<p><strong>ಬೆಂಗಳೂರು</strong>: ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಭಾಷ್ಯಂ ವೃತ್ತದಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಅವರು ಗಾಯಗೊಂಡಿದ್ದಾರೆ.</p>.<p>ರಾಜನ್ (94) ಗಾಯಗೊಂಡವರು.</p>.<p>‘ರಾಜನ್ ಅವರು ಬುಧವಾರ ಬೆಳಿಗ್ಗೆ 10.30ರ ಸುಮಾರಿಗೆ ರಸ್ತೆ ದಾಟುತ್ತಿದ್ದರು. ವೇಗವಾಗಿ ಬಂದ ದ್ವಿಚಕ್ರ ವಾಹನ, ಅವರಿಗೆ ಡಿಕ್ಕಿ ಹೊಡೆಯಿತು. ಸವಾರ ಬೈಕ್ ನಿಲ್ಲಿಸದೇ ಪರಾರಿ ಆಗಿದ್ದಾನೆ. ಈ ದೃಶ್ಯ ಜಂಕ್ಷನ್ನಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಅದೇ ಮಾರ್ಗದಲ್ಲಿ ಬೈಕ್ನಲ್ಲಿ ಬರುತ್ತಿದ್ದ ಸಂಚಾರ ವಿಭಾಗದ ಕಾನ್ಸ್ಟೆಬಲ್ ಮಲ್ಲಿಕಾರ್ಜುನ್ ಎಂಬುವವರು ಸ್ಥಳೀಯರ ನೆರವಿನಿಂದ ಗಾಯಾಳುವನ್ನು ಆಟೊದಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ದಟ್ಟಣೆಯಿಂದ ಆಂಬುಲೆನ್ಸ್ ಬರುವುದು ತಡವಾಗಲಿದೆ ಎಂದು ಆಟೊದಲ್ಲಿ ಕರೆದೊಯ್ದು ಮಾನವೀಯತೆ ತೋರಿದರು’ ಎಂದು ಸ್ಥಳೀಯರು ತಿಳಿಸಿದರು.</p>.<p>‘ರಾಜನ್ ಅವರಿಗೆ ಚಿಕಿತ್ಸೆ ಮುಂದುವರೆದಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಸವಾರನ ಪತ್ತೆಗೆ ಶೋಧ ನಡೆಯುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಭಾಷ್ಯಂ ವೃತ್ತದಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಅವರು ಗಾಯಗೊಂಡಿದ್ದಾರೆ.</p>.<p>ರಾಜನ್ (94) ಗಾಯಗೊಂಡವರು.</p>.<p>‘ರಾಜನ್ ಅವರು ಬುಧವಾರ ಬೆಳಿಗ್ಗೆ 10.30ರ ಸುಮಾರಿಗೆ ರಸ್ತೆ ದಾಟುತ್ತಿದ್ದರು. ವೇಗವಾಗಿ ಬಂದ ದ್ವಿಚಕ್ರ ವಾಹನ, ಅವರಿಗೆ ಡಿಕ್ಕಿ ಹೊಡೆಯಿತು. ಸವಾರ ಬೈಕ್ ನಿಲ್ಲಿಸದೇ ಪರಾರಿ ಆಗಿದ್ದಾನೆ. ಈ ದೃಶ್ಯ ಜಂಕ್ಷನ್ನಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಅದೇ ಮಾರ್ಗದಲ್ಲಿ ಬೈಕ್ನಲ್ಲಿ ಬರುತ್ತಿದ್ದ ಸಂಚಾರ ವಿಭಾಗದ ಕಾನ್ಸ್ಟೆಬಲ್ ಮಲ್ಲಿಕಾರ್ಜುನ್ ಎಂಬುವವರು ಸ್ಥಳೀಯರ ನೆರವಿನಿಂದ ಗಾಯಾಳುವನ್ನು ಆಟೊದಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ದಟ್ಟಣೆಯಿಂದ ಆಂಬುಲೆನ್ಸ್ ಬರುವುದು ತಡವಾಗಲಿದೆ ಎಂದು ಆಟೊದಲ್ಲಿ ಕರೆದೊಯ್ದು ಮಾನವೀಯತೆ ತೋರಿದರು’ ಎಂದು ಸ್ಥಳೀಯರು ತಿಳಿಸಿದರು.</p>.<p>‘ರಾಜನ್ ಅವರಿಗೆ ಚಿಕಿತ್ಸೆ ಮುಂದುವರೆದಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಸವಾರನ ಪತ್ತೆಗೆ ಶೋಧ ನಡೆಯುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>