<p><strong>ಬೆಂಗಳೂರು</strong>: ‘ಬ್ರ್ಯಾಂಡ್ ಬೆಂಗಳೂರು’ ಯೋಜನೆಯಡಿ ನಗರದಲ್ಲಿ 2024–25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ₹3,450 ಕೋಟಿ ಅನುದಾನ ನೀಡಲಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಯ ಸಿ.ಕೆ. ರಾಮಮೂರ್ತಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ‘ರಾಜ್ಯ ಸರ್ಕಾರದ ಅನುದಾನದಲ್ಲಿ ವೈಟ್ ಟಾಪಿಂಗ್, ಸುರಂಗ ಮಾರ್ಗ ಸೇರಿದಂತೆ ಹಲವು ಯೋಜನೆಗಳನ್ನು ನಿರ್ವಹಿಸಲಾಗುತ್ತದೆ. ಇದಕ್ಕಾಗಿ ₹1,790 ಕೋಟಿ ನಿಗದಿಪಡಿಸಲಾಗಿದೆ’ ಎಂದರು.</p>.<p>ಬಿಬಿಎಂಪಿ ಅನುದಾನದಲ್ಲಿ, ವೈಟ್ ಟಾಪಿಂಗ್, ರಸ್ತೆ ಕಾಮಗಾರಿಗಳು, ಎಲಿವೇಟೆಡ್ ಕಾಮಗಾರಿಗಳನ್ನು ₹1,660 ಕೋಟಿ ವೆಚ್ಚದಲ್ಲಿ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.</p>.<p>‘ರಸ್ತೆ ಗುಂಡಿ ಗಮನ’: ನಗರದಲ್ಲಿ ರಸ್ತೆ ಗುಂಡಿಗಳನ್ನು ಗುರುತಿಸಲು ಮತ್ತು ನಿಗಾ ವಹಿಸಲು ‘ರಸ್ತೆ ಗುಂಡಿ ಗಮನ’ ಎಂಬ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ ಶಿವಕುಮಾರ್ ತಿಳಿಸಿದರು.</p>.<p>ಜಲಮಂಡಳಿ ಸೇರಿದಂತೆ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿದ್ದು, ರಸ್ತೆ ಅಗೆತವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಈ ವರ್ಷದ ಜೂನ್ ಅಂತ್ಯದ ವೇಳೆಗೆ 16,202 ರಸ್ತೆ ಗುಂಡಿಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 15,686 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಅಂಕಿ–ಅಂಶ ಸಹಿತ ವಿವರಿಸಿದರು.</p>.<p>ರಸ್ತೆಗುಂಡಿಗಳನ್ನು ದುರಸ್ತಿಪಡಿಸಲು ಬ್ಯಾಚ್ ಮಿಕ್ಸ್ ಘಟಕವನ್ನು ಸ್ಥಾಪಿಸಲಾಗಿದೆ. ಮಳೆಗಾಲದಲ್ಲಿಯೂ ರಸ್ತೆ ಗುಂಡಿಗಳನ್ನು ಮುಚ್ಚಲು ‘ಕೋಲ್ಡ್ ಆಸ್ಫಾಲ್ಟ್ ಮಿಕ್ಸ್’ ತಯಾರಿಸುವ ಘಟಕವನ್ನೂ ಸ್ಥಾಪಿಸಲಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲೆಂದೇ ಪ್ರತಿ ವಾರ್ಡ್ಗೆ ₹15 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದರು.</p><p><strong>‘ಸಮನ್ವಯ: ಜುಲೈ 27ರಂದು ಸಭೆ’</strong></p><p>ಬೆಂಗಳೂರು ನಗರದ ಆಡಳಿತ ನಿರ್ವಹಣೆಗೆ ಸಂಬಂಧಿಸಿದಂತೆ ಬಿಬಿಎಂಪಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಸ್ಕಾಂ, ಜಲಮಂಡಳಿ ಸೇರಿದಂತೆ ಎಲ್ಲ ಸಂಸ್ಥೆಗಳು, ಇಲಾಖೆಗಳ ಮಧ್ಯೆ ಸಮನ್ವಯ ತರಲು ಜುಲೈ 27ರಂದು ನಗರದ ಶಾಸಕರ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ<br>ಡಿ.ಕೆ. ಶಿವಕುಮಾರ್ ತಿಳಿಸಿದರು.</p><p>ಬಿಜೆಪಿಯ ಸಿ.