಯರು ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನ ಚಾಲಕನ ಪತ್ತೆಗೆ ಶೋಧಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>