<p><strong>ಬೆಂಗಳೂರು</strong>: ಬಿಬಿಎಂಪಿ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳು ಜುಲೈ 31ರ ಒಳಗೆ ಶೇ 25ರಷ್ಟು ಸೇವಾಶುಲ್ಕ ಪಾವತಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.</p>.<p>ಬಾಕಿ ಆಸ್ತಿ ತೆರಿಗೆದಾರರಿಗೆ ಅನುಕೂಲ ಮಾಡಿಕೊಡುವ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್) ಕುರಿತು ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು ಸೇರಿದಂತೆ ವಿವಿಧ ಶೈಕ್ಷಣಿಕ ಸಂಸ್ಥೆಗಳ ಜೊತೆಗೆ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ನಗರದಲ್ಲಿ ಈ ಯೋಜನೆಯನ್ನು ಕಾಯ್ದೆ ಅನುಸಾರ ಜಾರಿ ಮಾಡಲಾಗಿದೆ. ಬಾಕಿ ಇರುವ ಆಸ್ತಿ ತೆರಿಗೆಯ ಮೇಲೆ ವಿಧಿಸುವ ಬಡ್ಡಿ ಸಂಪೂರ್ಣ ಮನ್ನಾ ಹಾಗೂ ದಂಡವನ್ನು ಅರ್ಧಕ್ಕೆ ಇಳಿಸಲಾಗಿದೆ. ಶೈಕ್ಷಣಿಕ ಸಂಸ್ಥೆಗಳು ಇದರ ಸದುಪಯೋಗವನ್ನು ಪಡೆದುಕೊಂಡು ಬಾಕಿ ಸೇವಾ ಶುಲ್ಕವನ್ನು ಪಾವತಿಸಬೇಕು. ಆನ್ಲೈನ್, ಆಫ್ಲೈನ್ ಮೂಲಕ ಶುಲ್ಕ ಪಾವತಿಸಬಹುದು ಎಂದು ವಿವರಿಸಿದರು.</p>.<p>ಒಂದೊಂದು ಶಿಕ್ಷಣ ಸಂಸ್ಥೆಯಲ್ಲಿ ಒಂದೊಂದು ರೀತಿಯ ಸಮಸ್ಯೆಯಿದೆ. ಅದನ್ನು ಪರಿಶೀಲಿಸಿದಾಗ ಆಸ್ತಿ ತೆರಿಗೆ ತಂತ್ರಾಂಶದಲ್ಲಿ ಬದಲಾವಣೆ ಮಾಡಿಕೊಂಡು ಆನ್ಲೈನ್ನಲ್ಲಿ ಪಾವತಿಸಲು ಸಮಸ್ಯೆಯಾಗಿರುವುದು ಕಂಡು ಬಂದಿದೆ. ಆನ್ಲೈನ್ ಮೂಲಕ ಪಾವತಿಸಲು ಸಾಧ್ಯವಾಗದವರು ಬ್ಯಾಂಕರ್ಸ್ ಚೆಕ್, ಪೇ ಆರ್ಡರ್, ಡಿಮಾಂಡ್ ಡ್ರಾಫ್ಟ್ ಮೂಲಕ ಪಾವತಿಸಲು ಅವಕಾಶ ನೀಡಲಾಗುವುದು. ಆಯಾ ವಲಯ ಜಂಟಿ ಆಯುಕ್ತರಿಗೆ ನಿಮ್ಮ ಸಂಸ್ಥೆಗಳ ಬಾಕಿ ಸೇವಾ ಶುಲ್ಕವನ್ನು ಡಿಮಾಂಡ್ ಡ್ರಾಫ್ಟ್ಗಳಲ್ಲಿ ಸಲ್ಲಿಸಬಹುದು ಎಂದು ಸಲಹೆ ನೀಡಿದರು.</p>.<p>ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮಾತನಾಡಿ, ‘ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಮಾದರಿ ಕಾರ್ಯವಿಧಾನವನ್ನು ನೀಡಲಾಗುವುದು. ಈಗಾಗಲೇ ಆಸ್ತಿ ತೆರಿಗೆ ಜಾಲದಲ್ಲಿರುವ ಶಿಕ್ಷಣ ಸಂಸ್ಥೆಗಳು ಸ್ವಯಂ ಘೋಷಣಾ ಪದ್ಧತಿ(ಎಸ್.ಎ.ಎಸ್) ಅಡಿಯಲ್ಲಿ ಅರ್ಜಿ ಸಂಖ್ಯೆ ಹೊಂದಿರುವ ಪ್ರಕರಣಗಳಲ್ಲಿ ಶೇ 25 ರಷ್ಟು ಸೇವಾ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ’ ಎಂದು ವಿವರಿಸಿದರು.</p>.<p>ವಲಯ ಆಯುಕ್ತರಾದ ಕರೀಗೌಡ, ರಮ್ಯಾ, ಕಂದಾಯ ವಿಭಾಗದ ಜಂಟಿ ಆಯುಕ್ಷೆ ಲಕ್ಷ್ಮಿದೇವಿ, ವಲಯ ಜಂಟಿ ಆಯುಕ್ತರು, ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು, ಪ್ರತಿನಿಧಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಬಿಎಂಪಿ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳು ಜುಲೈ 31ರ ಒಳಗೆ ಶೇ 25ರಷ್ಟು ಸೇವಾಶುಲ್ಕ ಪಾವತಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.