<p><strong>ಬೆಂಗಳೂರು</strong>: ನಗರದಲ್ಲಿ ಮನೆಗಳ ಬೀಗ ಒಡೆದು ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ಕಳವು ಮಾಡಿದ್ದ ಕೆ.ಜಿ.ಎಫ್ನ ಇಬ್ಬರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿ, ₹14.47 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಕೆ.ಜಿ.ಎಫ್ ನಿವಾಸಿ, ಆಟೊ ಚಾಲಕ ಸಿಮ್ ಸೇನ್ ಹಾಗೂ ಪೇಂಟರ್ ಶರತ್ ಬಂಧಿತರು. ಈ ಇಬ್ಬರ ವಿರುದ್ಧ ಮನೆ ಕಳ್ಳತನ, ದ್ವಿಚಕ್ರ ವಾಹನ ಹಾಗೂ ಸರ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಆರೋಪಿಗಳಿಂದ 110 ಗ್ರಾಂ ಚಿನ್ನಾಭರಣ, ವಿವಿಧ ಕಂಪನಿಯ ನಾಲ್ಕು ದ್ವಿಚಕ್ರ ವಾಹನ, ಎರಡು ಲ್ಯಾಪ್ಟಾಪ್ ಹಾಗೂ ಏಳು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಸಿಮ್ಸೇನ್ ಕಳವು ಮಾಡಿದ್ದ ವಸ್ತುಗಳನ್ನು ಸಂಬಂಧಿ, ರೌಡಿಶೀಟರ್ ಶರತ್ ಮೂಲಕ ಕೆ.ಜಿ.ಎಫ್ ಹಾಗೂ ಆಂಧ್ರಪ್ರದೇಶದ ಶಾಂತಿಪೇಟೆ, ಕೆಂಚನಬಲ್ಲದ ಆಭರಣ ಅಂಗಡಿಗಳಿಗೆ ಮಾರಾಟ ಮಾಡಿದ್ದ. ಆ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.</p>.<p>ಪ್ರಕರಣವೊಂದರಲ್ಲಿ ಶರತ್ ಗೂಂಡಾ ಕಾಯ್ದೆಯಡಿ ಜೈಲಿನಲ್ಲಿದ್ದಾನೆ. ಆತನನ್ನು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದರು.</p>.<p>ಸರಗಳ್ಳರ ಬಂಧನ: ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿ, ₹2.40 ಲಕ್ಷ ಮೌಲ್ಯದ 27 ಗ್ರಾಂ ತೂಕದ ಆಭರಣ ವಶಪಡಿಸಿಕೊಂಡಿದ್ದಾರೆ.</p>.<p>ಜುಲೈ 12ರ ಬೆಳಗಿನ ಜಾವ 5.15ರಲ್ಲಿ ವಾಯುವಿಹಾರ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕಿತ್ತುಕೊಂಡು ಪರಾರಿಯಾಗಿದ್ದರು. ಮಾಂಗಲ್ಯ ಸರದ ಅರ್ಧ ತುಂಡು ಮಹಿಳೆ ಬಳಿಯೇ ಉಳಿದಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಎಲ್ ಆ್ಯಂಡ್ ಟಿ ಸೌತ್ ಸಿಟಿ ಅಪಾರ್ಟ್ಮೆಂಟ್ ಬಳಿ ಬಂಧಿಸಿದರು. ಆಭರಣ ಅಂಗಡಿಯಲ್ಲಿ ಅಡವಿಟ್ಟಿದ್ದ ಸರವನ್ನು ವಶಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ಮನೆಗಳ ಬೀಗ ಒಡೆದು ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ಕಳವು ಮಾಡಿದ್ದ ಕೆ.ಜಿ.ಎಫ್ನ ಇಬ್ಬರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿ, ₹14.47 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಕೆ.ಜಿ.ಎಫ್ ನಿವಾಸಿ, ಆಟೊ ಚಾಲಕ ಸಿಮ್ ಸೇನ್ ಹಾಗೂ ಪೇಂಟರ್ ಶರತ್ ಬಂಧಿತರು. ಈ ಇಬ್ಬರ ವಿರುದ್ಧ ಮನೆ ಕಳ್ಳತನ, ದ್ವಿಚಕ್ರ ವಾಹನ ಹಾಗೂ ಸರ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಆರೋಪಿಗಳಿಂದ 110 ಗ್ರಾಂ ಚಿನ್ನಾಭರಣ, ವಿವಿಧ ಕಂಪನಿಯ ನಾಲ್ಕು ದ್ವಿಚಕ್ರ ವಾಹನ, ಎರಡು ಲ್ಯಾಪ್ಟಾಪ್ ಹಾಗೂ ಏಳು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಸಿಮ್ಸೇನ್ ಕಳವು ಮಾಡಿದ್ದ ವಸ್ತುಗಳನ್ನು ಸಂಬಂಧಿ, ರೌಡಿಶೀಟರ್ ಶರತ್ ಮೂಲಕ ಕೆ.ಜಿ.ಎಫ್ ಹಾಗೂ ಆಂಧ್ರಪ್ರದೇಶದ ಶಾಂತಿಪೇಟೆ, ಕೆಂಚನಬಲ್ಲದ ಆಭರಣ ಅಂಗಡಿಗಳಿಗೆ ಮಾರಾಟ ಮಾಡಿದ್ದ. ಆ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.</p>.<p>ಪ್ರಕರಣವೊಂದರಲ್ಲಿ ಶರತ್ ಗೂಂಡಾ ಕಾಯ್ದೆಯಡಿ ಜೈಲಿನಲ್ಲಿದ್ದಾನೆ. ಆತನನ್ನು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದರು.</p>.<p>ಸರಗಳ್ಳರ ಬಂಧನ: ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿ, ₹2.40 ಲಕ್ಷ ಮೌಲ್ಯದ 27 ಗ್ರಾಂ ತೂಕದ ಆಭರಣ ವಶಪಡಿಸಿಕೊಂಡಿದ್ದಾರೆ.</p>.<p>ಜುಲೈ 12ರ ಬೆಳಗಿನ ಜಾವ 5.15ರಲ್ಲಿ ವಾಯುವಿಹಾರ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕಿತ್ತುಕೊಂಡು ಪರಾರಿಯಾಗಿದ್ದರು. ಮಾಂಗಲ್ಯ ಸರದ ಅರ್ಧ ತುಂಡು ಮಹಿಳೆ ಬಳಿಯೇ ಉಳಿದಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಎಲ್ ಆ್ಯಂಡ್ ಟಿ ಸೌತ್ ಸಿಟಿ ಅಪಾರ್ಟ್ಮೆಂಟ್ ಬಳಿ ಬಂಧಿಸಿದರು. ಆಭರಣ ಅಂಗಡಿಯಲ್ಲಿ ಅಡವಿಟ್ಟಿದ್ದ ಸರವನ್ನು ವಶಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>