<p><strong>ಬೆಂಗಳೂರು:</strong> ‘ಮಳೆ ನೀರು ರಸ್ತೆಯಲ್ಲಿ ನಿಲ್ಲದಂತೆ ಕ್ರಮ ಕೈಗೊಂಡು, ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮಂಗಳವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಮುಂದಿನ ಮೂರು ದಿನವೂ ನಿರಂತರ ಮಳೆಯಾಗುವ ನಿರೀಕ್ಷೆ ಇದೆ. ವಲಯ ವ್ಯಾಪ್ತಿಯ ಅಧಿಕಾರಿಗಳು ಸನ್ನದ್ಧರಾಗಿದ್ದು, ಮುಂಜಾಗ್ರತೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.</p>.<p>‘ಯಾವುದೇ ಸಮಸ್ಯೆಯಾಗದಂತೆ ಅಗತ್ಯಕ್ರಮ ಕೈಗೊಳ್ಳಬೇಕು. ಬಾಧಿತ ಪ್ರದೇಶಗಳ ಬಳಿ ನಿಗಾ ವಹಿಸಬೇಕು. ಸಮಸ್ಯೆಯಾಗುವ ಸಂಭವವಿದ್ದರೆ ಸ್ಥಳೀಯ ನಿವಾಸಿಗಳನ್ನು ಕೂಡಲೆ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವ ವ್ಯವಸ್ಥೆ ಮಾಡಬೇಕು’ ಎಂದು ಸೂಚಿಸಿದರು.</p>.<p>‘ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗುವ ಕಾರಣ ಹೆಚ್ಚು ಸಂಚಾರ ದಟ್ಟಣೆಯಾಗಲಿದೆ. ಈ ಸಂಬಂಧ ರಸ್ತೆ ಮೂಲಸೌಕರ್ಯ ವಿಭಾಗದ ಅಧಿಕಾರಿಗಳು ಎಲ್ಲ ಪ್ರಮುಖ ರಸ್ತೆಗಳಲ್ಲಿ ಪರಿಶೀಲನೆ ನಡೆಸಿ, ನೀರು ನಿಲ್ಲದಂತೆ ಸೂಕ್ತ ಕ್ರಮ ವಹಿಸಬೇಕು. ಪಾಲಿಕೆ ಸಿಬ್ಬಂದಿಯ ಸಹಯೋಗದೊಂದಿಗೆ ಗ್ರೇಟಿಂಗ್ಸ್ಗಳ ಬಳಿ ತ್ಯಾಜ್ಯವನ್ನು ಸ್ವಚ್ಛಗೊಳಿಸಿ ಬದಿಯ ಕಾಲುವೆಗಳಿಗೆ ಸರಾಗವಾಗಿ ಮಳೆ ನೀರು ಹರಿದು ಹೋಗುವಂತೆ ನೋಡಿಕೊಳ್ಳಬೇಕು. ರಾಜಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಯುವಂತೆ ವ್ಯವಸ್ಥೆ ಮಾಡಬೇಕು’ ಎಂದರು.</p>.<p>ಮಳೆ ನೀರು ನಿಂತಿರುವ, ಜಲಾವೃತವಾಗಿರುವ, ಮರ, ಮರದ ರೆಂಬೆ-ಕೊಂಬೆಗಳು ಧರೆಗುರುಳಿರುವುದು ಸೇರಿ ಸಮಸ್ಯೆಗಳ ಕುರಿತು ನಾಗರಿಕರಿಂದ ನಿಯಂತ್ರಣ ಕೊಠಡಿಗೆ ಬರುವ ದೂರುಗಳಿಗೆ ಕೂಡಲೆ ಸ್ಪಂದಿಸಿ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p><strong>1533ಗೆ ಕರೆ ಮಾಡಿ</strong> </p><p>ಎಂಟು ವಲಯ ವ್ಯಾಪ್ತಿಯಲ್ಲಿ ನಿಯಂತ್ರಣ ಕೊಠಡಿಗಳಿದ್ದು ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯಿದೆ. ಮಳೆಯಿಂದಾಗಿ ಏನಾದರೂ ಸಮಸ್ಯೆಗಳಿದ್ದರೆ ನಾಗರಿಕರು ಕೂಡಲೆ ಪಾಲಿಕೆಯ ಸಹಾಯವಾಣಿ 1533ಗೆ ಕರೆ ಮಾಡಿ ದೂರು ನೀಡಬಹುದು. ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದು ತುಷಾರ್ ಗಿರಿನಾಥ್ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮಳೆ ನೀರು ರಸ್ತೆಯಲ್ಲಿ ನಿಲ್ಲದಂತೆ ಕ್ರಮ ಕೈಗೊಂಡು, ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮಂಗಳವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಮುಂದಿನ ಮೂರು ದಿನವೂ ನಿರಂತರ ಮಳೆಯಾಗುವ ನಿರೀಕ್ಷೆ ಇದೆ. ವಲಯ ವ್ಯಾಪ್ತಿಯ ಅಧಿಕಾರಿಗಳು ಸನ್ನದ್ಧರಾಗಿದ್ದು, ಮುಂಜಾಗ್ರತೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.</p>.<p>‘ಯಾವುದೇ ಸಮಸ್ಯೆಯಾಗದಂತೆ ಅಗತ್ಯಕ್ರಮ ಕೈಗೊಳ್ಳಬೇಕು. ಬಾಧಿತ ಪ್ರದೇಶಗಳ ಬಳಿ ನಿಗಾ ವಹಿಸಬೇಕು. ಸಮಸ್ಯೆಯಾಗುವ ಸಂಭವವಿದ್ದರೆ ಸ್ಥಳೀಯ ನಿವಾಸಿಗಳನ್ನು ಕೂಡಲೆ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವ ವ್ಯವಸ್ಥೆ ಮಾಡಬೇಕು’ ಎಂದು ಸೂಚಿಸಿದರು.</p>.<p>‘ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗುವ ಕಾರಣ ಹೆಚ್ಚು ಸಂಚಾರ ದಟ್ಟಣೆಯಾಗಲಿದೆ. ಈ ಸಂಬಂಧ ರಸ್ತೆ ಮೂಲಸೌಕರ್ಯ ವಿಭಾಗದ ಅಧಿಕಾರಿಗಳು ಎಲ್ಲ ಪ್ರಮುಖ ರಸ್ತೆಗಳಲ್ಲಿ ಪರಿಶೀಲನೆ ನಡೆಸಿ, ನೀರು ನಿಲ್ಲದಂತೆ ಸೂಕ್ತ ಕ್ರಮ ವಹಿಸಬೇಕು. ಪಾಲಿಕೆ ಸಿಬ್ಬಂದಿಯ ಸಹಯೋಗದೊಂದಿಗೆ ಗ್ರೇಟಿಂಗ್ಸ್ಗಳ ಬಳಿ ತ್ಯಾಜ್ಯವನ್ನು ಸ್ವಚ್ಛಗೊಳಿಸಿ ಬದಿಯ ಕಾಲುವೆಗಳಿಗೆ ಸರಾಗವಾಗಿ ಮಳೆ ನೀರು ಹರಿದು ಹೋಗುವಂತೆ ನೋಡಿಕೊಳ್ಳಬೇಕು. ರಾಜಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಯುವಂತೆ ವ್ಯವಸ್ಥೆ ಮಾಡಬೇಕು’ ಎಂದರು.</p>.<p>ಮಳೆ ನೀರು ನಿಂತಿರುವ, ಜಲಾವೃತವಾಗಿರುವ, ಮರ, ಮರದ ರೆಂಬೆ-ಕೊಂಬೆಗಳು ಧರೆಗುರುಳಿರುವುದು ಸೇರಿ ಸಮಸ್ಯೆಗಳ ಕುರಿತು ನಾಗರಿಕರಿಂದ ನಿಯಂತ್ರಣ ಕೊಠಡಿಗೆ ಬರುವ ದೂರುಗಳಿಗೆ ಕೂಡಲೆ ಸ್ಪಂದಿಸಿ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p><strong>1533ಗೆ ಕರೆ ಮಾಡಿ</strong> </p><p>ಎಂಟು ವಲಯ ವ್ಯಾಪ್ತಿಯಲ್ಲಿ ನಿಯಂತ್ರಣ ಕೊಠಡಿಗಳಿದ್ದು ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯಿದೆ. ಮಳೆಯಿಂದಾಗಿ ಏನಾದರೂ ಸಮಸ್ಯೆಗಳಿದ್ದರೆ ನಾಗರಿಕರು ಕೂಡಲೆ ಪಾಲಿಕೆಯ ಸಹಾಯವಾಣಿ 1533ಗೆ ಕರೆ ಮಾಡಿ ದೂರು ನೀಡಬಹುದು. ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದು ತುಷಾರ್ ಗಿರಿನಾಥ್ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>