</p>.<p>ಬಾಕಿ ಆಸ್ತಿ ತೆರಿಗೆದಾರರಿಗೆ ಅನುಕೂಲ ಮಾಡಿಕೊಡುವ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್) ಕುರಿತು ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು ಸೇರಿದಂತೆ ವಿವಿಧ ಶೈಕ್ಷಣಿಕ ಸಂಸ್ಥೆಗಳ ಜೊತೆಗೆ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ನಗರದಲ್ಲಿ ಈ ಯೋಜನೆಯನ್ನು ಕಾಯ್ದೆ ಅನುಸಾರ ಜಾರಿ ಮಾಡಲಾಗಿದೆ. ಬಾಕಿ ಇರುವ ಆಸ್ತಿ ತೆರಿಗೆಯ ಮೇಲೆ ವಿಧಿಸುವ ಬಡ್ಡಿ ಸಂಪೂರ್ಣ ಮನ್ನಾ ಹಾಗೂ ದಂಡವನ್ನು ಅರ್ಧಕ್ಕೆ ಇಳಿಸಲಾಗಿದೆ. ಶೈಕ್ಷಣಿಕ ಸಂಸ್ಥೆಗಳು ಇದರ ಸದುಪಯೋಗವನ್ನು ಪಡೆದುಕೊಂಡು ಬಾಕಿ ಸೇವಾ ಶುಲ್ಕವನ್ನು ಪಾವತಿಸಬೇಕು. ಆನ್ಲೈನ್, ಆಫ್ಲೈನ್ ಮೂಲಕ ಶುಲ್ಕ ಪಾವತಿಸಬಹುದು ಎಂದು ವಿವರಿಸಿದರು.</p>.<p>ಒಂದೊಂದು ಶಿಕ್ಷಣ ಸಂಸ್ಥೆಯಲ್ಲಿ ಒಂದೊಂದು ರೀತಿಯ ಸಮಸ್ಯೆಯಿದೆ. ಅದನ್ನು ಪರಿಶೀಲಿಸಿದಾಗ ಆಸ್ತಿ ತೆರಿಗೆ ತಂತ್ರಾಂಶದಲ್ಲಿ ಬದಲಾವಣೆ ಮಾಡಿಕೊಂಡು ಆನ್ಲೈನ್ನಲ್ಲಿ ಪಾವತಿಸಲು ಸಮಸ್ಯೆಯಾಗಿರುವುದು ಕಂಡು ಬಂದಿದೆ. ಆನ್ಲೈನ್ ಮೂಲಕ ಪಾವತಿಸಲು ಸಾಧ್ಯವಾಗದವರು ಬ್ಯಾಂಕರ್ಸ್ ಚೆಕ್, ಪೇ ಆರ್ಡರ್, ಡಿಮಾಂಡ್ ಡ್ರಾಫ್ಟ್ ಮೂಲಕ ಪಾವತಿಸಲು ಅವಕಾಶ ನೀಡಲಾಗುವುದು. ಆಯಾ ವಲಯ ಜಂಟಿ ಆಯುಕ್ತರಿಗೆ ನಿಮ್ಮ ಸಂಸ್ಥೆಗಳ ಬಾಕಿ ಸೇವಾ ಶುಲ್ಕವನ್ನು ಡಿಮಾಂಡ್ ಡ್ರಾಫ್ಟ್ಗಳಲ್ಲಿ ಸಲ್ಲಿಸಬಹುದು ಎಂದು ಸಲಹೆ ನೀಡಿದರು.</p>.<p>ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮಾತನಾಡಿ, ‘ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಮಾದರಿ ಕಾರ್ಯವಿಧಾನವನ್ನು ನೀಡಲಾಗುವುದು. ಈಗಾಗಲೇ ಆಸ್ತಿ ತೆರಿಗೆ ಜಾಲದಲ್ಲಿರುವ ಶಿಕ್ಷಣ ಸಂಸ್ಥೆಗಳು ಸ್ವಯಂ ಘೋಷಣಾ ಪದ್ಧತಿ(ಎಸ್.ಎ.ಎಸ್) ಅಡಿಯಲ್ಲಿ ಅರ್ಜಿ ಸಂಖ್ಯೆ ಹೊಂದಿರುವ ಪ್ರಕರಣಗಳಲ್ಲಿ ಶೇ 25 ರಷ್ಟು ಸೇವಾ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ’ ಎಂದು ವಿವರಿಸಿದರು.</p>.<p>ವಲಯ ಆಯುಕ್ತರಾದ ಕರೀಗೌಡ, ರಮ್ಯಾ, ಕಂದಾಯ ವಿಭಾಗದ ಜಂಟಿ ಆಯುಕ್ಷೆ ಲಕ್ಷ್ಮಿದೇವಿ, ವಲಯ ಜಂಟಿ ಆಯುಕ್ತರು, ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು, ಪ್ರತಿನಿಧಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>