ಕೆ. ರಾಮಮೂರ್ತಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡುತ್ತಿದ್ದಾಗ, ವಿರೋಧ ಪಕ್ಷದ ನಾಯಕ ಆರ್. ಅಶೋಕ, ಎಸ್. ಸುರೇಶ್ ಕುಮಾರ್ ಮತ್ತಿತರರು ನಗರದ ಆಡಳಿತ ನಿರ್ವಹಣೆಗೆ ಸಂಬಂಧಿಸಿದ ಸಂಸ್ಥೆಗಳ ಮಧ್ಯೆ ಸಮನ್ವಯದ ಕೊರತೆ ಕುರಿತು ಪ್ರಸ್ತಾಪಿಸಿದರು.</p><p>‘ನಿಮ್ಮ ಮಾತಿಗೆ ನನ್ನ ಸಹಮತ ಇದೆ. ಒಂದು ವರ್ಷದಿಂದ ಸಮನ್ವಯ ಸಾಧಿಸಲು ಕಸರತ್ತು ನಡೆಸಿದ್ದೇನೆ. ಆದರೆ, ಇನ್ನೂ ಸಂಪೂರ್ಣ ಯಶಸ್ವಿಯಾಗಿಲ್ಲ. ಒಂದು ಹಂತಕ್ಕೆ ಸಮಸ್ಯೆ ನಿವಾರಣೆಯಾಗಿದೆ. ಪ್ರತಿಪಕ್ಷದವರು ಸಹಕಾರ ನೀಡಿದರೆ ತ್ಯಾಜ್ಯ ವಿಲೇವಾರಿ, ಕುಡಿಯುವ ನೀರು, ಸಂಚಾರ ದಟ್ಟಣೆ, ಬೀದಿ ದೀಪ, ತೆರಿಗೆ ಸಂಗ್ರಹ, ಹಸಿರೀಕರಣ ಹೀಗೆ ಅನೇಕ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಬಹುದು’ ಎಂದು ಶಿವಕುಮಾರ್ ಅವರು ಹೇಳಿದರು.</p><p><strong>ಅನುದಾನಕ್ಕೆ ಆಗ್ರಹ: ‘ವೈಟ್ ಟಾಪಿಂಗ್ ಸೇರಿದಂತೆ ಹಲವು ಕಾಮಗಾರಿಗಳಿಗೆ ನಗರದ 12 ವಿಧಾನಸಭಾ ಕ್ಷೇತ್ರಗಳಿಗಷ್ಟೇ ಅನುದಾನ ಬಿಡುಗಡೆ ಮಾಡಲಾಗಿದೆ. ಬಿಜೆಪಿಯ ಶಾಸಕರ ಕ್ಷೇತ್ರಗಳಿಗೆ ಅನುದಾನವನ್ನೇ ನೀಡಿಲ್ಲ’ ಎಂದು ರಾಮೂರ್ತಿ ದೂರಿದರು.</strong></p><p>‘ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿನ ಅನುದಾನ ಬಿಡುಗಡೆ ಮಾಹಿತಿ ಪರಿಶೀಲಿಸಿ. ಎಲ್ಲ ಪಕ್ಷಗಳ ಶಾಸಕರಿಗೂ ಅನುದಾನ ನೀಡಲಾಗಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬ್ರ್ಯಾಂಡ್ ಬೆಂಗಳೂರು’ ಯೋಜನೆಯಡಿ ನಗರದಲ್ಲಿ 2024–25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ₹3,450 ಕೋಟಿ ಅನುದಾನ ನೀಡಲಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಯ ಸಿ.ಕೆ. ರಾಮಮೂರ್ತಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ‘ರಾಜ್ಯ ಸರ್ಕಾರದ ಅನುದಾನದಲ್ಲಿ ವೈಟ್ ಟಾಪಿಂಗ್, ಸುರಂಗ ಮಾರ್ಗ ಸೇರಿದಂತೆ ಹಲವು ಯೋಜನೆಗಳನ್ನು ನಿರ್ವಹಿಸಲಾಗುತ್ತದೆ. ಇದಕ್ಕಾಗಿ ₹1,790 ಕೋಟಿ ನಿಗದಿಪಡಿಸಲಾಗಿದೆ’ ಎಂದರು.</p>.<p>ಬಿಬಿಎಂಪಿ ಅನುದಾನದಲ್ಲಿ, ವೈಟ್ ಟಾಪಿಂಗ್, ರಸ್ತೆ ಕಾಮಗಾರಿಗಳು, ಎಲಿವೇಟೆಡ್ ಕಾಮಗಾರಿಗಳನ್ನು ₹1,660 ಕೋಟಿ ವೆಚ್ಚದಲ್ಲಿ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.</p>.<p>‘ರಸ್ತೆ ಗುಂಡಿ ಗಮನ’: ನಗರದಲ್ಲಿ ರಸ್ತೆ ಗುಂಡಿಗಳನ್ನು ಗುರುತಿಸಲು ಮತ್ತು ನಿಗಾ ವಹಿಸಲು ‘ರಸ್ತೆ ಗುಂಡಿ ಗಮನ’ ಎಂಬ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ ಶಿವಕುಮಾರ್ ತಿಳಿಸಿದರು.</p>.