<p><strong>ಪೀಣ್ಯ ದಾಸರಹಳ್ಳಿ:</strong> ಬಾಗಲಗುಂಟೆಯ ಮಾರಮ್ಮ ದೇವಸ್ಥಾನದಲ್ಲಿ ಶಾಸಕ ಎಸ್. ಮುನಿರಾಜು ನೇತೃತ್ವದಲ್ಲಿ ಪಕ್ಷದ ಎಲ್ಲಾ ಮುಖಂಡರು ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದರು.</p>.<p>ಬಳಿಕ ಮಾತನಾಡಿದ ಅವರು 'ದೇಶದ ಎಲ್ಲಾ ದೇಗುಲಗಳು ಹಾಗೂ ಪುಣ್ಯಕ್ಷೇತ್ರಗಳು ಸ್ವಚ್ಛ, ಸುಂದರವಾಗಿ ಕಂಗೊಳಿಸಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಮಾರಮ್ಮ ದೇವಸ್ಥಾನ, ದಾಸರಹಳ್ಳಿಯ ಮಹೇಶ್ವರಮ್ಮ ದೇವಸ್ಥಾನ, ಕ್ಷೇತ್ರದ ಹಲವು ದೇವಸ್ಥಾನಗಳಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಂಡಿದ್ದೇವೆ' ಎಂದರು.</p>.<p>'22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ನಡೆಯುತ್ತಿದ್ದು, ಆ ದಿನ ಸಂಜೆ 5 ಗಂಟೆಯ ನಂತರ ಪ್ರತಿ ಮನೆಯಲ್ಲೂ ಕನಿಷ್ಠ ಐದು ದೀಪಗಳನ್ನು ಹಚ್ಚಿ ಶ್ರೀರಾಮನ ಪೂಜೆ, ಭಜನೆ ಮಾಡಲು ವಿನಂತಿಸುತ್ತಿದ್ದೇನೆ‘ ಎಂದರು.</p>.<p>ಇದೇ ವೇಳೆ ಸಮೀಪದ ಸರ್ಕಾರಿ ಪ್ರಾಥಮಿಕ ಶಾಲೆ ಹಿಂಭಾಗ ಕಸ ಸುರಿಯುತ್ತಿದ್ದ ಜಾಗವನ್ನು ಪೌರಕಾರ್ಮಿಕರು ಸ್ವಚ್ಛಗೊಳಿಸಿ, ರಂಗೋಲಿ ಹಾಕಿದರು. ಪೌರಕಾರ್ಮಿಕರಿಗೆ ಶಾಸಕ ಎಸ್.ಮುನಿರಾಜು ಅಭಿನಂದನೆ ಸಲ್ಲಿಸಿ, ಎಲ್ಲರಿಗೂ ಎಳನೀರು ಕೊಡಿಸಿದರು.</p>.<p>ದಾಸರಹಳ್ಳಿ ಮಂಡಲ ಅಧ್ಯಕ್ಷ ಸೋಮಶೇಖರ್ ಬಿಜೆಪಿ ಮುಖಂಡರಾದ ಸುಜಾತ ಎಸ್. ಮುನಿರಾಜು, ವಿಜಯಲಕ್ಷ್ಮಿ, ರಾಜೇಶ್ವರಿ, ಸವಿತಾ, ನಿರ್ಮಲ, ಪೌರಕಾರ್ಮಿಕರು ಈ ಭಾಗದ ಮುಖಂಡರು, ಸ್ಥಳೀಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಬಾಗಲಗುಂಟೆಯ ಮಾರಮ್ಮ ದೇವಸ್ಥಾನದಲ್ಲಿ ಶಾಸಕ ಎಸ್. ಮುನಿರಾಜು ನೇತೃತ್ವದಲ್ಲಿ ಪಕ್ಷದ ಎಲ್ಲಾ ಮುಖಂಡರು ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದರು.</p>.<p>ಬಳಿಕ ಮಾತನಾಡಿದ ಅವರು 'ದೇಶದ ಎಲ್ಲಾ ದೇಗುಲಗಳು ಹಾಗೂ ಪುಣ್ಯಕ್ಷೇತ್ರಗಳು ಸ್ವಚ್ಛ, ಸುಂದರವಾಗಿ ಕಂಗೊಳಿಸಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಮಾರಮ್ಮ ದೇವಸ್ಥಾನ, ದಾಸರಹಳ್ಳಿಯ ಮಹೇಶ್ವರಮ್ಮ ದೇವಸ್ಥಾನ, ಕ್ಷೇತ್ರದ ಹಲವು ದೇವಸ್ಥಾನಗಳಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಂಡಿದ್ದೇವೆ' ಎಂದರು.</p>.<p>'22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ನಡೆಯುತ್ತಿದ್ದು, ಆ ದಿನ ಸಂಜೆ 5 ಗಂಟೆಯ ನಂತರ ಪ್ರತಿ ಮನೆಯಲ್ಲೂ ಕನಿಷ್ಠ ಐದು ದೀಪಗಳನ್ನು ಹಚ್ಚಿ ಶ್ರೀರಾಮನ ಪೂಜೆ, ಭಜನೆ ಮಾಡಲು ವಿನಂತಿಸುತ್ತಿದ್ದೇನೆ‘ ಎಂದರು.</p>.<p>ಇದೇ ವೇಳೆ ಸಮೀಪದ ಸರ್ಕಾರಿ ಪ್ರಾಥಮಿಕ ಶಾಲೆ ಹಿಂಭಾಗ ಕಸ ಸುರಿಯುತ್ತಿದ್ದ ಜಾಗವನ್ನು ಪೌರಕಾರ್ಮಿಕರು ಸ್ವಚ್ಛಗೊಳಿಸಿ, ರಂಗೋಲಿ ಹಾಕಿದರು. ಪೌರಕಾರ್ಮಿಕರಿಗೆ ಶಾಸಕ ಎಸ್.ಮುನಿರಾಜು ಅಭಿನಂದನೆ ಸಲ್ಲಿಸಿ, ಎಲ್ಲರಿಗೂ ಎಳನೀರು ಕೊಡಿಸಿದರು.</p>.<p>ದಾಸರಹಳ್ಳಿ ಮಂಡಲ ಅಧ್ಯಕ್ಷ ಸೋಮಶೇಖರ್ ಬಿಜೆಪಿ ಮುಖಂಡರಾದ ಸುಜಾತ ಎಸ್. ಮುನಿರಾಜು, ವಿಜಯಲಕ್ಷ್ಮಿ, ರಾಜೇಶ್ವರಿ, ಸವಿತಾ, ನಿರ್ಮಲ, ಪೌರಕಾರ್ಮಿಕರು ಈ ಭಾಗದ ಮುಖಂಡರು, ಸ್ಥಳೀಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>