ಇಂದಿನಿಂದ ಒಂದು ತಿಂಗಳ ಕಾಲ ಬಿಇಎಂಎಲ್ 2023 ರ ಸೆಪ್ಟೆಂಬರ್ 27 ರಂದು ಹೊರಡಿಸಿದ ಅಧಿಸೂಚನೆಯನ್ನು ಅಮಾನತ್ತಿನಲ್ಲಿ ಇರಿಸುವುದಾಗಿ ಆದೇಶಿಸಿರುವ ನ್ಯಾಯಪೀಠ, ‘ಗುತ್ತಿಗೆ ಕಾರ್ಮಿಕರ ಸ್ಥಿತಿಗತಿಯನ್ನು ಪರಿಶೀಲಿಸಿ ನಿಯಮಾನುಸಾರ ಅವರ ಅರ್ಹತೆಯನ್ನು ನಿರ್ಣಯಿಸುವುದು ಮತ್ತು ನೇಮಕಾತಿ ಪ್ರಕ್ರಿಯೆಯನ್ನು ನ್ಯಾಯೋಚಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸುವುದು ಮುಖ್ಯ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.