<p>ಜಲಮಂಡಳಿ ಸೇರಿದಂತೆ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿದ್ದು, ರಸ್ತೆ ಅಗೆತವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಈ ವರ್ಷದ ಜೂನ್ ಅಂತ್ಯದ ವೇಳೆಗೆ 16,202 ರಸ್ತೆ ಗುಂಡಿಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 15,686 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಅಂಕಿ–ಅಂಶ ಸಹಿತ ವಿವರಿಸಿದರು.</p>.<p>ರಸ್ತೆಗುಂಡಿಗಳನ್ನು ದುರಸ್ತಿಪಡಿಸಲು ಬ್ಯಾಚ್ ಮಿಕ್ಸ್ ಘಟಕವನ್ನು ಸ್ಥಾಪಿಸಲಾಗಿದೆ. ಮಳೆಗಾಲದಲ್ಲಿಯೂ ರಸ್ತೆ ಗುಂಡಿಗಳನ್ನು ಮುಚ್ಚಲು ‘ಕೋಲ್ಡ್ ಆಸ್ಫಾಲ್ಟ್ ಮಿಕ್ಸ್’ ತಯಾರಿಸುವ ಘಟಕವನ್ನೂ ಸ್ಥಾಪಿಸಲಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲೆಂದೇ ಪ್ರತಿ ವಾರ್ಡ್ಗೆ ₹15 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದರು.</p><p><strong>‘ಸಮನ್ವಯ: ಜುಲೈ 27ರಂದು ಸಭೆ’</strong></p><p>ಬೆಂಗಳೂರು ನಗರದ ಆಡಳಿತ ನಿರ್ವಹಣೆಗೆ ಸಂಬಂಧಿಸಿದಂತೆ ಬಿಬಿಎಂಪಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಸ್ಕಾಂ, ಜಲಮಂಡಳಿ ಸೇರಿದಂತೆ ಎಲ್ಲ ಸಂಸ್ಥೆಗಳು, ಇಲಾಖೆಗಳ ಮಧ್ಯೆ ಸಮನ್ವಯ ತರಲು ಜುಲೈ 27ರಂದು ನಗರದ ಶಾಸಕರ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ<br>ಡಿ.ಕೆ. ಶಿವಕುಮಾರ್ ತಿಳಿಸಿದರು.</p><p>ಬಿಜೆಪಿಯ ಸಿ.ಕೆ. ರಾಮಮೂರ್ತಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡುತ್ತಿದ್ದಾಗ, ವಿರೋಧ ಪಕ್ಷದ ನಾಯಕ ಆರ್. ಅಶೋಕ, ಎಸ್. ಸುರೇಶ್ ಕುಮಾರ್ ಮತ್ತಿತರರು ನಗರದ ಆಡಳಿತ ನಿರ್ವಹಣೆಗೆ ಸಂಬಂಧಿಸಿದ ಸಂಸ್ಥೆಗಳ ಮಧ್ಯೆ ಸಮನ್ವಯದ ಕೊರತೆ ಕುರಿತು ಪ್ರಸ್ತಾಪಿಸಿದರು.</p><p>‘ನಿಮ್ಮ ಮಾತಿಗೆ ನನ್ನ ಸಹಮತ ಇದೆ. ಒಂದು ವರ್ಷದಿಂದ ಸಮನ್ವಯ ಸಾಧಿಸಲು ಕಸರತ್ತು ನಡೆಸಿದ್ದೇನೆ. ಆದರೆ, ಇನ್ನೂ ಸಂಪೂರ್ಣ ಯಶಸ್ವಿಯಾಗಿಲ್ಲ. ಒಂದು ಹಂತಕ್ಕೆ ಸಮಸ್ಯೆ ನಿವಾರಣೆಯಾಗಿದೆ. ಪ್ರತಿಪಕ್ಷದವರು ಸಹಕಾರ ನೀಡಿದರೆ ತ್ಯಾಜ್ಯ ವಿಲೇವಾರಿ, ಕುಡಿಯುವ ನೀರು, ಸಂಚಾರ ದಟ್ಟಣೆ, ಬೀದಿ ದೀಪ, ತೆರಿಗೆ ಸಂಗ್ರಹ, ಹಸಿರೀಕರಣ ಹೀಗೆ ಅನೇಕ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಬಹುದು’ ಎಂದು ಶಿವಕುಮಾರ್ ಅವರು ಹೇಳಿದರು.</p><p><strong>ಅನುದಾನಕ್ಕೆ ಆಗ್ರಹ: ‘ವೈಟ್ ಟಾಪಿಂಗ್ ಸೇರಿದಂತೆ ಹಲವು ಕಾಮಗಾರಿಗಳಿಗೆ ನಗರದ 12 ವಿಧಾನಸಭಾ ಕ್ಷೇತ್ರಗಳಿಗಷ್ಟೇ ಅನುದಾನ ಬಿಡುಗಡೆ ಮಾಡಲಾಗಿದೆ. ಬಿಜೆಪಿಯ ಶಾಸಕರ ಕ್ಷೇತ್ರಗಳಿಗೆ ಅನುದಾನವನ್ನೇ ನೀಡಿಲ್ಲ’ ಎಂದು ರಾಮೂರ್ತಿ ದೂರಿದರು.</strong></p><p>‘ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿನ ಅನುದಾನ ಬಿಡುಗಡೆ ಮಾಹಿತಿ ಪರಿಶೀಲಿಸಿ. ಎಲ್ಲ ಪಕ್ಷಗಳ ಶಾಸಕರಿಗೂ ಅನುದಾನ ನೀಡಲಾಗಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>