<p><strong>ಬೆಂಗಳೂರು</strong>: ಸ್ವಾಭಿಮಾನಿ ಕರ್ನಾಟಕ ವೇದಿಕೆ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಆರು ಮಂದಿಗೆ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. </p>.<p>ಎಚ್.ಎಸ್.ಎಂ.ಪ್ರಕಾಶ್, ಎಚ್.ಟಿ.ಪೋತೆ, ಫಾತಿಮಾ ರಲಿಯಾ, ಸಂತೋಷ ನಾಯಕ, ಇಂದಿರಾ ಕೃಷ್ಣಪ್ಪ ಹಾಗೂ ಎಂ.ಎಸ್.ಮಣಿ ಅವರ ಕೃತಿಗಳು ಪ್ರಶಸ್ತಿಗೆ ಭಾಜನವಾಗಿದ್ದವು. ಕೃತಿಯ ಲೇಖಕರು ಹಾಗೂ ಲೇಖಕಿಯರಿಗೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಪ್ರಶಸ್ತಿ ಪ್ರದಾನ ಮಾಡಿ, ಮಾತನಾಡಿದರು. ಪ್ರಶಸ್ತಿಯು ತಲಾ ₹ 5 ಸಾವಿರ ನಗದು ಒಳಗೊಂಡಿದೆ. </p>.<p>‘ಪುಸ್ತಕ ಎನ್ನುವುದು ನಮ್ಮ ಸ್ನೇಹಿತನಿದ್ದಂತೆ. ನಾವು ವಾರಪತ್ರಿಕೆಗಳಿಗೆ ಕಾಯುತ್ತಿದ್ದೆವು. ಆದರೆ, ಇಂದಿನ ಯುವಪೀಳಿಗೆ ಓದುವ ಹವ್ಯಾಸವನ್ನು ಅಷ್ಟಾಗಿ ಬೆಳೆಸಿಕೊಂಡಿಲ್ಲ’ ಎಂದು ಕೆ.ವಿ.ಪ್ರಭಾಕರ್ ಬೇಸರ ವ್ಯಕ್ತಪಡಿಸಿದರು. </p>.<p>ಸ್ವಾಭಿಮಾನಿ ಕರ್ನಾಟಕ ವೇದಿಕೆ ಅಧ್ಯಕ್ಷ ದ್ವಾರನಕುಂಟೆ ಪಾತಣ್ಣ, ‘ನಮ್ಮ ಭಾಷೆಯನ್ನು ಉಳಿಸಿ ಬೆಳೆಸುವುದಕ್ಕೆ ಪ್ರತಿಭಟನೆ, ಮುಷ್ಕರವೊಂದೇ ಮಾರ್ಗವಲ್ಲ. ಸಾಹಿತ್ಯಿಕ ಚಟುವಟಿಕೆಗಳಿಂದಲೂ ಭಾಷೆಯನ್ನು ಉಳಿಸಿ ಬೆಳೆಸಬಹುದು. ಆದ್ದರಿಂದ ನಾವು ಕಳೆದ ಮೂರು ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದೇವೆ’ ಎಂದು ಹೇಳಿದರು. </p>.<p>ಪ್ರಶಸ್ತಿ ಪುರಸ್ಕೃತ ಎಚ್.ಎಸ್.ಎಂ.ಪ್ರಕಾಶ್, ‘ಮೂಲ ಕೃತಿಗೆ ಚ್ಯುತಿ ಬಾರದಂತೆ ಅದರ ಜೀವಾಳವನ್ನು ಓದುಗರಿಗೆ ತಲುಪಿಸುವುದು ಸುಲಭವಲ್ಲ. ಹೀಗಾಗಿ, ಲೇಖಕರ ಜತೆಗೆ ಅನುವಾದಕರನ್ನೂ ಗುರುತಿಸುವ ಕೆಲಸವಾಗಬೇಕು’ ಎಂದು ತಿಳಿಸಿದರು. </p>.<p>ಮತ್ತೋರ್ವ ಪ್ರಶಸ್ತಿ ಪುರಸ್ಕೃತ ಎಚ್.ಟಿ.ಪೋತೆ, ‘ಈ ಹಿಂದೆ ನಾನು ಅಂಬೇಡ್ಕರ್ ಅವರ ಲಂಡನ್ ಮನೆಗೆ ಭೇಟಿ ನೀಡಿ, ಆ ಬಗ್ಗೆ ಪ್ರವಾಸ ಕಥನವನ್ನು ‘ಪ್ರಜಾವಾಣಿ’ಗೆ ಬರೆದಿದ್ದೆ. ಅದಕ್ಕೆ ‘ಬಾಬಾ ಸಾಹೇಬರ ಲಂಡನ್ ಮನೆಯಲ್ಲಿ’ ಎಂಬ ಶೀರ್ಷಿಕೆಯನ್ನು ನೀಡಲಾಗಿತ್ತು. ಅದೇ ಶೀರ್ಷಿಕೆಯಡಿ ಪುಸ್ತಕವನ್ನೂ ಹೊರತರಲಾಗಿದೆ’ ಎಂದು ಸ್ಮರಿಸಿಕೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸ್ವಾಭಿಮಾನಿ ಕರ್ನಾಟಕ ವೇದಿಕೆ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಆರು ಮಂದಿಗೆ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. </p>.