<p><strong>ಬೆಂಗಳೂರು:</strong> ಹಾಸನ ಜಂಕ್ಷನ್ ರೈಲ್ವೆ ಯಾರ್ಡ್ ಮರುನಿರ್ಮಾಣ ಕಾಮಗಾರಿಯನ್ನು ಕುಕ್ಕೆಸುಬ್ರಹ್ಮಣ್ಯದಲ್ಲಿ ನಡೆಯಲಿರುವ ‘ಸುಬ್ರಹ್ಮಣ್ಯ ಷಷ್ಠಿ’ಯ ಬಳಿಕ ಕೈಗೊಳ್ಳಬೇಕು ಎಂದು ಕೆಪಿಸಿಸಿ ವಕ್ತಾರ ಶಂಕರ್ ಗುಹ ದ್ವಾರಕನಾಥ್ ರೈಲ್ವೆ ಇಲಾಖೆಯನ್ನು ಆಗ್ರಹಿಸಿದ್ದಾರೆ.</p>.<p>ಈ ಅವಧಿಯಲ್ಲಿ ಕಾಮಗಾರಿಗಾಗಿ ರೈಲು ಸಂಚಾರವನ್ನು ಸ್ಥಗಿತಗೊಳಿಸಿದರೆ ಭಕ್ತರಿಗೆ ತೊಂದರೆಯಾಗಲಿದೆ. ಆದ್ದರಿಂದ ಕಾಮಗಾರಿಯನ್ನು ಮುಂದೂಡಬೇಕೆಂದು ಅವರು ಒತ್ತಾಯಿಸಿದ್ದಾರೆ.</p>.<p>ಯಾರ್ಡ್ ಮರುನಿರ್ಮಾಣಕ್ಕಾಗಿ ಡಿ.14ರಿಂದ 22ರ ವರೆಗೆ 20 ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. 8 ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದೆ. 2 ರೈಲುಗಳು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲಿವೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದರು.</p>.<p>ಡಿ.18ರಂದು ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಾಲಯದಲ್ಲಿ ಸುಬ್ರಹ್ಮಣ್ಯ ಷಷ್ಠಿ ನಡೆಯಲಿದೆ. ದೇಶ ಮತ್ತು ರಾಜ್ಯದ ವಿವಿಧ ಪ್ರದೇಶಗಳ ಲಕ್ಷಾಂತರ ಭಕ್ತರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಷಷ್ಠಿ ಸಮಯದಲ್ಲಿ ರೈಲು ಸಂಚಾರ ಇಲ್ಲದಿದ್ದರೆ ಭಕ್ತರಿಗೆ ಸುಬ್ರಹ್ಮಣ್ಯಕ್ಕೆ ತೆರಳಲು ಅನನುಕೂಲವಾಗಲಿದೆ. ಇದನ್ನು ತಪ್ಪಿಸಲು ಕಾಮಗಾರಿಯನ್ನು ಮುಂದೂಡಬೇಕು. ಡಿ. 20ರ ನಂತರ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಶಂಕರ್ ಗುಹ ದ್ವಾರಕನಾಥ್ ಒತ್ತಾಯಿಸಿದ್ದಾರೆ.</p>.<p><strong>ಬಸ್ ಪ್ರಮಾಣ ಹೆಚ್ಚಿಸಿ:</strong> ಸುಬ್ರಹ್ಮಣ್ಯ ಷಷ್ಠಿ ಸಮಯದಲ್ಲಿ ಭಕ್ತರಿಗೆ ಸಂಚರಿಸಲು ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಸಹಿತ ವಿವಿಧ ನಿಗಮಗಳ ಬಸ್ಗಳ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಸಾರಿಗೆ ಸಚಿವರಿಗೂ ಅವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಾಸನ ಜಂಕ್ಷನ್ ರೈಲ್ವೆ ಯಾರ್ಡ್ ಮರುನಿರ್ಮಾಣ ಕಾಮಗಾರಿಯನ್ನು ಕುಕ್ಕೆಸುಬ್ರಹ್ಮಣ್ಯದಲ್ಲಿ ನಡೆಯಲಿರುವ ‘ಸುಬ್ರಹ್ಮಣ್ಯ ಷಷ್ಠಿ’ಯ ಬಳಿಕ ಕೈಗೊಳ್ಳಬೇಕು ಎಂದು ಕೆಪಿಸಿಸಿ ವಕ್ತಾರ ಶಂಕರ್ ಗುಹ ದ್ವಾರಕನಾಥ್ ರೈಲ್ವೆ ಇಲಾಖೆಯನ್ನು ಆಗ್ರಹಿಸಿದ್ದಾರೆ.</p>.<p>ಈ ಅವಧಿಯಲ್ಲಿ ಕಾಮಗಾರಿಗಾಗಿ ರೈಲು ಸಂಚಾರವನ್ನು ಸ್ಥಗಿತಗೊಳಿಸಿದರೆ ಭಕ್ತರಿಗೆ ತೊಂದರೆಯಾಗಲಿದೆ. ಆದ್ದರಿಂದ ಕಾಮಗಾರಿಯನ್ನು ಮುಂದೂಡಬೇಕೆಂದು ಅವರು ಒತ್ತಾಯಿಸಿದ್ದಾರೆ.</p>.<p>ಯಾರ್ಡ್ ಮರುನಿರ್ಮಾಣಕ್ಕಾಗಿ ಡಿ.14ರಿಂದ 22ರ ವರೆಗೆ 20 ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. 8 ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದೆ. 2 ರೈಲುಗಳು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲಿವೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದರು.</p>.<p>ಡಿ.18ರಂದು ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಾಲಯದಲ್ಲಿ ಸುಬ್ರಹ್ಮಣ್ಯ ಷಷ್ಠಿ ನಡೆಯಲಿದೆ. ದೇಶ ಮತ್ತು ರಾಜ್ಯದ ವಿವಿಧ ಪ್ರದೇಶಗಳ ಲಕ್ಷಾಂತರ ಭಕ್ತರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಷಷ್ಠಿ ಸಮಯದಲ್ಲಿ ರೈಲು ಸಂಚಾರ ಇಲ್ಲದಿದ್ದರೆ ಭಕ್ತರಿಗೆ ಸುಬ್ರಹ್ಮಣ್ಯಕ್ಕೆ ತೆರಳಲು ಅನನುಕೂಲವಾಗಲಿದೆ. ಇದನ್ನು ತಪ್ಪಿಸಲು ಕಾಮಗಾರಿಯನ್ನು ಮುಂದೂಡಬೇಕು. ಡಿ. 20ರ ನಂತರ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಶಂಕರ್ ಗುಹ ದ್ವಾರಕನಾಥ್ ಒತ್ತಾಯಿಸಿದ್ದಾರೆ.</p>.<p><strong>ಬಸ್ ಪ್ರಮಾಣ ಹೆಚ್ಚಿಸಿ:</strong> ಸುಬ್ರಹ್ಮಣ್ಯ ಷಷ್ಠಿ ಸಮಯದಲ್ಲಿ ಭಕ್ತರಿಗೆ ಸಂಚರಿಸಲು ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಸಹಿತ ವಿವಿಧ ನಿಗಮಗಳ ಬಸ್ಗಳ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಸಾರಿಗೆ ಸಚಿವರಿಗೂ ಅವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>