<p><strong>ಬೆಂಗಳೂರು</strong>: ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ ಗಿರಿನಗರ ಠಾಣೆ ಪೊಲೀಸರಿಗೆ ಮನಕಲಕುವ ವಿಷಯವೊಂದು ಗೊತ್ತಾಗಿದೆ.</p>.<p>‘ಕ್ಯಾನ್ಸರ್ನಿಂದ ಬಳಲುತ್ತಿದ್ದ ತನ್ನ ಸ್ನೇಹಿತನ ಪತ್ನಿಯ ಚಿಕಿತ್ಸೆಗಾಗಿ ಬೈಕ್ ಕಳ್ಳತನ ಮಾಡುತ್ತಿರುವುದಾಗಿ ಒಬ್ಬ ಆರೋಪಿ ತಪ್ಪೊಪ್ಪಿಕೊಂಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.</p>.<p>ಹೆಸರಘಟ್ಟದ ನಿವಾಸಿ ಅಶೋಕ್(30) ಮತ್ತು ಆತನ ಸಹಚರ ಸತೀಶ್ ಅಲಿಯಾಸ್ ಸತ್ಯ(34) ಎಂಬುವವರನ್ನು ಪೊಲೀಸರು ಬಂಧಿಸಿದ್ದು, ಅವರಿಂದ ₹10.71 ಲಕ್ಷ ಮೌಲ್ಯದ 8 ದ್ವಿಚಕ್ರ ವಾಹನ ಜಪ್ತಿ ಮಾಡಿಕೊಂಡಿದ್ದಾರೆ. ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಾಫ್ಟ್ವೇರ್ ಎಂಜಿನಿಯರ್ ಮನೆ ಎದುರು ನಿಲುಗಡೆ ಮಾಡಿದ್ದ ಬೈಕ್ ಕಳ್ಳತನ ಆಗಿತ್ತು. ಅವರು ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.</p>.<p>‘ಆರೋಪಿ ಅಶೋಕ್ ಪತ್ನಿಯಿಂದ ದೂರವಾದ ಮೇಲೆ ಸ್ನೇಹಿತನ ಮನೆಯಲ್ಲಿ ನೆಲೆಸಿದ್ದರು. ಆಗ ಸ್ನೇಹಿತನ ಪತ್ನಿಗೆ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಆದರೆ, ಆಕೆಯ ಚಿಕಿತ್ಸೆ ವೆಚ್ಚ ಭರಿಸಲು ಸ್ನೇಹಿತನಿಂದ ಸಾಧ್ಯವಾಗುತ್ತಿಲ್ಲ ಎಂಬುದು ತಿಳಿದಿತ್ತು. ಹಣ ಹೊಂದಿಸಲು ಅಶೋಕ್ ಮುಂದಾಗಿದ್ದರು. ಎಲ್ಲಿಯೂ ಸಾಲ ಸಿಕ್ಕಿರಲಿಲ್ಲ. ನಂತರ, ಆರೋಪಿ ತನ್ನ ಸಹಚರ ಸತೀಶ್ ಜತೆ ಸೇರಿ ಕೆಟಿಎಂ ಮತ್ತು ಪಲ್ಸರ್ ಬೈಕ್ಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು. ಬಳಿಕ ಅವುಗಳನ್ನು ಗ್ರಾಮಾಂತರ ಭಾಗದಲ್ಲಿ ಕಡಿಮೆ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದರು. ಅದರಿಂದ ಬಂದ ಹಣವನ್ನು ಚಿಕಿತ್ಸೆಗೆ ಕೊಡಲು ಮುಂದಾಗಿದ್ದರು. ಆರೋಪಿಗಳ ಬಂಧನದಿಂದ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 8 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ ಗಿರಿನಗರ ಠಾಣೆ ಪೊಲೀಸರಿಗೆ ಮನಕಲಕುವ ವಿಷಯವೊಂದು ಗೊತ್ತಾಗಿದೆ.</p>.<p>‘ಕ್ಯಾನ್ಸರ್ನಿಂದ ಬಳಲುತ್ತಿದ್ದ ತನ್ನ ಸ್ನೇಹಿತನ ಪತ್ನಿಯ ಚಿಕಿತ್ಸೆಗಾಗಿ ಬೈಕ್ ಕಳ್ಳತನ ಮಾಡುತ್ತಿರುವುದಾಗಿ ಒಬ್ಬ ಆರೋಪಿ ತಪ್ಪೊಪ್ಪಿಕೊಂಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.</p>.<p>ಹೆಸರಘಟ್ಟದ ನಿವಾಸಿ ಅಶೋಕ್(30) ಮತ್ತು ಆತನ ಸಹಚರ ಸತೀಶ್ ಅಲಿಯಾಸ್ ಸತ್ಯ(34) ಎಂಬುವವರನ್ನು ಪೊಲೀಸರು ಬಂಧಿಸಿದ್ದು, ಅವರಿಂದ ₹10.71 ಲಕ್ಷ ಮೌಲ್ಯದ 8 ದ್ವಿಚಕ್ರ ವಾಹನ ಜಪ್ತಿ ಮಾಡಿಕೊಂಡಿದ್ದಾರೆ. ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಾಫ್ಟ್ವೇರ್ ಎಂಜಿನಿಯರ್ ಮನೆ ಎದುರು ನಿಲುಗಡೆ ಮಾಡಿದ್ದ ಬೈಕ್ ಕಳ್ಳತನ ಆಗಿತ್ತು. ಅವರು ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.</p>.<p>‘ಆರೋಪಿ ಅಶೋಕ್ ಪತ್ನಿಯಿಂದ ದೂರವಾದ ಮೇಲೆ ಸ್ನೇಹಿತನ ಮನೆಯಲ್ಲಿ ನೆಲೆಸಿದ್ದರು. ಆಗ ಸ್ನೇಹಿತನ ಪತ್ನಿಗೆ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಆದರೆ, ಆಕೆಯ ಚಿಕಿತ್ಸೆ ವೆಚ್ಚ ಭರಿಸಲು ಸ್ನೇಹಿತನಿಂದ ಸಾಧ್ಯವಾಗುತ್ತಿಲ್ಲ ಎಂಬುದು ತಿಳಿದಿತ್ತು. ಹಣ ಹೊಂದಿಸಲು ಅಶೋಕ್ ಮುಂದಾಗಿದ್ದರು. ಎಲ್ಲಿಯೂ ಸಾಲ ಸಿಕ್ಕಿರಲಿಲ್ಲ. ನಂತರ, ಆರೋಪಿ ತನ್ನ ಸಹಚರ ಸತೀಶ್ ಜತೆ ಸೇರಿ ಕೆಟಿಎಂ ಮತ್ತು ಪಲ್ಸರ್ ಬೈಕ್ಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು. ಬಳಿಕ ಅವುಗಳನ್ನು ಗ್ರಾಮಾಂತರ ಭಾಗದಲ್ಲಿ ಕಡಿಮೆ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದರು. ಅದರಿಂದ ಬಂದ ಹಣವನ್ನು ಚಿಕಿತ್ಸೆಗೆ ಕೊಡಲು ಮುಂದಾಗಿದ್ದರು. ಆರೋಪಿಗಳ ಬಂಧನದಿಂದ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 8 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>