<p><strong>ರಾಜರಾಜೇಶ್ವರಿನಗರ</strong>: ನಗರದ ಹೊರವಲಯದ ವರಹಾಸಂದ್ರದಲ್ಲಿ ಸೋಮವಾರ ಬಸವೇಶ್ವರಸ್ವಾಮಿ ದೇವಸ್ಥಾನದಲ್ಲಿ 18 ನೇ ವರ್ಷದ ಕಡಲೆಕಾಯಿ ಪರಿಷೆ, ಸಂಕ್ರಾಂತಿ ಉತ್ಸವ ಹಾಗೂ ಬಸವೇಶ್ವರಸ್ವಾಮಿ ದೇವರ ರಥೋತ್ಸವ ನಡೆಯಲಿದೆ.</p>.<p>ಮುಂಜಾನೆ 6 ಗಂಟೆಯಿಂದ ರಾತ್ರಿ 8ರವರೆಗೂ ವಿವಿಧ ಸಾಂಸ್ಕೃತಿಕ ಉತ್ಸವಗಳು ನಡೆಯಲಿವೆ. </p>.<p>ಬಸವೇಶ್ವರ ಸ್ವಾಮಿ ದೇವಸ್ಥಾನ ಸಮಿತಿ, ಕಾಳಮ್ಮ ಮಲ್ಲೇಶಯ್ಯ ಫೌಂಡೇಷನ್, ಎಂ.ರುದ್ರೇಶ್ ಸ್ನೇಹಿತರ ಸಮೂಹ ಮತ್ತು 32 ಗ್ರಾಮಗಳ ಗ್ರಾಮಸ್ಥರ ಸಹಯೋಗದಲ್ಲಿ ಈ ಕಾರ್ಯಕ್ರಮಗಳು ನಡೆಯಲಿವೆ.</p>.<p>ಬಸವನಗುಡಿ ಕಡಲೆಕಾಯಿ ಪರಿಷೆ ಮಾದರಿಯಲ್ಲೇ ಇಲ್ಲಿಯೂ ಕಡಲೆಕಾಯಿ ಪರಿಷೆ ನಡೆಯಲಿದೆ. ರಥೋತ್ಸವಕ್ಕೆ ಬರುವ ಪ್ರತಿ ಭಕ್ತರಿಗೆ ತಲಾ ಎರಡು ಸೇರು ಕಡಲೆಕಾಯಿ, ಒಂದು ಜಲ್ಲೆ ಕಬ್ಬನ್ನು ಉಚಿತವಾಗಿ ವಿತರಿಸಲಾಗುವುದು ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ರುದ್ರೇಶ್ ತಿಳಿಸಿದ್ದಾರೆ.</p>.<p>ಜಾತ್ರೆ, ಉತ್ಸವ, ಹಬ್ಬಗಳಿಂದ ಮನುಷ್ಯರ ನಡುವಿನ ಸಂಬಂಧ ಗಟ್ಟಿಗೊಳ್ಳಲು ಸಹಾಯವಾಗುತ್ತದೆ. ನಮ್ಮ ಪೂರ್ವಿಕರ ಕಾಲದಿಂದಲೂ ನಡೆಸಿಕೊಂಡು ಬರುತ್ತಿರುವ ಜಾತ್ರೆ, ಉತ್ಸವಗಳನ್ನು ಯುವಜನಾಂಗಕ್ಕೆ ತಿಳಿಸುವುದಕ್ಕಾಗಿ ಕಡಲೆಕಾಯಿ ಪರಿಷೆ, ಸಂಕ್ರಾಂತಿ ಉತ್ಸವ, ಜಾತ್ರಾ ಮಹೋತ್ಸವ ನಡೆಸಿಕೊಂಡು ಬರಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ</strong>: ನಗರದ ಹೊರವಲಯದ ವರಹಾಸಂದ್ರದಲ್ಲಿ ಸೋಮವಾರ ಬಸವೇಶ್ವರಸ್ವಾಮಿ ದೇವಸ್ಥಾನದಲ್ಲಿ 18 ನೇ ವರ್ಷದ ಕಡಲೆಕಾಯಿ ಪರಿಷೆ, ಸಂಕ್ರಾಂತಿ ಉತ್ಸವ ಹಾಗೂ ಬಸವೇಶ್ವರಸ್ವಾಮಿ ದೇವರ ರಥೋತ್ಸವ ನಡೆಯಲಿದೆ.</p>.<p>ಮುಂಜಾನೆ 6 ಗಂಟೆಯಿಂದ ರಾತ್ರಿ 8ರವರೆಗೂ ವಿವಿಧ ಸಾಂಸ್ಕೃತಿಕ ಉತ್ಸವಗಳು ನಡೆಯಲಿವೆ. </p>.<p>ಬಸವೇಶ್ವರ ಸ್ವಾಮಿ ದೇವಸ್ಥಾನ ಸಮಿತಿ, ಕಾಳಮ್ಮ ಮಲ್ಲೇಶಯ್ಯ ಫೌಂಡೇಷನ್, ಎಂ.ರುದ್ರೇಶ್ ಸ್ನೇಹಿತರ ಸಮೂಹ ಮತ್ತು 32 ಗ್ರಾಮಗಳ ಗ್ರಾಮಸ್ಥರ ಸಹಯೋಗದಲ್ಲಿ ಈ ಕಾರ್ಯಕ್ರಮಗಳು ನಡೆಯಲಿವೆ.</p>.<p>ಬಸವನಗುಡಿ ಕಡಲೆಕಾಯಿ ಪರಿಷೆ ಮಾದರಿಯಲ್ಲೇ ಇಲ್ಲಿಯೂ ಕಡಲೆಕಾಯಿ ಪರಿಷೆ ನಡೆಯಲಿದೆ. ರಥೋತ್ಸವಕ್ಕೆ ಬರುವ ಪ್ರತಿ ಭಕ್ತರಿಗೆ ತಲಾ ಎರಡು ಸೇರು ಕಡಲೆಕಾಯಿ, ಒಂದು ಜಲ್ಲೆ ಕಬ್ಬನ್ನು ಉಚಿತವಾಗಿ ವಿತರಿಸಲಾಗುವುದು ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ರುದ್ರೇಶ್ ತಿಳಿಸಿದ್ದಾರೆ.</p>.<p>ಜಾತ್ರೆ, ಉತ್ಸವ, ಹಬ್ಬಗಳಿಂದ ಮನುಷ್ಯರ ನಡುವಿನ ಸಂಬಂಧ ಗಟ್ಟಿಗೊಳ್ಳಲು ಸಹಾಯವಾಗುತ್ತದೆ. ನಮ್ಮ ಪೂರ್ವಿಕರ ಕಾಲದಿಂದಲೂ ನಡೆಸಿಕೊಂಡು ಬರುತ್ತಿರುವ ಜಾತ್ರೆ, ಉತ್ಸವಗಳನ್ನು ಯುವಜನಾಂಗಕ್ಕೆ ತಿಳಿಸುವುದಕ್ಕಾಗಿ ಕಡಲೆಕಾಯಿ ಪರಿಷೆ, ಸಂಕ್ರಾಂತಿ ಉತ್ಸವ, ಜಾತ್ರಾ ಮಹೋತ್ಸವ ನಡೆಸಿಕೊಂಡು ಬರಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>