<p><strong>ಬೆಂಗಳೂರು</strong>: ಅ.ನ.ಕೃ. ಪ್ರತಿಷ್ಠಾನ ನೀಡುವ ‘ಅ.ನ.ಕೃ.ಪ್ರಶಸ್ತಿ’ಗೆ ಲೇಖಕರಾದ ಎಸ್.ಆರ್.ರಾಮಸ್ವಾಮಿ ಹಾಗೂ ಬಿ.ಎಸ್.ಸ್ವಾಮಿ ಆಯ್ಕೆಯಾಗಿದ್ದಾರೆ. </p>.<p>2022 ಮತ್ತು 2023ನೇ ಸಾಲಿನ ಪ್ರಶಸ್ತಿಯನ್ನು ಪ್ರತಿಷ್ಠಾನ ಪ್ರಕಟಿಸಿದೆ. ಈ ಪ್ರಶಸ್ತಿಯು ತಲಾ ₹50 ಸಾವಿರ ನಗದು ಒಳಗೊಂಡಿದೆ. ಎಸ್.ಆರ್.ರಾಮಸ್ವಾಮಿ ಅವರು ‘ಉತ್ಥಾನ’ ಪತ್ರಿಕೆಯ ಗೌರವ ಸಂಪಾದಕರಾಗಿದ್ದಾರೆ. ಬಿ.ಎಸ್.ಸ್ವಾಮಿ ಅವರು ಆಕಾಶವಾಣಿಯಲ್ಲಿ ಕಾರ್ಯಕ್ರಮ ಸಂಯೋಜಕರಾಗಿ ಕಾರ್ಯನಿರ್ವಹಿಸಿ, ನಿವೃತ್ತರಾಗಿದ್ದಾರೆ. </p>.<p>ಇದೇ 19ರಂದು ಬಸವನಗುಡಿಯ ನ್ಯಾಷನಲ್ ಕಾಲೇಜು ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ವಕೀಲ ಅಶೋಕ್ ಹಾರನಹಳ್ಳಿ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ವಿದ್ವಾಂಸ ಶತಾವಧಾನಿ ಆರ್. ಗಣೇಶ್ ಹಾಗೂ ಬರಹಗಾರ ಬಂಡ್ಲಹಳ್ಳಿ ವಿಜಯಕುಮಾರ್ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಎ.ಕೆ. ಗೌತಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅ.ನ.ಕೃ. ಪ್ರತಿಷ್ಠಾನ ನೀಡುವ ‘ಅ.ನ.ಕೃ.ಪ್ರಶಸ್ತಿ’ಗೆ ಲೇಖಕರಾದ ಎಸ್.ಆರ್.ರಾಮಸ್ವಾಮಿ ಹಾಗೂ ಬಿ.ಎಸ್.ಸ್ವಾಮಿ ಆಯ್ಕೆಯಾಗಿದ್ದಾರೆ. </p>.<p>2022 ಮತ್ತು 2023ನೇ ಸಾಲಿನ ಪ್ರಶಸ್ತಿಯನ್ನು ಪ್ರತಿಷ್ಠಾನ ಪ್ರಕಟಿಸಿದೆ. ಈ ಪ್ರಶಸ್ತಿಯು ತಲಾ ₹50 ಸಾವಿರ ನಗದು ಒಳಗೊಂಡಿದೆ. ಎಸ್.ಆರ್.ರಾಮಸ್ವಾಮಿ ಅವರು ‘ಉತ್ಥಾನ’ ಪತ್ರಿಕೆಯ ಗೌರವ ಸಂಪಾದಕರಾಗಿದ್ದಾರೆ. ಬಿ.ಎಸ್.ಸ್ವಾಮಿ ಅವರು ಆಕಾಶವಾಣಿಯಲ್ಲಿ ಕಾರ್ಯಕ್ರಮ ಸಂಯೋಜಕರಾಗಿ ಕಾರ್ಯನಿರ್ವಹಿಸಿ, ನಿವೃತ್ತರಾಗಿದ್ದಾರೆ. </p>.<p>ಇದೇ 19ರಂದು ಬಸವನಗುಡಿಯ ನ್ಯಾಷನಲ್ ಕಾಲೇಜು ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ವಕೀಲ ಅಶೋಕ್ ಹಾರನಹಳ್ಳಿ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ವಿದ್ವಾಂಸ ಶತಾವಧಾನಿ ಆರ್. ಗಣೇಶ್ ಹಾಗೂ ಬರಹಗಾರ ಬಂಡ್ಲಹಳ್ಳಿ ವಿಜಯಕುಮಾರ್ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಎ.ಕೆ. ಗೌತಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>