<p><strong>ಬೆಂಗಳೂರು:</strong> ಮನೆಗಳ ಹೊರಭಾಗದಲ್ಲಿ ಇರಿಸುತ್ತಿದ್ದ ಗೃಹೋಪಯೋಗಿ ಅಡುಗೆ ಅನಿಲ್ ಸಿಲಿಂಡರ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಲೋಕೇಶ್ ಹಾಗೂ ಹೇಮಂತ್ ಬಂಧಿತರು. ಇವರಿಂದ ₹ 60 ಸಾವಿರ ಮೌಲ್ಯದ 20 ಸಿಲಿಂಡರ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಗೋವಿಂದರಾಜನಗರ, ರಾಜಾಜಿನಗರ, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಮಾಗಡಿ ರಸ್ತೆ ಠಾಣೆಗಳ ವ್ಯಾಪ್ತಿಯಲ್ಲಿ ಸಿಲಿಂಡರ್ಗಳು ಕಳ್ಳತನ ಆಗಿದ್ದವು. ಈ ಬಗ್ಗೆ ನಿವಾಸಿಗಳು ಠಾಣೆಗಳಿಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ಕೈಗೊಂಡಾಗ, ಆರೋಪಿಗಳು ಸಿಕ್ಕಿಬಿದ್ದರು’ ಎಂದು ತಿಳಿಸಿದರು.</p>.<p>‘ಕಳ್ಳತನ ಆರೋಪದಡಿ ಲೋಕೇಶ್ ಈ ಹಿಂದೆ ಜೈಲು ಸೇರಿದ್ದ. ಜಾಮೀನು ಮೇಲೆ ಹೊರಬಂದಿದ್ದ. ಹಣ ಸಂಪಾದಿಸಲು ಸ್ನೇಹಿತ ಹೇಮಂತ್ ಜೊತೆ ಸೇರಿ ಸಿಲಿಂಡರ್ ಕಳ್ಳತನಕ್ಕೆ ಇಳಿದಿದ್ದ’ ಎಂದು ಹೇಳಿದರು.</p>.<p><strong>ಬೈಕ್ನಲ್ಲಿ ಸುತ್ತಾಡಿ ಮನೆ ಗುರುತು:</strong> ‘ಹಲವು ಮನೆಗಳ ಹೊರಭಾಗದಲ್ಲಿ ಸಿಲಿಂಡರ್ಗಳನ್ನು ಇರಿಸಲಾಗುತ್ತದೆ. ಅಲ್ಲಿಂದಲೇ, ಪೈಪ್ ಮೂಲಕ ಅಡುಗೆ ಮನೆಗೆ ಅನಿಲ ಪೂರೈಕೆಯಾಗುತ್ತದೆ. ಬೈಕ್ಗಳಲ್ಲಿ ಸುತ್ತಾಡುತ್ತಿದ್ದ ಆರೋಪಿಗಳು, ಸಿಲಿಂಡರ್ ಇರುತ್ತಿದ್ದ ಮನೆಗಳನ್ನು ಗುರುತಿಸುತ್ತಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಮನೆಗಳ ಬಳಿ ಯಾರೂ ಇಲ್ಲದ ವೇಳೆ ಸಿಲಿಂಡರ್ಗಳನ್ನು ಕದ್ದೊಯ್ಯುತ್ತಿದ್ದರು. ಅದೇ ಸಿಲಿಂಡರ್ಗಳನ್ನು ಹೋಟೆಲ್ ಹಾಗೂ ಇತರರಿಗ ಮಾರಿ ಹಣ ಪಡೆಯುತ್ತಿದ್ದರು’ ಎಂದು ಹೇಳಿದರು.</p>.<p>‘ಸಿಲಿಂಡರ್ ಕಳ್ಳತನ ಬಗ್ಗೆ ದೂರುಗಳು ಬರುತ್ತಿದ್ದಂತೆ, ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಯಿತು. ಆರೋಪಿಗಳು ಬೈಕ್ನಲ್ಲಿ ಪರಾರಿಯಾಗಿದ್ದ ದೃಶ್ಯ ಸೆರೆಯಾಗಿತ್ತು. ಅದೇ ಸುಳಿವು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮನೆಗಳ ಹೊರಭಾಗದಲ್ಲಿ ಇರಿಸುತ್ತಿದ್ದ ಗೃಹೋಪಯೋಗಿ ಅಡುಗೆ ಅನಿಲ್ ಸಿಲಿಂಡರ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಲೋಕೇಶ್ ಹಾಗೂ ಹೇಮಂತ್ ಬಂಧಿತರು. ಇವರಿಂದ ₹ 60 ಸಾವಿರ ಮೌಲ್ಯದ 20 ಸಿಲಿಂಡರ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಗೋವಿಂದರಾಜನಗರ, ರಾಜಾಜಿನಗರ, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಮಾಗಡಿ ರಸ್ತೆ ಠಾಣೆಗಳ ವ್ಯಾಪ್ತಿಯಲ್ಲಿ ಸಿಲಿಂಡರ್ಗಳು ಕಳ್ಳತನ ಆಗಿದ್ದವು. ಈ ಬಗ್ಗೆ ನಿವಾಸಿಗಳು ಠಾಣೆಗಳಿಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ಕೈಗೊಂಡಾಗ, ಆರೋಪಿಗಳು ಸಿಕ್ಕಿಬಿದ್ದರು’ ಎಂದು ತಿಳಿಸಿದರು.</p>.<p>‘ಕಳ್ಳತನ ಆರೋಪದಡಿ ಲೋಕೇಶ್ ಈ ಹಿಂದೆ ಜೈಲು ಸೇರಿದ್ದ. ಜಾಮೀನು ಮೇಲೆ ಹೊರಬಂದಿದ್ದ. ಹಣ ಸಂಪಾದಿಸಲು ಸ್ನೇಹಿತ ಹೇಮಂತ್ ಜೊತೆ ಸೇರಿ ಸಿಲಿಂಡರ್ ಕಳ್ಳತನಕ್ಕೆ ಇಳಿದಿದ್ದ’ ಎಂದು ಹೇಳಿದರು.</p>.<p><strong>ಬೈಕ್ನಲ್ಲಿ ಸುತ್ತಾಡಿ ಮನೆ ಗುರುತು:</strong> ‘ಹಲವು ಮನೆಗಳ ಹೊರಭಾಗದಲ್ಲಿ ಸಿಲಿಂಡರ್ಗಳನ್ನು ಇರಿಸಲಾಗುತ್ತದೆ. ಅಲ್ಲಿಂದಲೇ, ಪೈಪ್ ಮೂಲಕ ಅಡುಗೆ ಮನೆಗೆ ಅನಿಲ ಪೂರೈಕೆಯಾಗುತ್ತದೆ. ಬೈಕ್ಗಳಲ್ಲಿ ಸುತ್ತಾಡುತ್ತಿದ್ದ ಆರೋಪಿಗಳು, ಸಿಲಿಂಡರ್ ಇರುತ್ತಿದ್ದ ಮನೆಗಳನ್ನು ಗುರುತಿಸುತ್ತಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಮನೆಗಳ ಬಳಿ ಯಾರೂ ಇಲ್ಲದ ವೇಳೆ ಸಿಲಿಂಡರ್ಗಳನ್ನು ಕದ್ದೊಯ್ಯುತ್ತಿದ್ದರು. ಅದೇ ಸಿಲಿಂಡರ್ಗಳನ್ನು ಹೋಟೆಲ್ ಹಾಗೂ ಇತರರಿಗ ಮಾರಿ ಹಣ ಪಡೆಯುತ್ತಿದ್ದರು’ ಎಂದು ಹೇಳಿದರು.</p>.<p>‘ಸಿಲಿಂಡರ್ ಕಳ್ಳತನ ಬಗ್ಗೆ ದೂರುಗಳು ಬರುತ್ತಿದ್ದಂತೆ, ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಯಿತು. ಆರೋಪಿಗಳು ಬೈಕ್ನಲ್ಲಿ ಪರಾರಿಯಾಗಿದ್ದ ದೃಶ್ಯ ಸೆರೆಯಾಗಿತ್ತು. ಅದೇ ಸುಳಿವು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>