<p>ಎಚ್.ಎಸ್.ಎಂ.ಪ್ರಕಾಶ್, ಎಚ್.ಟಿ.ಪೋತೆ, ಫಾತಿಮಾ ರಲಿಯಾ, ಸಂತೋಷ ನಾಯಕ, ಇಂದಿರಾ ಕೃಷ್ಣಪ್ಪ ಹಾಗೂ ಎಂ.ಎಸ್.ಮಣಿ ಅವರ ಕೃತಿಗಳು ಪ್ರಶಸ್ತಿಗೆ ಭಾಜನವಾಗಿದ್ದವು. ಕೃತಿಯ ಲೇಖಕರು ಹಾಗೂ ಲೇಖಕಿಯರಿಗೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಪ್ರಶಸ್ತಿ ಪ್ರದಾನ ಮಾಡಿ, ಮಾತನಾಡಿದರು. ಪ್ರಶಸ್ತಿಯು ತಲಾ ₹ 5 ಸಾವಿರ ನಗದು ಒಳಗೊಂಡಿದೆ. </p>.<p>‘ಪುಸ್ತಕ ಎನ್ನುವುದು ನಮ್ಮ ಸ್ನೇಹಿತನಿದ್ದಂತೆ. ನಾವು ವಾರಪತ್ರಿಕೆಗಳಿಗೆ ಕಾಯುತ್ತಿದ್ದೆವು. ಆದರೆ, ಇಂದಿನ ಯುವಪೀಳಿಗೆ ಓದುವ ಹವ್ಯಾಸವನ್ನು ಅಷ್ಟಾಗಿ ಬೆಳೆಸಿಕೊಂಡಿಲ್ಲ’ ಎಂದು ಕೆ.ವಿ.ಪ್ರಭಾಕರ್ ಬೇಸರ ವ್ಯಕ್ತಪಡಿಸಿದರು. </p>.<p>ಸ್ವಾಭಿಮಾನಿ ಕರ್ನಾಟಕ ವೇದಿಕೆ ಅಧ್ಯಕ್ಷ ದ್ವಾರನಕುಂಟೆ ಪಾತಣ್ಣ, ‘ನಮ್ಮ ಭಾಷೆಯನ್ನು ಉಳಿಸಿ ಬೆಳೆಸುವುದಕ್ಕೆ ಪ್ರತಿಭಟನೆ, ಮುಷ್ಕರವೊಂದೇ ಮಾರ್ಗವಲ್ಲ. ಸಾಹಿತ್ಯಿಕ ಚಟುವಟಿಕೆಗಳಿಂದಲೂ ಭಾಷೆಯನ್ನು ಉಳಿಸಿ ಬೆಳೆಸಬಹುದು. ಆದ್ದರಿಂದ ನಾವು ಕಳೆದ ಮೂರು ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದೇವೆ’ ಎಂದು ಹೇಳಿದರು. </p>.<p>ಪ್ರಶಸ್ತಿ ಪುರಸ್ಕೃತ ಎಚ್.ಎಸ್.ಎಂ.ಪ್ರಕಾಶ್, ‘ಮೂಲ ಕೃತಿಗೆ ಚ್ಯುತಿ ಬಾರದಂತೆ ಅದರ ಜೀವಾಳವನ್ನು ಓದುಗರಿಗೆ ತಲುಪಿಸುವುದು ಸುಲಭವಲ್ಲ. ಹೀಗಾಗಿ, ಲೇಖಕರ ಜತೆಗೆ ಅನುವಾದಕರನ್ನೂ ಗುರುತಿಸುವ ಕೆಲಸವಾಗಬೇಕು’ ಎಂದು ತಿಳಿಸಿದರು. </p>.<p>ಮತ್ತೋರ್ವ ಪ್ರಶಸ್ತಿ ಪುರಸ್ಕೃತ ಎಚ್.ಟಿ.ಪೋತೆ, ‘ಈ ಹಿಂದೆ ನಾನು ಅಂಬೇಡ್ಕರ್ ಅವರ ಲಂಡನ್ ಮನೆಗೆ ಭೇಟಿ ನೀಡಿ, ಆ ಬಗ್ಗೆ ಪ್ರವಾಸ ಕಥನವನ್ನು ‘ಪ್ರಜಾವಾಣಿ’ಗೆ ಬರೆದಿದ್ದೆ. ಅದಕ್ಕೆ ‘ಬಾಬಾ ಸಾಹೇಬರ ಲಂಡನ್ ಮನೆಯಲ್ಲಿ’ ಎಂಬ ಶೀರ್ಷಿಕೆಯನ್ನು ನೀಡಲಾಗಿತ್ತು. ಅದೇ ಶೀರ್ಷಿಕೆಯಡಿ ಪುಸ್ತಕವನ್ನೂ ಹೊರತರಲಾಗಿದೆ’ ಎಂದು ಸ್ಮರಿಸಿಕೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>